ಗದಗ | ಮಹರ್ಷಿ ವಾಲ್ಮೀಕಿ ಜಯಂತಿ

Date:

ಮಹರ್ಷಿ ವಾಲ್ಮೀಕಿ ಅವರು ರಚಿಸಿದ ರಾಮಾಯಣವನ್ನು ಪ್ರತಿಯೊಬ್ಬರೂ ಓದಿ ಅದರಲ್ಲಿನ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ ಸದಸ್ಯ ಎಸ್ ವಿ ಸಂಕನೂರ ಹೇಳಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರಗಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು.

“ದೇಶದ ಇತಿಹಾಸದಲ್ಲಿ ಪ್ರಥಮವಾಗಿ ಕಾವ್ಯ ರೂಪದಲ್ಲಿರುವ ದೊಡ್ಡ ಗ್ರಂಥ ರಾಮಾಯಾಣ. ಇದು ಪ್ರಥಮ ಗ್ರಂಥವಾಗಿದ್ದು, ಇದನ್ನು ರಚಿಸಿದ ಮಹರ್ಷಿ ಅವರನ್ನು ಆದಿಕವಿ ಎನ್ನುತ್ತೇವೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಾಲ್ಮೀಕಿ ಅವರ ಜೀವನ ಚರಿತ್ರೆಯನ್ನು ನಾವು ಅರಿತುಕೊಳ್ಳಬೇಕು. ಅವರ ಜೀವನದಲ್ಲಿ ನಡೆದಂತಹ ಘಟನೆಯನ್ನು ನೆನಪಿಸಿಕೊಳ್ಳುತ್ತಾ ಅವರ ಜೀವನ ನಿರ್ವಹಣೆಗಾಗಿ ಮಾಡುತ್ತಿದ್ದ ಬೇಟೆಗಾರಿಕೆ ವೃತ್ತಿಯಿಂದ ಮಹರ್ಷಿಗಳು ಹೇಗಾದರು ಎಂಬುದನ್ನು ನಾವು ಅರಿತುಕೊಳ್ಳಬೇಕಾಗಿದೆ” ಎಂದು ತಿಳಿಸಿದರು.

“ಮನುಷ್ಯ ಸಹಜವಾಗಿ ತಪ್ಪುಗಳನ್ನು ಮಾಡುತ್ತಾನೆ. ಆ ತಪ್ಪುಗಳನ್ಬು ತಿದ್ದಿ ನಡೆಯುವುದೇ ಮುಖ್ಯ. ನಾರದ ಮುನಿಗಳ ಹಿತೋಪದೇಶದಿಂದ ತನ್ನ ತಪ್ಪುಗಳನ್ನು ತಿದ್ದಿಕೊಳ್ಳುವ ಮೂಲಕ ಬದಲಾದ ರತ್ನಾಕರರು ಮಹರ್ಷಿ ವಾಲ್ಮೀಕಿಯಾದರು. ಅವರು ರಚಿಸಿದ ರಾಮಾಯಣವನ್ನೂ ಪ್ರತಿಯೊಬ್ಬರು ಒದಬೇಕು. ಅದರಲ್ಲಿನ ಅಣ್ಣ-ತಮ್ಮ, ಗಂಡ-ಹೆಂಡತಿಯ ಸಂಬಂಧಗಳ ಕುರಿತು ಉಲ್ಲೇಖಿಸಲಾಗಿದ್ದು, ಇದನ್ನು ಅರಿತು ನಾವು ಜೀವನ ನಡೆಸಬೇಕು. ರಾಮಾಯಣವನ್ನು ಮುಖ್ಯವಾಗಿ ಜನ ಪ್ರತಿನಿಧಿಗಳು ಓದಿ ಅರಿತುಕೊಂಡು ರಾಜ ತನ್ನ ಸಾಮ್ರಾಜ್ಯದ ಪ್ರಜೆಗಳ ಜೊತೆ ಯಾವ ರೀತಿ ಸಂಬಂಧಗಳನ್ನು ಹೊಂದಿರಬೇಕು ಎಂಬುದನ್ನು ಅರುತುಕೊಳ್ಳಬೇಕಾಗಿದೆ” ಎಂದರು.

“ಮಹಾತ್ಮ ಗಾಂಧೀಜಿಯವರು ಕೂಡ ರಾಮಾಯಣದಿಂದ ಪ್ರಭಾವಿತರಾಗಿ ರಾಮ ರಾಜ್ಯದ ಕನಸು ಕಂಡಿದ್ದರು. ರಾಮಾಯಣ ಹಾಗೂ ವಾಲ್ಮೀಕಿ ಅವರ ಜೀವನದ ತತ್ವಾದರ್ಶಗಳನ್ನು ಅರಿತುಕೊಂಡು ಆದರ್ಶ, ಸುಂಸ್ಕೃತ ಜೀವನ ನಡೆಸಬೇಕು. ವ್ಯಕ್ತಿ ಸುಂಸ್ಕೃತವಾದರೆ ಸಮಾಜ ಸುಧಾರಣೆಯಾಗುತ್ತದೆ. ಆದ್ದರಿಂದ ರಾಮಾಯಣವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

“ಆಧುನಿಕ ಯುಗದಲ್ಲಿ ವಿದ್ಯೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ವಿದ್ಯೆಯಿಂದ ಸಮಾಜದಲ್ಲಿನ ಅಸಮಾನತೆ ದೂರ ಮಾಡಬಹುದು. ಸರ್ಕಾರಗಳು ಇಂದು ಪರಿಶಿಷ್ಟರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಬೇಕು. ಈ ಕುರಿತು ಪಾಲಕರು ತಮ್ಮ ಮಕ್ಕಳಿಗೆ ಉತ್ತಮವಾದ ಮಾರ್ಗದರ್ಶನ ನೀಡಿ ಪ್ರೇರಣೆ ನೀಡಬೇಕು” ಎಂದು ಎಸ್ ವಿ ಸಂಕನೂರ ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಹೇಮಾವತಿ ನಾಲೆ ಕಳಪೆ ಕಾಮಗಾರಿ ಆರೋಪ; ರೈತರ ಪ್ರತಿಭಟನೆ

ನಿವೃತ್ತ ನ್ಯಾಯಾಧೀಶ ಡಿ ವೈ ಬಸಾಪುರ, ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ‌ ಎಸ್ ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಮಹರ್ಷಿ ವಾಲ್ಮೀಕಿ ಸಂಘದ ಜಿಲ್ಲಾ ಅಧ್ಯಕ್ಷ  ಬಸವರಾಜ ಬೆಳದಡಿ, ತಾಲೂಕು ಅಧ್ಯಕ್ಷ ಆದಪ್ಪನವರ, ಸಮುದಾಯದ ಗಣ್ಯರು, ಮುಖಂಡರು, ಸಾರ್ವಜನಿಕರು, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಪಂಗಡದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...