ಗದಗ | ಟಕ್ಕೇದ ದರ್ಗಾದಿಂದ ಅಸ್ತಮಾ ರೋಗಿಗಳಿಗೆ ಔಷಧ ವಿತರಣೆ

Date:

ಪ್ರಸ್ತುದಲ್ಲಿ ಯುವಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ದುಶ್ಚಟಕ್ಕೆ ಬಲಿಯಾಗದಂತೆ ಪಾಲಕರು ಎಚ್ಚರ ವಹಿಸಬೇಕು ಎಂದು ಟಕ್ಕೇದ ದರ್ಗಾದ ಪೀಠಾಧಿಪತಿ ಹಜರತ್‌ ನಿಜಾಮುದ್ದೀನ್ ಷಾ ಆಶ್ರಫಿ ಮಕಾನದಾರ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಡಣದಲ್ಲಿ ಟಕ್ಕೇದ ದರ್ಗಾದಲ್ಲಿ ಹಮ್ಮಿಕೊಂಡಿದ್ದ ಅಸ್ತಮಾ ರೋಗಿಗಳಿಗೆ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಧೂಮಪಾನ ಮಾಡುವುದರಿಂದ ಶ್ವಾಸಕೋಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದರಿಂದ ಕಫ ಉಂಟಾಗಿ ಅಸ್ತಮಾ ರೋಗ ಬರುತ್ತದೆ. ಬೀಡಿ, ಸೀಗರೇಟ್‌ನಂತಹ ದುಶ್ಚಟಗಳಿಂದ ದೂರವಿರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ ಶಿವಕುಮಾರ ಹುದ್ದಾರ ಮಾತನಾಡಿ, “ಅಸ್ತಮಾ ಎನ್ನುವುದು ಕೆಲವು ಜನರನ್ನು ಬಾಲ್ಯದಿಂದ ಹಿಡಿದು ಜೀವಮಾನವಿಡಿ ಕಾಡುತ್ತಲೇ ಇರುತ್ತದೆ. ಇದು ಅನುವಂಶೀಯವಾಗಿಯೂ ಬರಬಹುದು ಅಥವಾ ಬೇರೆ ಕಾರಣಗಳಿಂದಲೂ ಬರಬಹುದಾಗಿದೆ. ಅಸ್ತಮಾ ಇರುವಂತಹ ಜನರು ಕೆಲವೊಂದು ಆಹಾರ ಕ್ರಮದಲ್ಲಿ ಬದಲಾವಣೆ ಮಾಡಿಕೊಂಡರೆ ಅಸ್ತಮಾ ರೋಗವನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಗುತ್ತದೆ. ಅದರಲ್ಲೂ ಅಸ್ತಮಾ ಅತಿಯಾಗಿರುವಂತಹ ರೋಗಿಗಳು ಕೆಲವೊಂದು ಆಹಾರಗಳನ್ನು ಕಡೆಗಣಿಸಲೇಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ ಸರ್ಕಾರ ಮಕ್ಕಳ ವಿಚಾರದಲ್ಲಿ ಚೆಲ್ಲಾಟ ಆಡುತ್ತಿದೆ: ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ

ಇದೇ ಸಂದರ್ಭದಲ್ಲಿ ಸುತ್ತಮುತ್ತಲಿನಿಂದ ಆಗಮಿಸಿದ್ದವರಿಗೆ 5:15ಕ್ಕೆ ಮೃಗಶಿರ ಮಳೆ ಪ್ರವೇಶಿಸುವ ವೇಳೆ ದರ್ಗಾದಿಂದ ಔಷಧಿಯನ್ನು ವಿತರಣೆ ಮಾಡಲಾಯಿತು.

ಸಾಹಿತಿ ಎಸ್ ಐ ಪತ್ತಾರ ಮಾತನಾಡಿದರು. ಮಾಜಿ ಪುರಸಭಾ ಸದಸ್ಯ ಎಂ ಎಸ್ ಮಕನದಾರ, ಅಂಜುಮಾನ್ ಇಸ್ಲಾಂ ಕಮೀಟಿ ಕಾರ್ಯದರ್ಶಿ ಮಾಸುಮಲಿ‌ ಮದಗಾರ, ಎಸ್ ಎಸ್ ನರೇಗಲ್ಲ, ಮೈನು ಮಕಾನದಾರ, ಮುರ್ತುಜಖಾದ್ರಿ ಮದಗಾರ, ಪಾಷಾ ಹವಾಲ್ದಾರ್, ಸೇರಿದಂತೆ ಸುತ್ತಮುತ್ತಲಿನ ಭಕ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...