ಗದಗ | ಯಾವುದೇ ಬಂದ್ ಅವಕಾಶವಿಲ್ಲ, ಎಂದಿನಂತೆ ವ್ಯಾಪಾರ, ವಹಿವಾಟು ನಡೆಯಲಿವೆ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ಎಸ್. ನೇಮಗೌಡ

Date:

ಜಗದ್ಗುರು ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ರಥಬೀದಿಯಲ್ಲಿ ವ್ಯಾಪಾರ ಮಳಿಗೆ ಹಾಕಲಾಗಿದ್ದು, ಅನ್ಯ ರಾಜ್ಯದ ವ್ಯಾಪಾರಸ್ಥರನ್ನು ಕೈ ಬಿಟ್ಟು ಕನ್ನಡಿಗರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡುವಂತೆ ಒತ್ತಾಯಿಸಿ ಶ್ರೀರಾಮ ಸೇನೆಯ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಗದಗ ಬಂದ್‌ಗೆ ಕರೆ ನೀಡಿವೆ.

ಆದರೆ ಮೇ 26ರಂದು ಯಾವುದೇ ಬಂದ್ ಇರುವುದಿಲ್ಲ. ಸಾರ್ವಜನಿಕರು ಎಂದಿನಂತೆ ತಮ್ಮ ವ್ಯಾಪಾರ, ವಹಿವಾಟುಗಳನ್ನು ನಡೆಸಬೇಕು. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಹೇಳಿದರು.

ಗದಗ ಪಟ್ಟಣದ ಶಹರ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಒತ್ತಾಯಪೂರ್ವಕವಾಗಿ ಯಾರು ಬಂದ್ ಮಾಡುವಂತಿಲ್ಲ. ಒಂದು ವೇಳೆ ಬಂದ್ ಮಾಡಲು ಪ್ರಯತ್ನಿಸಿದರೇ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಲಾಗುವುದು. ಶಾಂತಿಯುತ ಹೋರಾಟಕ್ಕೆ ನಮ್ಮ ಬೆಂಬಲ ಇದೆ. ಆದರೆ, ಬಂದ್ ಮಾಡಿ ಯಾರೂ ಹೋರಾಟ ಮಾಡಲು ಅವಕಾಶ ಇಲ್ಲ’ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂದ್ ಮಾಡುವುದರಿಂದ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಎಲ್ಲಾ ಸಂಘಟನೆಗಳು ಒಗ್ಗಟ್ಟಾಗಿ ಬಂದ್ ಮಾಡಿದರೆ ಯಾವುದೇ ತಕರಾರಿಲ್ಲ. ಆದರೆ, ಇಲ್ಲಿ ಒಂದು ಗುಂಪು ಪರವಾಗಿ ಹಾಗೂ ಮತ್ತೊಂದು ಗುಂಪು ವಿರೋಧವಾಗಿ ಇರುವುದರಿಂದ ಶಾಂತಿ ಭಂಗ ಆಗುವ ಸಾಧ್ಯತೆ ಹೆಚ್ಚಾಗಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ ಮೇ 26ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಜಿಲ್ಲಾಧಿಕಾರಿ ಕಚೇರಿಯ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಿದಾಗ ಇಲಾಖೆಯಿಂದ ಅವರಿಗೆ ಸಂಪೂರ್ಣ ಸಹಕಾರ ನೀಡಲಾಗಿತ್ತು. ಈಗಲೂ ಅವರು ಶಾಂತಿಯುತ ಹೋರಾಟ ಮಾಡಿದರೆ ಅನುಕೂಲ ಮಾಡಿಕೊಡುತ್ತೇವೆ. ಜಾತ್ರಾ ಸಮಯದಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿ ನೇಮಿಸಿ ಸುಗಮವಾಗಿ ನಡೆಯಲು ಅನುವು ಮಾಡಿಕೊಡಲಾಗಿದೆ. ಅಲ್ಲದೆ ನಗರಸಭೆ ಆ ಜಾಗ ಮಠಕ್ಕೆ ಸೇರಿದ್ದು ಅಂತ ಈಗಾಗಲೇ ತಿಳಿಸಿದೆ. ಈ ಎಲ್ಲ ವಿಚಾರ ಗಮನದಲ್ಲಿಟ್ಟುಕೊಂಡು ಇಂದು ನಿಷೇಧಾಜ್ಞೆ ಜಾರಿ ಮಾಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ಜನರು ನಗರದ ಉಸಿರು : ಡಾ. ದು.ಸರಸ್ವತಿ

“ನಿಷೇಧಾಜ್ಞೆ ಜಾರಿ ಇದ್ದರೂ ಕೂಡ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಾಲ್ವರು ಡಿಎಸ್‌ಪಿ ಹತ್ತಕ್ಕೂ ಹೆಚ್ಚು ಇನ್‌ಸ್ಪೆಕ್ಟರ್ ಎರಡು ಕೆಎಸ್‌ಆರ್‌ಪಿ ತುಕಡಿ ಡಿಆರ್ ಸಿಬ್ಬಂದಿ ಸೇರಿದಂತೆ ಸುಮಾರು 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಾರ್ವಜನಿಕರು ಎಂದಿನಂತೆ ತಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...