ಗದಗ | ಅತಿವೃಷ್ಟಿಯಿಂದಾದ ಹಾನಿಯ ಕುರಿತು ಸಭೆ; ಮುಂಜಾಗೃತಾ ಕ್ರಮಕ್ಕೆ ಡಿಸಿ ಸೂಚನೆ

Date:

ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಗದಗ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಹಾಗೂ ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಅವರು ಸೂಚಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

“ಅತಿವೃಷ್ಟಿಯಿಂದ ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್‌ಗಳನ್ನು ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದಲ್ಲಿ ಕೂಡಲೇ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದ್ದು, ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾಧಿತವಾಗುವ ಹಳ್ಳಿಗಳೆಂದು ಗುರುತಿಸಲಾಗಿದ್ದು, ಅಲ್ಲಿಯೂ ಕೂಡಾ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗಬೇಕು” ಎಂದು ಸೂಚಿಸಿದರು.

“ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗಬಹುದಾದ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳಗಳನ್ನು ಗುರುತಿಸಲಾಗಿದೆ. ಅದೇ ತರಹ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳಗಳನ್ನು ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ” ಎಂದರು.

“ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗಬೇಕು” ಎಂದು ಸೂಚಿಸಿದರು.

“ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ಕೂಡಲೇ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳಕ್ಕೆ ಖಂಡನೆ; ಎಸ್‌ಯುಸಿಐ ಪ್ರತಿಭಟನೆ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ ಶಿರಾಳ ಸೇರಿದಂತೆ ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...