ಗದಗ | ಕೃಷಿ ಮಹಿಳೆಯರಿಗೆ ಉದ್ಯೋಗವಾದ ಬೇವಿನ ಬೀಜ

Date:

ಗದಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಮಹಿಳೆಯರು ಮಳೆಗಾಲದಲ್ಲಿ ಕೂಲಿ ಕೆಲಸ ಕಡಿಮೆಯಾದಾಗ ನೈಸರ್ಗಿಕವಾಗಿ ಬೆಳೆಯುವ ಬೇವಿನ ಬೀಜ ಹೆಕ್ಕುವುದನ್ನೇ ಉದ್ಯೋಗವನ್ನಾಗಿ ಮಾಡಿಕೊಂಡು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿರುವುದು ವಿಶೇಷ. ಹೊಲದ ಬದುವುಗಳಲ್ಲಿ, ಕಿನಾಲು ದಂಡೆಗಳ ಮೇಲೆ, ಅರಣ್ಯ ಪ್ರದೇಶದಲ್ಲಿ ನೈಸರ್ಗಿಕವಾಗಿ ಬೇವಿನ ಮರಗಳು ಬೆಳೆದಿರುತ್ತವೆ. ಯುಗಾದಿ ಸಮಯದಲ್ಲಿ ಬೇವಿನ ಮರಗಳು ಹೂವುಗಳನ್ನು ಬಿಟ್ಟು, ಜೂನ್ ಜುಲೈ ತಿಂಗಳಲ್ಲಿ ಹಣ್ಣಾಗುತ್ತವೆ. ಹಣ್ಣುಗಳನ್ನು ಪಕ್ಷಿಗಳು ತಿಂದು, ಬರಿ ಬೀಜಗಳು ಗಿಡಗಳಲ್ಲಿ ಉಳಿದಿರುತ್ತವೆ.  ಬೀಜಗಳು ತೊಟ್ಟು ಉದುರಿ ಕೆಳಗೆ ಬೀಳುತ್ತವೆ.

ಇದೇ ಜೂನ್ ಸಮಯದಲ್ಲಿ ಮಳೆಗಾಲ ಆರಂಭವಾಗಿ ಮುಂಗಾರು ಬಿತ್ತನೆ ಕಾರ್ಯ ಆಗತಾನೆ ಆರಂಭವಾಗಿರುತ್ತದೆ. ಈ ಸಂದರ್ಭದಲ್ಲಿ ಕೃಷಿ ಮಹಿಳೆಯರಿಗೆ ಹೊಲಗಳಲ್ಲ ಕೃಷಿ ಕೆಲಸ ಕಡಿಮೆ ಇರುವುದರಿಂದ, ಹೊಲದ ಬದುವುಗಳಲ್ಲಿ, ಕೆರೆಯ ದಂಡೆಗಳ ಮೇಲೆ ಬೆಳೆದಿರುವ ಬೇವಿನ ಮರಗಳನ್ನು ಹುಡುಕಿ ಬೀಜಗಳನ್ನು ಒಂದೊಂದಾಗಿ ಆರಿಸಿ, ಸಂಗ್ರಹಿಸಿ, ಅವುಗಳನ್ನು ಮಾರಾಟ ಮಾಡಿ ತಮ್ಮ ಕುಟುಂಬದ ಆದಾಯವನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ.

ಆರು ಡಂಬಿ ಸೇರಿ ಒಂದು ಚೀಲಕ್ಕೆ ಬೇವಿನ ಬೀಜಕ್ಕೆ 650 ರೂ.ಗಳಿಂದ 700 ರೂ. ಇರುತ್ತದೆ. ಕೃಷಿ ಮಹಿಳೆಯರು ಅಡವಿಗಳಲ್ಲಿ ಅಲೆದಾಡಿ ದಿನಕ್ಕೆ ನಾಲ್ಕರಿಂದ ಐದು ಡಂಬಿಗಳಷ್ಟು ಬೀಜಗಳನ್ನು ಸಂಗ್ರಹಿಸುತ್ತಾರೆ. ಕೃಷಿ ಮಹಿಳೆಯರು ದಿನಕ್ಕೆ ನಾಲ್ಕುನೂರರಿಂದ ಐದುನೂರು ರೂಪಾಯಿಗಳಷ್ಟು ಆದಾಯ ಗಳಿಸುತ್ತಾರೆ. ಹೀಗೆ ಹದಿನೈದರಿಂದ ಒಂದು ತಿಂಗಳುಗಳ ಕಾಲ ಬೇವಿನ ಬೀಜ ಹೆಕ್ಕುವ ಉದ್ಯೋಗವನ್ನು ಅವಲಂಬಿಸಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಎಪಿಎಂಸಿಯಲ್ಲಿ ಬೇವಿನ ಬೀಜದ ದೊಡ್ಡ ಮಾರುಕಟ್ಟೆ ಇದೆ. ಈ ಮಾರುಕಟ್ಟೆಯ ಖರೀದಿದಾರರು, ರೋಣ, ಗಜೇಂದ್ರಗಡ, ಹುನಗುಂದ, ಲಿಂಗಸೂರು, ಯಲಬುರ್ಗಾ ತಾಲೂಕಿನ ಹಳ್ಳಿ ಹಳ್ಳಿಗಳಿಗೆ ಹೋಗಿ, ಕೃಷಿ ಮಹಿಳೆಯರು ಸಂಗ್ರಹಿಸಿದ ಬೀಜಗಳನ್ನು ಖರೀದಿ ಮಾಡ್ಕೊಂಡು ಹೋಗುತ್ತಾರೆ.

ಬೇವಿನ ಬೀಜದಿಂದ ಆದಾಯ ಕಳಿಸುವ ಬಗ್ಗೆ ಈದಿನ.ಕಾಮ್‌ ಜೊತೆ ಮಾತನಾಡಿದ ಕುಷ್ಟಗಿ ತಾಲೂಕಿನ ರೈತ ವೀರೇಶ್ ಕಟ್ಟಿಮನಿ, “ಬೇವಿನ ಬೀಜಗಳಿಂದ ಕೂದಲು ಎಣ್ಣೆ, ಔಷಧಿಗಳನ್ನು ತಯಾರಿಸುತ್ತಾರೆ. ಬೀಜದ ಹಿಂಡಿಯನ್ನು ಮರ, ಗಿಡ, ಬೆಳೆಗಳ ಬುಡಕ್ಕೆ ಹಾಕಿದರೆ ಹೆಚ್ಚು ಆರೋಗ್ಯವಾಗಿ, ಒಳ್ಳೆಯ ರೀತಿಯಲ್ಲಿ ಬೆಳೆಯುತ್ತವೆ” ಎಂದು ಹೇಳಿದರು.

ಈದಿನ.ಕಾಮ್ ಜೊತೆಗೆ ಮಾತನಾಡಿದ ರೋಣ ತಾಲೂಕಿನ ಚಿಕ್ಕಮನ್ನೂರು ಗ್ರಾಮದ ಕೃಷಿ ಮಹಿಳೆ ಮುತ್ತವ್ವ, “ಮುಂಜಾನೆಯಿಂದ ಸಂಜೆವರೆಗೂ ಆರಿಸಿದ್ರು ಮೂರರಿಂದ ನಾಲ್ಕು ಡಬ್ಬಿ ಅರಿಸ್ತೀವಿ. ದಿನಕ್ಕೆ ನಾಲ್ಕುನೂರು ದುಡಿತೀವಿ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...