ಗದಗ | ವಿವಾಹೇತರ ಸಂಬಂಧ ಪ್ರಿಯಕರನ ಜೊತೆಗೂಡಿ ಪತ್ನಿ ಸೇರಿ ಪತಿಯ ಕೊಲೆ

Date:

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ.

ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ವಿವಾಹೇತರ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್ ವಿಚಾರಣೆಯ ವೇಳೆ ಆರೋಪಿ ಶಿವಕುಮಾರ್ ಈ ಮಾಹಿತಿ ತಿಳಿದು ಬಂದಿದೆ.

ಮೃತದೇಹವನ್ನು ಎಸೆದ ನಾಲ್ಕು ದಿನದ ಬಳಿಕ, ವಿದ್ಯಾ ಪೊಲೀಸ್ ಠಾಣೆಗೆ ತೆರಳಿ ಗಂಡ ಶಂಕರಪ್ಪ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಳು. ದೂರು ಸ್ವೀಕರಿಸಿದ ಪೊಲೀಸರು ಹುಡುಕಾಟ ನಡೆಸಿದ ಐದು ದಿನಗಳ ಬಳಿಕ ಶಂಕರಪ್ಪ ಮೃತದೇಹ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ಗ್ರಾಕೂಸ್ ಹೋರಾಟಕ್ಕೆ ಮಣಿದ ಗ್ರಾಪಂ; 3 ತಿಂಗಳಿಂದ ಕೂಲಿ ಕಾರ್ಮಿಕರನ್ನು ಸತಾಯಿಸಿದ್ದ ಆರೋಪ

ಪ್ರಾಥಮಿಕ ತನಿಖೆಯಲ್ಲಿ ಕೊಲೆ ಎಂದು ತಿಳಿದ ಪೊಲೀಸರು ವಿಚಾರಣೆ ನಡೆಸಿದಾಗ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ವಿದ್ಯಾ ಹಾಗೂ ಪ್ರಿಯಕರ ಶಿವಕುಮಾರ್ ಅವರನ್ನು ರೋಣ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...