ಗದಗ | ಸೌಹಾರ್ದತೆ ಮೆರೆದ ಬಳಗಾನೂರ ಗ್ರಾಮದ ಮುಸ್ಲಿಂ ಬಾಂಧವರು

Date:

ಗದಗ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಚಿಕ್ಕೇನ ಕೊಪ್ಪದ ಚನ್ನವೀರ ಶರಣರ 29ನೇ ಪುಣ್ಯಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆ ನಡೆದಿದೆ. ಗ್ರಾಮದ ಮುಸ್ಲಿಂ ಸಮುದಾಯದ ಗುರುಹಿರಿಯರು ಸಹೋದರ, ಸಹೋದರಿಯರು ಮಠದ ಜಾತ್ರೆಗೆ ಆಗಮಿಸಿದ ಭಕ್ತರ ಪ್ರಸಾದಕ್ಕೆ ಸಾವಿರಾರು ರೊಟ್ಟಿಯನ್ನು ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸುರೇಶ ವಾಯ್ ಚಲವಾದಿ ತಿಳಿಸಿದ್ದಾರೆ.

ಗದಗ ನಗರದಲ್ಲಿ ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, “ಮನುಷ್ಯ ಮನುಷ್ಯನನ್ನು ಪ್ರೀತಿಯಿಂದ ಕಂಡರೆ ಪ್ರೀತಿಯೇ ಹುಟ್ಟಲು ಸಾಧ್ಯ. ಅದು ಬಿಟ್ಟು ಒಂದು ಸಮುದಾಯವನ್ನು ಪರಸ್ಪರ ವಿರೋಧಿಸುವುದರಿಂದ ವೈಷಮ್ಯಗಳು ಹುಟ್ಟುತ್ತವೆಯೇ ಹೊರತು, ಪ್ರೀತಿ ಕಾಣಲು ಸಾಧ್ಯವಿಲ್ಲ. ಶರಣರು ನಡೆದಾಡಿದ ಸುಕ್ಷೇತ್ರ ಬಳಗಾನೂರ ಗ್ರಾಮದಲ್ಲಿ ಎಲ್ಲ ಸಮುದಾಯದ ಜನರು ಪರಸ್ಪರ ಸಹೋದರತ್ವದ ಭಾವನೆಯಿಂದ ಯಾವುದೇ ಕೋಮು ಗಲಬೆಯಿಲ್ಲದೇ ಸೌಹಾರ್ದತೆಯಿಂದ ಬದುಕು ಕಟ್ಟಿಕೊಂಡಿರುವುದು ಸಂತೋಷಕರ ಸಂಗತಿ” ಎಂದರು.

