ಗದಗ | ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಚ್.ಕೆ.ಪಾಟೀಲ್ ವಾಗ್ಧಾಳಿ

Date:

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಷ್ಟೇ ತೊಡಗಿಸಿಕೊಂಡಿಲ್ಲ. ಚುನಾವಣಾ ಬಾಂಡ್‌ ವಿಚಾರದಲ್ಲಿ ಹಲವರನ್ನು ಶೋಷಣೆ ಮಾಡಿ ಅವರಿಂದ ಹಣ ಪಡೆದಿದೆ. ಜಾಗತಿಕ ಮಟ್ಟದಲ್ಲಿ ಇದು ಅತ್ಯಂತ ದೊಡ್ಡ ಹಗರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ. ಪಾಟೀಲ್ ಆರೋಪ ಮಾಡಿದರು.

ಭ್ರಷ್ಟಾಚಾರದ ಮುಂದಿನ ಹಂತವೇ ಹಿಂಸಾತ್ಮಕ ಶೋಷಣೆ. ದೇಣಿಗೆ ಪಡೆಯಲು ಇಂತಹ ಮಾರ್ಗ ಅನುಸರಿಸಿರುವ ರಾಜಕೀಯ ಪಕ್ಷ ಜಗತ್ತಿನಲ್ಲಿ ಎಲ್ಲೂ ಇಲ್ಲ. ಚುನಾವಣಾ ಬಾಂಡ್‌ ವಿಷಯದಲ್ಲಿ ಪ್ರಧಾನಿ ಮೋದಿ ಅವರ ಸುತ್ತ ಆರೋಪದ ಮೋಡಗಳು ಕವಿದಿವೆ. ಅದಕ್ಕೆ ಚುನಾವಣಾ ಬಾಂಡ್‌ ಮತ್ತು ರಾಜಕೀಯ ಪಕ್ಷಗಳಿಗೆ ಬಂದಿರುವ ಹಣದ ಬಗ್ಗೆ ಚುನಾವಣೆಗೂ ಮುನ್ನ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ರೋಚಕ ಸುದ್ದಿಗಳು ಒಂದೊಂದೇ ಹೊರಬರುತ್ತಿವೆ. ಕೆಲವು ಸುಪ್ರೀಂಕೋರ್ಟ್ ಮೂಲಕ ಬೆಳಕಿಗೆ ಬರುತ್ತಿದ್ದರೆ ಮತ್ತೆ ಕೆಲವು ಬಿಜೆಪಿ ಜತೆಯಲ್ಲಿದ್ದವರ ಮೂಲಕವೇ ಬರುತ್ತಿವೆ. ಮತ್ತೊಂದಿಷ್ಟು ಸಂಘ-ಸಂಸ್ಥೆ, ಮಾಧ್ಯಮಗಳ ಮೂಲಕ ಜನತೆಗೆ ತಿಳಿಯುತ್ತಿದ್ದು, ಬಿಜೆಪಿ ಆಡಳಿತ ನಿಜವಾದ ಬಣ್ಣ ಜನರ ಮುಂದೆ ಕಳಚುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಬಾಂಡ್‌ಗಳ ಮೂಲಕ ಅಧಿಕೃತವಾಗಿಯೇ ಇಷ್ಟು ಹಣ ಪಡೆದಿದ್ದು ಒಂದೆಡೆಯಾದರೆ, ಖಾಸಗಿಯಾಗಿ ಎಷ್ಟು ಪಡೆದಿರಬಹುದು? ಇದರಲ್ಲಿ ಕಪ್ಪುಹಣ ಎಷ್ಟಿರಬಹುದು? ಎಂದು ಜನರು ಯೋಚಿಸುತ್ತಿದ್ದಾರೆ. ಯಾರೆಲ್ಲ ದೊಡ್ಡ ಕುಳಗಳು ಚುನಾವಣಾ ಬಾಂಡ್‌ ಖರೀದಿಸಿದ್ದಾರೆ? ಖರೀದಿಗೂ ಮುನ್ನ ಅವರ ಮೇಲೆ ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಐಟಿ ಪ್ರಕರಣಗಳು ಎಷ್ಟಿದ್ದವು? ಈ ಅಂಶಗಳನ್ನು ಮೊದಲು ಗುರುತಿಸಬೇಕು. ಚುನಾವಣಾ ಬಾಂಡ್‌ ಖರೀದಿಸಿದ ಬಳಿಕ ಅವರ ವಿರುದ್ಧ ಇದ್ದ ಪ್ರಕರಣಗಳ ತನಿಖೆ ಸ್ಥಗಿತಗೊಂಡಿದ್ದರೆ ಅಥವಾ ಪೂರ್ಣಗೊಂಡಿದ್ದರೆ ಅದರ ಮಾಹಿತಿಯನ್ನು ಜನರಿಗೆ ಒದಗಿಸಬೇಕು ಎಂದು ಆಗ್ರಹಿಸಿದರು.

