ಗದಗ | ಯುವಜನತೆಯ ಕ್ರಿಯಾಶೀಲತೆಗೆ ಬಹುಶಿಸ್ತೀಯ ಪ್ರದರ್ಶನ ಪೂರಕ: ಪ್ರೊ. ಎಸ್ ವಿ ಸಂಕನೂರು

Date:

ಬಹುಶಿಸ್ತೀಯ ವಸ್ತು ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳಲ್ಲಿನ ಕ್ರೀಯಾಶೀಲತೆ, ಸೃಜನಶೀಲತೆ, ಜ್ಞಾನದ ಹರಿವು ಹೆಚ್ಚುತ್ತದೆ. ಜೊತೆಗೆ ವೀಕ್ಷಕರಿಗೆ ಪ್ರದರ್ಶನದ ವಿವರಣೆ ನೀಡುವ ಮೂಲಕ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಮತ್ತು ಸಂವಹನ ಕೌಶಲ್ಯ ಹೆಚ್ಚುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್ ವಿ ಸಂಕನೂರು ತಿಳಿಸಿದರು.

ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ಬಹುಶಿಸ್ತೀಯ ವಸ್ತು ಪ್ರಾತ್ಯಕ್ಷಿಕೆ ‘ದರ್ಶನ-2023’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ವಿಜ್ಞಾನಕ್ಕೆ ಸಂಬಂಧಿಸಿದಂತೆ ಈವರೆಗೆ ಅನೇಕ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ. ಸಮಾಜ ವಿಜ್ಞಾನ, ಭಾಷೆ, ತಂತ್ರಜ್ಞಾನಗಳ ಕುರಿತಾಗಿ ಬಹುಶಿಸ್ತೀಯ ಪ್ರಾತ್ಯಕ್ಷಿಕೆ ಏರ್ಪಡಿಸಿರುವುದು ಅತ್ಯುತ್ತಮವಾದ ಕೆಲಸ. ಇಂತಹ ಪ್ರಯೋಗವು ಬೇರೆ ಬೇರೆ ಮಹಾವಿದ್ಯಾಲಯಗಳಿಗೆ ನಿಜಕ್ಕೂ ಮಾದರಿಯಾದುದು. ಈ ಮೂಲಕ ಪುಸ್ತಕದ ಜ್ಞಾನವು ಪ್ರಾಯೋಗಿಕತೆಯ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಮನವರಿಕೆಯಾಗುವುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಯನ್ನು ಬೆಳಸುವಲ್ಲಿ, ಅವರಲ್ಲಿ ಹುದುಗಿರುವ ಸುಪ್ತ ಪ್ರತಿಭೆಯನ್ನು ಹೊರಹಾಕಲು ಇಂತಹ ವೇದಿಕೆಗಳು ಅತ್ಯುತ್ತಮವಾಗಿವೆ. ಇಂತಹ ಪ್ರದರ್ಶನಗಳು ವಿಜ್ಞಾನ್ಕಕೆ ಸೀಮಿತಗೊಳ್ಳದೇ, ಬಹುಶಿಸ್ತೀಯ ನೆಲೆಯಲ್ಲಿ ಯಶಸ್ವಿಯಾಗಿ ನಡಸಬಹುದು ಎಂಬುದಕ್ಕೆ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಉತ್ತಮ ಹಾದಿ ನಿರ್ಮಿಸಿದೆ” ಎಂದು ಎಂದು ಹೇಳಿದರು.

ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಶಂಕ್ರಣ್ಣ ಮುನವಳ್ಳಿಯವರು ಮಾತನಾಡಿ, “ಜ್ಞಾನಾರ್ಜನೆ ಮಾಡುವ ವಿದ್ಯಾರ್ಥಿಗಳ ಜ್ಞಾನವನ್ನು ಹೊರ ಹಾಕಲು ಪ್ರದರ್ಶನವು ಉತ್ತಮ ವೇದಿಕೆಯಾಗಿದ್ದು, ತಾವು ಮಾಡಿದ ವಸ್ತುವಿನ ಮಾದರಿಯನ್ನು ವಿವರಿಸುವ ಪರಿ ನಿಜವಾದ ಜ್ಞಾನದ ಅನ್ವಯಿಕತೆ. ಇಂತಹ ಅತ್ಯುತ್ತಮ ಕಾರ್ಯ ಮಾಡಿದ ಮಹಾವಿದ್ಯಾಲಯವು ಇನ್ನೂ ಹೆಚ್ಚು ಬೆಳವಣಿಗೆಯಾಗಲಿ” ಎಂದು ಹಾರೈಸಿದರು.

“ಬಹುಶಿಸ್ತೀಯ ಪ್ರಾತ್ಯಕ್ಷಿಕೆಯಲ್ಲಿ ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಂದ 54 ತಂಡಗಳು ಭಾಗವಹಿಸಿದ್ದವು. ಹಂಪಿಯ ಕಲ್ಲಿನ ರಥ, ಕುತುಬ್ ಮೀನಾರ್, ಅನುಭವ ಮಂಟಪ, ಮಹಾಭಾರತ, ನೂತನ ಸಂಸತ್ ಭವನ, ಸುಪ್ರೀಂ ಕೋರ್ಟ್‌ ಸೇರಿದಂತೆ ಹಿಂದಿನ ಕಾಲದಿಂದ ಪ್ರಸ್ತುತದವರೆಗಿನ ಅನೇಕ ಶಾಸನಗಳು ಇನ್ನೂ ಅನೇಕ ಪ್ರಾತ್ಯಕ್ಷಿಕೆಗಳು ನೋಡುಗರ ಗಮನ ಸೆಳೆದವು. ಅವುಗಳ ಕುರಿತಾಗಿ ವಿದ್ಯಾರ್ಥಿಗಳು ನೋಡುಗರಿಗೆ ಮಾಹಿತಿ ನೀಡಿದರು” ಎಂದು ಶ್ಲಾಘಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ |ಸಮಾಜೋಧಾರ್ಮಿಕ ಕ್ರಾಂತಿಗೈದ ಬಸವಣ್ಣ ಕರ್ನಾಟಕದ ಮಾರ್ಟಿನ್‌ ಲೂಥರ್

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎ ಕೆ ಮಠ ಅವರು ಮಾತನಾಡಿ, ಪ್ರದರ್ಶನದ ಯಶಸ್ಸಿಗೆ ದುಡಿದ ಎಲ್ಲ ಮಹಾವಿದ್ಯಾಲಯದ ಸಿಬ್ಬಂದಿಗೆ, ವಿದ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷೆ ರಜನಿ ಪಾಟೀಲ, ಸದಸ್ಯ ಮೃತ್ಯುಂಜಯ ಸಂಕೇಶ್ವರ, ಐಕ್ಯೂಎಸಿ ಸಂಚಾಲಕಿ ಡಾ. ವೀಣಾ ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಬೇರೆ ಬೇರೆ ಮಹಾವಿದ್ಯಾಲಯಗಳ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...