ಗದಗ | ಎಚ್‌ಐವಿ ಸೋಂಕು ನಿರ್ಮೂಲನಾ ಆಂದೋಲನ

Date:

ತಾಯಿಯಿಂದ ಮಗುವಿಗೆ ಎಚ್‌ಐವಿ ಸೋಂಕು ಹರಡುವಿಕೆ ನಿರ್ಮೂಲನಾ ಆಂದೋಲನ ಹಾಗೂ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಗದಗ ನಗರದ ಹಳೆ ಜಿಲ್ಲಾಸ್ಪತ್ರೆಯ ಡ್ಯಾಪ್ಕ್ಯೂ ಕಚೇರಿಯಲ್ಲಿ ಬುಧವಾರ(ಜ.24) ಹಮ್ಮಿಕೊಳ್ಳಲಾಗಿತ್ತು.

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ (ಪಿಪಿಟಿಸಿಟಿ ಕೇಂದ್ರ) ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮವನ್ನು ಡಾ. ಅರುಂಧತಿ ಕುಲಕರ್ಣಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ಡಾ. ಅರುಂಧತಿ ಕುಲಕರ್ಣಿ, “ಪ್ರತಿಯೊಬ್ಬ ಗರ್ಭಿಣಿಯು ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಎಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಎಚ್.ಐ.ವಿ. ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು. 40 ಜನಗರ್ಭಿಣಿಯರಿಗೆ ಊಡಿ ತುಂಬಿ ಸೀಮಂತ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಯೊಬ್ಬ ಗರ್ಭಿಣಿಯು ಪ್ರತಿ ತ್ರೈಮಾಸಿಕದಲ್ಲಿ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಸೂಚನೆಗಳನ್ನು ಪಾಲಿಸಲು ತಿಳಿಸಿದರು. ಪ್ರತಿದಿನ ಯೋಗ ವ್ಯಾಯಾಮ ಮಾಡುತ್ತ ಚಟುವಟಿಕೆಯಿಂದ ಇರಲು ತಿಳಿಸಿದರು. ಎಚ್.ಐ.ವಿ ಏಡ್ಸ್ ಕಾಯ್ದೆ ಜಾರಿಯಾಗಿದ್ದು, ಎಚ್.ಐ.ವಿ.ಯೊಂದಿಗೆ ಬದುಕುತ್ತಿರುವ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರ ಹಾಗೂ ಖಾಸಗಿ ಕ್ಷೇತ್ರದಲ್ಲಿ ಎಚ್.ಐ.ವಿ ಸಂಬಂಧಿತ ತಾರತಮ್ಯದ ವಿರುಧ್ಧ ಕಾನೂನಿನ ರಕ್ಷಣೆ ನೀಡಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಬಸವರಾಜ ಲಾಳಗಟ್ಟಿ ಮಾತನಾಡಿ, ಎಚ್.ಐ.ವಿ ಕಾರ್ಯಕ್ರಮ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯಗತಗೊಂಡಿದ್ದು, ಎಚ್.ಐ.ವಿ ಸೋಂಕಿತ ಗರ್ಭಿಣಿಯಿಂದ ಹುಟ್ಟಿದ ಮಕ್ಕಳು ಎಚ್.ಐ.ವಿ.ಯಿಂದ ಮುಕ್ತವಾಗಿದ್ದು ಉತ್ತಮ ಪ್ರಗತಿಯಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ನಮ್ಮ ಜಿಲ್ಲೆಯು ಎಚ್.ಐ.ವಿ ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ಎಚ್.ಐವಿ ಸೋಂಕಿನ ಪ್ರಮಾಣ 0.03% ಇದ್ದು, ಎಚ್.ಐ.ವಿ. ಸೋಂಕನ್ನು ಸೊನ್ನೆಗೆತರಲು ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ತಿಳಿಸಿದರು.

ತಾಯಿಯಿಂದ ಮಗುವಿಗೆ ಎಚ್.ಐ.ವಿ ಸೋಂಕಿನ ನಿರ್ಮೂಲನೆಗಾಗಿ, ಹೆಪಟೆಟಿಸ್‍ ಹಾಗೂ ಸಿಫಿಲಿಸ್ ನಿರ್ಮೂಲನೆಗಾಗಿ ಗರ್ಭಿಣಿಯರಿಗೆ ಈ ಮೂರು ರೋಗಗಳ ತಪಾಸಣೆ ಮಾಡಿ, ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾಡುವುದರ ಮುಖಾಂತರ ಜಾಗೃತಿಯನ್ನು ಮೂಡಿಸಲಾಯಿತು.

ಎಚ್‍ಐವಿ ಸೋಂಕಿತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಹಾಗೂ ಜಿಲ್ಲೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ವಿವರಿದರು. ಯೋಜನೆಗಳಾದ ಅನ್ನ ಅಂತ್ಯೋದಯ ಯೋಜನೆ, ವಿಶೇಷ ಪಾಲನಾ ಯೋಜನೆ, ವಸತಿ ಸೌಲಭ್ಯ, ಧನಶ್ರೀ ಯೋಜನೆ, ಚೇತನಾಯೋಜನೆ, ಮೈತ್ರಿ ಯೋಜನೆ, ಉಚಿತ ಕಾನೂನು ಸೇವೆ ಹಾಗೂ ಮೂಲಭೂತ ತರಬೇತಿಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಡಾ. ಮಹೇಶ ಕೊಪ್ಪಳ, ಶ್ರೀಮತಿ ಚವಡಿ ಮೇಲ್ವಿಚಾರಕರು ನಗರ ಆರೋಗ್ಯ ಕೇಂದ್ರ, ಶ್ರೀಮತಿ ಮುರ್ನಾಳ, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು. ಅನುಸೂಯಾ ಟಂಕಸಾಲಿ ಪ್ರಾರ್ಥಿಸಿದರು, ಚೆನ್ನಮ್ಮ ಸ್ವಾಗತಿಸಿದರು, ರೇಣುಕಾ ವಂದಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...