ಗದಗ | ಮನರೇಗಾ ಜಾಬ್ ಕಾರ್ಡ್‌ಗೆ ಇ-ಕೆವೈಸಿ ಮಾಡಲು ಶ್ರಮ ವಹಿಸಿ : ಚಂದ್ರಶೇಖರ್ ಕಂದಕೂರ

Date:

“ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಗೆ ಇ-ಕೆವೈಸಿ ವ್ಯಾಲಿಡೇಶನ್‌ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ ಸಿಬ್ಬಂದಿಗಳಿಗೆ ಸೂಚಿಸಿದರು.

ಈ ಕಾರ್ಯಕ್ಕೆ ಎಲ್ಲಾ ನರೇಗಾ ಕೂಲಿಕಾರರು ಸಕ್ರಿಯವಾಗಿ ಭಾಗವಹಿಸಿ, ಅಭಿಯಾನವನ್ನು ಯಶಸ್ವಿಗೊಳಿಸಬೇಕು” ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಬಿ. ಕಂದಕೂರ ಎಂದು ಅವರು ಕರೆ ನೀಡಿದರು.

ಗದಗ ಜಿಲ್ಲೆಯ ರೋಣ ತಾಲೂಕ ಪಂಚಾಯತ ಸಭಾಂಗಣದಲ್ಲಿ ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ಮನರೇಗಾ ಸಿಬ್ಬಂದಿಗಳಾದ ಜಿಕೆಎಂ, ಬಿಎಫ್‌ಟಿ, ಇಂಜಿನಿಯರ್‌ಗಳು ಮತ್ತು ಇತರ ಸಿಬ್ಬಂದಿಗಳ ಸಭೆಯನ್ನುದ್ದೇಶಿಸಿ ಮಾತನಾಡಿರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 “ಮನರೇಗಾ ಯೋಜನೆಯ ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯವು ತುರ್ತಾಗಿ ನಡೆಯುತ್ತಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಕ್ರಿಯ ಕುಟುಂಬಗಳ ಜಾಬ್ ಕಾರ್ಡ್‌ ವ್ಯಾಲಿಡೇಶನ್‌ ಅನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು” ಎಂದು ಒತ್ತಿ ಹೇಳಿದರು.

“ಮನರೇಗಾ ಯೋಜನೆಯಡಿ ನೋಂದಾಯಿತ ಕೂಲಿಕಾರರ ಮಾಹಿತಿಯನ್ನು ಎನ್‌ಎಂಎಂಎಸ್ (ನರೇಗಾ ಮೊಬೈಲ್ ಮಾನಿಟರಿಂಗ್ ಸಿಸ್ಟಮ್) ತಂತ್ರಾಂಶದಲ್ಲಿ ಇ-ಕೆವೈಸಿ ಮೂಲಕ ಅಪ್‌ಡೇಟ್ ಮಾಡಲಾಗುತ್ತಿದೆ. ಈಗಾಗಲೇ ಗ್ರಾಮ ಮಟ್ಟದಲ್ಲಿ ಜನರಿಗೆ ಈ ಕುರಿತು ಜಾಗೃತಿ ಮೂಡಿಸಲಾಗಿದ್ದು, ರೋಣ ಮತ್ತು ಗಜೇಂದ್ರಗಡ ತಾಲೂಕುಗಳ ನರೇಗಾ ಶಾಖೆಯ ಐಇಸಿ ವಿಭಾಗವು ತಯಾರಿಸಿದ ಧ್ವನಿ ಮುದ್ರಿಕೆಯನ್ನು ಕಸ ಸಂಗ್ರಹ ವಾಹನಗಳ ಮೂಲಕ ಪ್ರಸಾರ ಮಾಡಲು ಸೂಚಿಸಲಾಗಿದೆ” ಎಂದರು.

“ಇನ್ನು ಗ್ರಾಮ ಪಂಚಾಯಿತಿ ಮಟ್ಟದ ಸಿಬ್ಬಂದಿಗಳಿಗೆ ಇ-ಕೆವೈಸಿ ಅಪ್‌ಡೇಟ್ ಕಾರ್ಯಕ್ಕೆ ತರಬೇತಿ ನೀಡಲಾಗಿದ್ದು, ಈ ಮೂಲಕ ಪ್ರಗತಿ ಸಾಧಿಸಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಗ್ರಾಮಗಳಲ್ಲಿ ಕೂಲಿಕಾರರು ವೈಯಕ್ತಿಕ ಕೆಲಸಕ್ಕಾಗಿ ಮನೆಯಿಂದ ಹೊರಗಡೆ ಇರುವುದರಿಂದ, ಮನೆ-ಮನೆ ಭೇಟಿಯ ಸಂದರ್ಭದಲ್ಲಿ ಮೇಟ್‌ಗಳು ಅಥವಾ ನರೇಗಾ ಸಿಬ್ಬಂದಿಗೆ ಅವರು ಲಭ್ಯವಾಗದಿರುವುದು ಇ-ಕೆವೈಸಿ ಪ್ರಕ್ರಿಯೆಯನ್ನು ನಿಧಾನಗೊಳಿಸಿದೆ. ಇದರಿಂದ ಭವಿಷ್ಯದಲ್ಲಿ ಕೂಲಿಕಾರರಿಗೆ ಕೆಲಸ ನೀಡುವಾಗ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ” ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.

“ಗ್ರಾಮ ಪಂಚಾಯಿತಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮೇಟ್‌ಗಳ ಮೂಲಕವೂ ಈ ಸೌಲಭ್ಯವನ್ನು ಪಡೆಯಬಹುದು. “ಇ-ಕೆವೈಸಿ ಯೋಜನೆಯು ಮನರೇಗಾ ಕಾರ್ಯಕ್ರಮದ ಪಾರದರ್ಶಕ ಅನುಷ್ಠಾನಕ್ಕೆ ಮಹತ್ವದ ಹೆಜ್ಜೆಯಾಗಿದೆ. ಆದ್ದರಿಂದ, ಎಲ್ಲಾ ಕೂಲಿಕಾರರು ಮತ್ತು ಕಾಯಕ ಬಂಧುಗಳು ಕಡ್ಡಾಯವಾಗಿ ಇ-ಕೆವೈಸಿ ಅಪ್‌ಡೇಟ್ ಮಾಡಿಸಿಕೊಳ್ಳಬೇಕು” ಎಂದು ಒತ್ತಾಯಿಸಿದರು.

“ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಯ ಪಿಡಿಓ, ಕಾರ್ಯದರ್ಶಿ, ಡಿಇಒ, ಬಿಎಫ್‌ಟಿ, ಜಿಕೆಎಂ ಅವರನ್ನು ಸಂಪರ್ಕಿಸಲು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಈ ಅಭಿಯಾನವನ್ನು ಯಶಸ್ವಿಗೊಳಿಸಲು ಎಲ್ಲರೂ ಸಹಕರಿಸಬೇಕು” ಸಭೆಯಲ್ಲಿ ಕರೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...