ಗದಗ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಬಾಲಕ; ಪ್ರಕರಣ ಮುಚ್ಚಿಹಾಕುವ ಹುನ್ನಾರ?

Date:

ಅಪ್ರಾಪ್ತೆ ಮೇಲೆ ಅಪ್ರಾಪ್ತ ಬಾಲಕನೊಬ್ಬ ಅತ್ಯಾಚಾರ ಎಸಗಿರುವ ದುರ್ಘಟನೆ ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಭಾನುವಾರ ನಡೆದಿದ್ದು, ಸೋಮವಾರ ಪ್ರಕರಣ ದಾಖಲಾಗಿದೆ.

ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಪ್ರಕರಣದ ತನಿಖೆ ತ್ವರಿತವಾಗಿ ನಡೆಯುತ್ತಿಲ್ಲ. ಯಾವುದೇ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡುತ್ತಿಲ್ಲ. ಪ್ರಕರಣವನ್ನು ನಿಧಾನವಾಗಿ ಮುಚ್ಚಿ ಹಾಕುವ ಹುನ್ನಾರ ನಡೆಯುತ್ತಿರುವ ಅನುಮಾನವಿದೆ ಎಂದು ಸಂತ್ರಸ್ತೆಯ ಪೋಷಕರು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈದಿನ.ಕಾಮ್ ಜೊತೆ ಮಾತನಾಡಿರುವ ‌ಸಾಮಾಜಿಕ ಹೋರಾಟಗಾರ ದಾವಲಸಾಬ ತಾಳಿಕೋಟಿ, “ಸತ್ರಸ್ತೆಯ ತಾಯಿ ಕಡು ಬಡತನ ಎದುರಿಸುತ್ತಿದ್ದಾರೆ. ತನ್ನ ಮೂರು ಮಕ್ಕಳೊಂದಿಗೆ ವಾಸವಿದ್ದಾರೆ. ಕೃತ್ಯ ಎಸಗಿದ ಅಪ್ರಾಪ್ತನ ತಂದೆಯಿಂದ ರಾಜಕೀಯ ಒತ್ತಡ ತಂದಿದ್ದು, ಸತ್ರಸ್ತೆಯ ತಾಯಿಗೆ ಪರಿಹಾರವಾಗಿ ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಕುರಿತು ಸತ್ರಸ್ತೆಯ ತಾಯಿ, ʼನಮ್ಮ ಮಗಳಿಗೆ ಆದ ಈ ಕೃತ್ಯ ಮತ್ತೆ ಬೇರೆ ಯಾವುದೇ ಮಕ್ಕಳಿಗೆ ಆಗದಿರಲ್ಲಿ. ಕೃತ್ಯ ಎಸಗಿದವನಿಗೆ ಶಿಕ್ಷೆ ಕೊಡಬೇಕು. ನಮಗೆ ನ್ಯಾಯ ಒದಗಿಸಿ ಕೊಡಬೇಕು. ಸಂತ್ರಸ್ತೆಗೆ ಕೂಡಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡುವುದರ ಜೊತೆಗೆ ಸಂಪೂರ್ಣ ಶಿಕ್ಷಣದ ವ್ಯವಸ್ಥೆ ಮಾಡಬೇಕುʼ ಎಂದು ಸತ್ರಸ್ತೆಯ ತಾಯಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ” ಎಂದರು.

“ಇದೊಂದು ಅಮಾನವೀಯ ನಾಗರಿಕ ಸಮಾಜ ತಲೆ ತಗ್ಗಿಸುವಂತ ಘಟನೆಯಾಗಿದ್ದು, ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಹಾಗೂ ಸರ್ಕಾರ ಪರಿಹಾರ ನೀಡುವುದರ ಜೊತೆಗೆ ನ್ಯಾಯವನ್ನೂ ಒದಗಿಸಬೇಕು. ಈ ಘಟನೆ ನಡೆದು ನಾಲ್ಕೈದು ದಿನಗಳಾದರೂ ಈವರೆಗೆ ಜಿಲ್ಲೆಯ ಯಾವುದೇ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂತ್ರಸ್ತರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಸದೇ ಇರುವುದು ನಾಚೀಕೆಗೇಡಿನ ಸಂಗತಿ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಉಚ್ಚ ನ್ಯಾಯಾಲಯ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ಘಟನೆಗೆ ಸಂಬಂಧಿಸಿದಂತೆ ಈ ದಿನ.ಕಾಮ್‌ ಗದಗ ಎಸ್‌ಪಿ ಅವರನ್ನು ಸಂಪರ್ಕಿಸಿದಾಗ, “ಸಂತ್ರಸ್ತ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯವಾಗಿದ್ದಾರೆ. ಆರೋಪಿಯ ವಿರುದ್ಧ ಐಪಿಸಿ 376 ಎಬಿ ಮತ್ತು ಪೋಕ್ಸೊ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಾಲಕನು ಈ ಸದ್ಯ ಬಾಲಕರ ಬಾಲ ಮಂದಿರಲ್ಲಿದ್ದಾನೆ” ಎಂದು ಪ್ರತಿಕ್ರಿಯಿಸಿದರು.

“ಪ್ರಕರಣವು ತನಿಖೆಯ ಹಂತದಲ್ಲಿದೆ. ಪೂರ್ಣ ಪ್ರಮಾಣದ ತನಿಖೆಯ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...