ಗದಗ | ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ: ಡಾ.‌ ಯತೀಂದ್ರ ಸಿದ್ಧರಾಮಯ್ಯ

Date:

“ಗ್ರಾಮಾಭಿವೃದ್ಧಿಗೆ ಕೆಳ ಹಂತದ ವಾರ್ಷಿಕ ಯೋಜನೆಗಳು ಅತ್ಯಂತ ಸಹಕಾರಿಯಾಗಿವೆ. ವಿಕೇಂದ್ರೀಕರಣ ವ್ಯವಸ್ಥೆಯಿಂದ ಹಾಗೂ ಸರಿಯಾದ ಯೋಜನೆಗಳಿಂದ ಮಹತ್ತರ ಅಭಿವೃದ್ಧಿ ಸಾಧನೆ ಸಾಧ್ಯ” ಎಂದು ವಿಧಾನ ಪರಿಷತ್ ಶಾಸಕ ಡಾ.‌ ಯತೀಂದ್ರ ಸಿದ್ಧರಾಮಯ್ಯ ಅವರು ಅಭಿಪ್ರಾಯ ಪಟ್ಟರು.

ಗದಗ ಪಟ್ಟಣದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೊರಿಯಂ ಹಾಲ್ ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಕೆಳಹಂತದ ಯೋಜನೆಗಳೊಂದಿಗೆ ವಾರ್ಷಿಕ ಜಿಲ್ಲಾ ಅಭಿವೃದ್ಧಿ ಯೋಜನೆಯನ್ನು ತಯಾರಿಸುವ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

“ಮಾಜಿ ಶಾಸಕರು ಡಿ ಆರ್ ಪಾಟೀಲ ಅವರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಅಪಾರ ಅನುಭವ ಹಾಗೂ ಅಭಿವೃದ್ಧಿ ಮುಂದಾಲೋಚನೆ ಉಳ್ಳವರು. ನನ್ನ ತಂದೆಯವರಾದ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದಾರಾಮಯ್ಯ ಅವರು ಡಿ ಆರ್ ಪಾಟೀಲ ಅವರನ್ನು ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರನ್ನಾಗಿ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ ಆರ್ ಪಾಟೀಲ ಅವರ ಅಪಾರ ಅನುಭವದಿಂದ ವಿಕೇಂದ್ರೀಕರಣ ವ್ಯವಸ್ಥೆ ಹಾಗೂ ಯೋಜನೆ ತಯಾರಿಕೆ ಕರಡು ಪ್ರತಿ ಇಗಾಗಲೇ ಗದಗ ಜಿಲ್ಲೆಯಲ್ಲಿ ಸಿದ್ದವಾಗಿದೆ. ಇದೇ ತರಹ ಮೈಸೂರಲ್ಲಿ ಸಹ ಅಭಿವೃದ್ಧಿ ಯೋಜನೆಯ ಕರಡು ತಯಾರಿಸಲಾಗುವುದು” ಎಂದು ಹೇಳಿದರು.

“ವಾರ್ಡ, ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ತಮ್ಮ ಗ್ರಾಮದಲ್ಲಿ ಅಗತ್ಯವಾದ ಅಭಿವೃದ್ಧಿ ಕೆಲಸಗಳ ಕುರಿತು ಯೋಜನಾ ವರದಿ ಕರಡು ಸಿದ್ದಪಡಿಸುವುದು. ತಾಪಂ, ಜಿಪಂ ಮೂಲಕ ಸರ್ಕಾರಕ್ಕೆ ಕಳುಹಿಸಿ, ಆಧ್ಯತೆ ಆಧಾರದಲ್ಲಿ ಗ್ರಾಮಗಳ ಯೋಜನೆಗಳ ಅನುಷ್ಠಾನಕ್ಕೆ ಇದು ಸಹಕಾರಿ ಆಗಲಿದೆ. ಇದೊಂದು ಉತ್ತಮ ಕಾರ್ಯವಾಗಿದೆ” ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಅಭಿಪ್ರಾಯ ಪಟ್ಟರು.

ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ ಆರ್ ಪಾಟೀಲ ಅವರು ಪ್ರಾಸ್ತಾವಿಕ ಮಾತನಾಡಿ, “ವಿಕೇಂದ್ರೀಕರಣ ವ್ಯವಸ್ಥೆ ಗ್ರಾಮ ಮಟ್ಟದಿಂದ ಬಲವರ್ದನೆಯಾಗಬೇಕು. ಆಗ ಮಾತ್ರ ಗ್ರಾಮಗಳು ಅಭಿವೃದ್ಧಿ ಯೋಂದಿಗೆ ಆರ್ಥಿಕ ಸದೃಡತೆ ಸಾಧಿಸಲಿವೆ. ರಾಜ್ಯದ ಎಲ್ಲ ಗ್ರಾಮಗಳಲ್ಲೂ ಸಹ ವಾರ್ಷಿಕ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರಿಸಿ ಮುಂದಿನ ಹಂತಕ್ಕೆ ಕಳುಹಿಸಿಕೊಡಬೇಕು. ಅದನ್ನು ಸಹ ನಿಗದಿಪಡಿಸಿದ ಅವದಿಯೋಳಗೆ ಪುರ್ಣವಾಗಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಡಿಜಿಟಲ್ ವಂಚನೆ ಬಗ್ಗೆ ಜಾಗೃತಿ ಮೂಡಿಸಲು ಯುವಕರು ಮುಂದಾಗಬೇಕು: ಮುಹಮ್ಮದ್ ಇಸ್ಮಾಯಿಲ್

ಕಾರ್ಯಾಗಾರದಲ್ಲಿ ಹುಬ್ಬಳ್ಳಿಯ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಅಶೋಕ ಮಂದಾಲಿ, ಸುಜಾತ ದೊಡ್ಮನಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಜಿ ಪಂ ಉಪ ಕಾರ್ಯದರ್ಶಿ ಸಿಆರ್ ಮುಂಡರಗಿ, ಎ ಎ ಕಂಬಾಳಿಮಠ, ಎಂ ವಿ ಚಳಗೇರಿ ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ ಗಳು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...