ಮೋದಿ ನೇತೃತ್ವದ ಕಾಂಗ್ರೆಸ್ ಸರ್ಕಾರವು ಆಡಳಿತ ವಿರೋಧಿ ಅಲೆ ತಪ್ಪಿಸಿಕೊಳ್ಳಲು ವಿರೋಧ ಪಕ್ಷಗಳನ್ನು ಹಣಿಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ ಎಂದು ಕಿಡಿಕಾರಿದರು.

10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಇದೀಗ ಚುನಾವಣೆ ನೀತಿ ಸಂಹಿತೆ ಘೋಷಣೆ ಬಳಿಕ ಐಟಿ ಇಲಾಖೆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ 1,800 ರೂ. ತೆರಿಗೆ ಬಾಕಿ ನೋಟಿಸ್ ಕೊಡಿಸಿ, ಚುನಾವಣೆಯಲ್ಲಿ ಭಯ ಮೂಡಿಸುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಅದಕ್ಕೆ ಅಂಜುವುದಿಲ್ಲ ಎಂದು ತಿಳಿಸಿದರು.

ಯಾವುದೇ ದುರುದ್ದೇಶದಿಂದ ಹಾವೇರಿ-ಗದಗ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ದಾವಣಗೆರೆ ಚಾರ್ಲಿಗೆ ಹೋಲಿಕೆ ಮಾಡಿಲ್ಲ ಎಂದು ಸಚಿವ ಎಚ್‌.ಕೆ.ಪಾಟೀಲ ಸ್ಪಷ್ಟಪಡಿಸಿದರು.

ಚುನಾವಣಾ ಸ್ಪರ್ಧಾ ಕಣದಲ್ಲಿ ಹಿರಿಯರು-ಕಿರಿಯರು ಮುಖಾಮುಖಿ ಆದಾಗ ಇದನ್ನು ಬಳಸುವುದು ವಾಡಿಕೆ. ಬೊಮ್ಮಾಯಿ ಅವರೂ ಸೇರಿ ಹಲವರು ಇದನ್ನು ತಪ್ಪಾಗಿ ಅರ್ಥೈಸಿಕೊಂಡಂತಿದೆ. ಆದಾಗ್ಯೂ ಈ ಹೋಲಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ನಾಮಪತ್ರ ಸಲ್ಲಿಕೆ ದಿನಾಂಕವನ್ನು ಶೀಘ್ರ ನಿಗದಿಗೊಳಿಸುತ್ತೇವೆ. ಈ ಬಾರಿ ಅನಂದಸ್ವಾಮಿ ಅವರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದರು.

ಕಾಂಗ್ರೆಸ್‌ ಮುಖಂಡರಾದ ಸಿದ್ದು ಪಾಟೀಲ್‌, ಅಶೋಕ ಮಂದಾಲಿ, ಬಿ.ಬಿ.ಅಸೂಟಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...