ಗದಗ | ಜೂನ್‌ ಅಂತ್ಯದವರೆಗೂ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನರೇಗಾ ಕೆಲಸ; ಪಿಡಿಒ ಈಶ್ವರಗೌಡ ಪಾಟೀಲ

Date:

ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಜೂನ್ ಅಂತ್ಯದ ವರೆಗೂ ಕೆಲಸ ಕೊಡೋಣ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಈಶ್ವರಗೌಡ ಪಾಟೀಲ ಹೇಳಿದರು.‌

ಗದಗ ಜಿಲ್ಲೆಯ ರೋಣ ತಾಲೂಕಿನ ಡ.ಸ ಹಡಗಲಿ ಗ್ರಾಮ ಪಂಚಾಯತಿಯಲ್ಲಿ ಕಾಯಕ ಬಂಧುಗಳ ಸಭೆಯಲ್ಲಿ ಮಾತನಾಡಿದ ಅವರು, ದುಡಿಯುವ ವರ್ಗಕ್ಕೆ ಕೆಲಸ ಕೊಡುವ ಮೂಲಕ ಅತಿ ಹೆಚ್ಚು ಮಾನವ ದಿನಗಳ ಸೃಜನೆ ಮಾಡುವ ಗುರಿಯನ್ನು ಹೊಂದೊಣ. ಈ ಹಿನ್ನಲೆ ತಾವೇಲ್ಲರೂ ಶ್ರಮ ವಹಿಸಿ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಎಂದು ಹೇಳಿದರು.

ಪ್ರತೀ ಸೋಮವಾರ ಕೆಲಸದ ಬೇಡಿಕೆ ಸಲ್ಲಿಸಿದ ಕೂಲಿಕಾರರ ವಿವರಗಳನ್ನು ಎಂಐಎಸ್‌ನಲ್ಲಿ ದಾಖಲಿಸುವುದು ಮತ್ತು ಎರಡು ದಿನಗಳೊಳಗೆ ಕೆಲಸವನ್ನು ಒದಗಿಸುವದು ನಮ್ಮ ಕೆಲಸ. ಕೆಲಸದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ ಮಾಡುವದು ಸಿಬ್ಬಂದಿಗಳ ಕೆಲಸ ತಪ್ಪದೇ ಮಾಡಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊದಲ ಮಕ್ಕಳಿಗೆ ಸರಿಯಾದ ಸೌಲಭ್ಯಗಳು ಇಲ್ಲದೇ ಇರುವ  ಕಾರಣ ಮಕ್ಕಳಿಗೆ ಸ್ವಲ್ಪ ತೊಂದರೆ ಆಗುತ್ತಿತ್ತು, ಈ ಬಾರಿ ಗ್ರಾಮದಲ್ಲಿ ಕೂಸಿನ ಮನೆಯನ್ನು ತೆರಯಲಾಗಿದ್ದು ಪಾಲಕರಿಗೆ ಮಕ್ಕಳನ್ನು ಅಲ್ಲಿ ಬಿಟ್ಟು ಹೊಗಲು ತಿಳಿಸುವ ಕೆಲಸ ಮಾಡಿ ಈ ಹಿನ್ನೆಲೆ ನಿಮ್ಮ ಸಹಕಾರ ಮುಖ್ಯ ಎಂದರು.

ಎನ್ಎಂಎಂಎಸ್ ಆ್ಯಪ್ ಬಗ್ಗೆ ಮಾಹಿತಿ ನೀಡಿ ಕಾಯಕ ಬಂಧುಗಳು ಎನ್ಎಂಎಂಎಸ್ ಆ್ಯಪ್‌ನ ಮೂಲಕ ಹಾಜರಾತಿ ಹಾಕಿ, ಕೆಲಸದಲ್ಲಿ ಯಾವುದೇ ರೀತಿಯ ವಿಳಂಬವಾಗುದಂತೆ ನೋಡಿಕೊಳ್ಳಬೇಕು. ಪ್ರತಿ ಕೂಲಿಗಾರರಿಗೆ ನರೇಗಾ ಕೂಲಿ ಯೋಜನೆಯಡಿ 316 ರೂ. ಇದೆ ಹಾಗಾಗಿ ಜನರಿಗೆ ತಿಳಿವಳಿಕೆ ನೀಡುವುದು ಅವರನ್ನು ಹೆಚ್ಚು ಹೆಚ್ಚು ಕೆಲಸಕ್ಕೆ ಬರುವ ಹಾಗೆ ಮಾಡುವ ಜವಾಬ್ದಾರಿ ನಿಮ್ಮದಾಗಿರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಸವರಾಜ ತಳವಾರ, ಐಇಸಿ ಮಂಜುನಾಥ, ಬಿಎಫ್‌ಟಿ ಪ್ರಕಾಶ ಅಂಬಕ್ಕಿ ಹಾಗೂ ಡ.ಸ ಹಡಗಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...