ಗದಗ | ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಲು ಸಚಿವರು ಹೆಚ್. ಕೆ. ಪಾಟೀಲರಿಗೆ ಒತ್ತಾಯ

Date:

“ರಾಜ್ಯದ ಎಲ್ಲಾ ಶೋಷಿತ ಸಮುದಾಯಗಳು ಹಾಗೂ ದಲಿತ ಸಮುದಾಯಗಳ ಹಿತದೃಷ್ಟಿಯಿಂದ ಗದಗದಲ್ಲಿ ಬಹುಜನರ ವಿಮೋಚಕ, ದ.ಸಂ.ಸ. ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪ ಸಭಾಭವನ ನಿರ್ಮಿಸಬೇಕು” ಕೆ.ಡಿ.ಎಸ್.ಎಸ್ ಜಿಲ್ಲಾಧ್ಯಕ್ಷ ಬಾಲರಾಜ ಅರಬರ ಒತ್ತಾಯಿಸಿದರು.

ಗದಗ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, (ಅಂಬೇಡ್ಕರವಾದ) ಜಿಲ್ಲಾ ಸಮಿತಿಯ ವತಿಯಿಂದ ದ.ಸಂ.ಸ. ಸಂಸ್ಥಾಪಕರು ಪ್ರೊ. ಬಿ. ಕೃಷ್ಣಪ್ಪ ಹೆಸರಿನಲ್ಲಿ ಸಭಾಭವನ ನಿರ್ಮಿಸುವಂತೆ ಸಚಿವರು ಹೆಚ್. ಕೆ. ಪಾಟೀಲರಿಗೆ ಮನವಿ ಸಲ್ಲಿಸಿ ಮಾತಾಡಿದರು.

“ದಲಿತ ದಮನಿತ ಸಮುದಾಯಗಳ ಪಾಲಿಗೆ ಪ್ರೊ. ಬಿ. ಕೃಷ್ಣಪ್ಪನವರು ವಿಮೋಚಕರಾಗಿದ್ದಾರೆ. ತಮ್ಮ ವಿದ್ಯಾರ್ಥಿ ಜೀವನದಲ್ಲಿ ವೈಚಾರಿಕ ಚಿಂತನೆ ಹಾಗೂ ಪ್ರಗತಿಪರ ಹೋರಾಟಗಳಲ್ಲಿ ನಿರತರಾದ ಬಿ. ಕೃಷ್ಣಪ್ಪನವರು ಅವರು ಕೊನೆಗೆ ಆಯ್ಕೆ ಮಾಡಿಕೊಂಡಿದ್ದು, ಡಾ. ಬಾಬಾಸಾಹೇಬ ಅಂಬೇಡ್ಕರವರ ಸಾಮಾಜಿಕ ಕ್ರಾಂತಿಯ ಹಾದಿ” ಎಂದು ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೃಷ್ಣಪ್ಪನವರು ಆರಂಭದಲ್ಲಿ ಭದ್ರಾವತಿಯಲ್ಲಿ ದಲಿತ ಸಂಘರ್ಷ ಸಮಿತಿಯನ್ನು 1974 ರಲ್ಲಿ ಸ್ಥಾಪನೆಯನ್ನು ಮಾಡಿದರು. ಮುಂದೆ ದಲಿತ ಸಂಘರ್ಷ ಸಮಿತಿ ಊರು, ಕೇರಿ ಹಟ್ಟಿಗಳಲ್ಲಿ ತೊರೆಯಾಗಿ. ಹೊಳೆಯಾಗಿ, ನದಿಯಾಗಿ ಹರಿದು ನಾಡಿನ ಸಮಸ್ತ ದಲಿತ ಸಮುದಾಯಗಳ ಮನೆ, ಮನಗಳಲ್ಲಿ ಸಮುದ್ರವಾಗಿದ್ದು ಇಂದಿಗೆ ಚರಿತ್ರೆ ಭಾಗವೇ ಆಗಿದೆ” ಎಂದರು.

“ದಲಿತರ ಮೇಲಿನ ಶತಮಾನಗಳ ದಬ್ಬಾಳಿಕೆ ದೌರ್ಜನ್ಯಗಳಿಗೆ ಪ್ರತಿರೋಧದ ಶಕ್ತಿಯಾಗಿ ಜಾತಿವಾದಿಗಳ, ಕೋಮುವಾದಿಗಳ ಎದೆಯಲ್ಲಿ ನಡುಕು ಹುಟ್ಟಿಸಿತು. ಧಮನಿತ ಸಮುದಾಯಗಳಲ್ಲಿ ಹೋರಾಟದ ಕಿಚ್ಚು ಹಚ್ಚಿದ್ದಲ್ಲದೇ ಗಂಡಾಳ್ವಿಕೆಗೆ ಒಳಗಾಗಿ ತೀವ್ರ ಲಿಂಗಭೇದಕ್ಕೆ ಒಳಗಾಗಿರುವ ಮಹಿಳಾ ಸಮುದಾಯವನ್ನು ಸಹ ಚಳುವಳಿ ತನ್ನ ಒಡಲಲ್ಲಿರಿಸಿಕೊಂಡಿತು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ವಸತಿ ನಿಲಯದಲ್ಲಿ ಸೌಕರ್ಯಗಳನ್ನು ನೀಡುತ್ತಿಲ್ಲ: ವಿದ್ಯಾರ್ಥಿಗಳು ಆರೋಪ

“ಪ್ರೊ. ಬಿ. ಕೃಷ್ಣಪ್ಪನವರ ನಾಯಕತ್ವದಲ್ಲಿ ದ.ಸಂ.ಸ. ಇಡೀ ರಾಜ್ಯಾದ್ಯಂತ ಕೋಟಿಗಟ್ಟಲೇ ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ನೊಂದ, ಶೋಷಿತ ಸಮುದಾಯಗಳಿಗೆ ವಿಮೋಚನೆ ನೀಡಿರುತ್ತದೆ. ಅಂತಾಹ ಹೋರಾಟಗಾರರಾದ ಪ್ರೊ. ಬಿ. ಕೃಷ್ಣಪ್ಪನವರು ಕರ್ನಾಟಕ ರಾಜ್ಯ ತುಂಬಾ ದ.ಸಂ.ಸ. ಚಳುವಳಿ ನಡೆಸಿ ತಮ್ಮ ಚಳುವಳಿಯನ್ನು ಗದಗನಲ್ಲಿ ದಿನಾಂಕ: 30-04-1997 ರಂದು ಮಹಾಪರಿನಿಬ್ಬಣ ಹೊಂದಿದ್ದಾರೆ. ಆದ ಕಾರಣ ಮಾನ್ಯರಾದ ತಾವು ಪ್ರೊ. ಬಿ. ಕೃಷ್ಣಪ್ಪನವರು ಸ್ಮರಣಾರ್ಥವಾಗಿ ಗದಗಿನಲ್ಲಿ ಸಭಾಭವನ ನಿರ್ಮಿಸಬೇಕು” ಎಂದು ಒತ್ತಾಯಿಸಿದರು.

ಮನವಿ ಸಂದರ್ಭದಲ್ಲಿ ಡಿ ಎಸ್ ಎಸ್ ಮುಖಂಡರು ಕೆಂಚಪ್ಪ, ನಾಗರಾಜ್ ಗೋಕಾವಿ ಇನ್ನೂ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...