“ವಿಶೇಷವಾಗಿ ನಮ್ಮ ಗ್ರಾಮದ ಮುಸಲ್ಮಾನ ಬಂಧುಗಳು ಮಠದ ಭಕ್ತರ ಪ್ರಸಾದಕ್ಕಾಗಿ 5,000 ರೊಟ್ಟಿಗಳನ್ನು ಬಡಿದು ಶ್ರೀಮಠಕ್ಕೆ ನೀಡಿರುವುದು ಒಳ್ಳೆಯ ಬೆಳವಣಿಗೆ. ಎಲ್ಲ ಸಮುದಾಯದ ಜನರೊಂದಿಗೆ ಸಹೋದರತ್ವದ ಮನೋಭಾವನೆಯಿಂದ ಎಲ್ಲರನ್ನೂ ಪ್ರೀತಿಯಿಂದ ಕಂಡು ಹಿಂದು-ಮುಸ್ಲಿಂ ಏಕ್ ಹೈ ಎಂಬ ಭಾವನೆಯಿಂದ ಹಿಂದುಗಳ ಜತೆಗೆ ಹಬ್ಬ ಹರಿದಿನಗಳಲ್ಲಿ ಕೈ ಜೋಡಿಸಿ ಸೌಹಾರ್ದತೆಯಿಂದಿರುವುದು ವಿಶೇಷ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮದ ಪ್ರಸಿದ್ದವಾದ ಮಠದ ಜಾತ್ರೆಯ ಕೆಲಸಗಳಲ್ಲಿ ಎಲ್ಲ ಸಮುದಾಯದ ಜನರು ಒಗ್ಗಟ್ಟಾಗಿ ಕೆಲಸ ಮಾಡುವುದು ಹಾಗೂ ಯಾವುದೇ ಜಾತಿ ಮತ ಪಂಕ್ತಗಳಿಗೆ ಮಠದಲ್ಲಿ ಅವಕಾಶ ನೀಡದೇ ಎಲ್ಲ ಜನರಿಗೂ ಮುಕ್ತವಾದ ಅವಕಾಶವನ್ನು ಕಲ್ಪಿಸಿ ಗ್ರಾಮದಲ್ಲಿ ಸೌಹಾರ್ದತೆ ನೆಲೆಸಿ ಎಲ್ಲರೂ ಒಂದೇ ಎಂಬ ಭಾವನೆ ಮೂಡಿಸಿರುವುದಕ್ಕೆ ಕಾರಣವೇ ಶ್ರೀಮಠದ ಸಂಸ್ಕೃತಿ” ಎಂದು ಹರ್ಷ ವ್ಯಕ್ತಪಡಿಸಿದರು.

“ಪ್ರತಿ ವರ್ಷ ಶಿವಶಾಂತವೀರ ಶರಣರು ಜಾತ್ರೆಯ ತಿಂಗಳುಗಳ ಕಾಲ ಮೊದಲೇ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸದ್ಭಾವನಾ ಯಾತ್ರೆ ಹಮ್ಮಿಕೊಂಡು ದುಶ್ಚಟಗಳನ್ನು ಜೋಳಿಗೆಗೆ ಹಾಕಿ. ಗೋರಕ್ಷಣೆ ನಮ್ಮೆಲ್ಲರ ಹೊಣೆ. ರೈತರೇ ದೇಶದ ಉಸಿರು ಎಂಬ ವಿವಿಧ ವಾಣಿಯನ್ನು ಬಿತ್ತರಿಸುತ್ತಾ ಸಾಮಾಜಿಕ ಜಾಗೃತಿ ಮೂಡಿಸುವುದರ ಜತೆಗೆ ಸೌಹಾರ್ದತೆಯ ಬದುಕು ಕಟ್ಟಿಕೊಂಡು ಜೀವಿಸಬೇಕೆಂಬ ಸಂದೇಶ ನೀಡುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೀದಿಬದಿ ವ್ಯಾಪಾರಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ

“ಶಿವಶಾಂತವೀರ ಶರಣರು ಹಲವಾರು ರೀತಿಯ ಧಾರ್ಮಿಕ ಕಾರ್ಯಗಳ ಜತೆಗೆ ಸಾಮಾಜಿಕ ಕಾರ್ಯಗಳನ್ನು ಮಾಡುವುದರೊಂದಿಗೆ ಭಕ್ತ ಸಮೂಹದ ಹೃದಯಾಂತರಾಳದಲ್ಲಿ ನೆಲೆಯೂರಿ ನಮ್ಮ ಭಾಗದ ನಡೆದಾಡುವ ದೇವರೆಂದು ಖ್ಯಾತಿ ಪಡೆದಿದ್ದಾರೆ. ಇಂತಹ ಶರಣರು ನಡೆದಾಡಿದ ಪವಿತ್ರ ಸ್ಥಳ ಸುಕ್ಷೇತ್ರ ಬಳಗಾನೂರ ಗ್ರಾಮ ಜಿಲ್ಲೆಯಲ್ಲಿಯೇ ಕೋಮು ಸೌಹಾರ್ದತೆಯಲ್ಲಿ ಹೆಸರುವಾಸಿಯಾದ ಗ್ರಾಮವೆಂದು ಹೆಮ್ಮೆಯಾಗುತ್ತದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...