ಗದಗ | ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿ: ಮುನ್ನೆಚ್ಚರಿಕೆಗೆ ಸೂಚನೆ

Date:

ನವಿಲುತೀರ್ಥ ಜಲಾಶಯ ಭರ್ತಿಗೆ ಏಳು ಅಡಿಯಷ್ಟೇ ಬಾಕಿಯಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಒಂದು ವಾರದಿಂದ ಮಲಪ್ರಭಾ ನದಿ ಮೇಲ್ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಕಳೆದ ಮೂರು ದಿನಗಳಿಂದ ಸವದತ್ತಿ ಬಳಿಯ ನವಿಲುತೀರ್ಥ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ನವಿಲುತೀರ್ಥ ಡ್ಯಾಂ ಭರ್ತಿಯಾಗಲು ಇನ್ನು ಏಳು ಅಡಿ ಮಾತ್ರ ಬಾಕಿಯಿದ್ದು, ನರಗುಂದ ತಾಲೂಕಿನ ಹಲವು ಹಳ್ಳಿಗಳಿಗೆ ನೆರೆ ಆತಂಕ ಉಂಟಾಗಿದೆ.

ಶನಿವಾರ ಸಂಜೆ ವೇಳೆಗೆ ನವಿಲುತೀರ್ಥ ಡ್ಯಾಂ 2,072 ಅಡಿಯಷ್ಟು ಭರ್ತಿಯಾಗಿದೆ. 18 ಸಾವಿರ ಕ್ಯೂಸೆಕ್‌ ಒಳಹರಿವು ಇದ್ದು, ಇದೇ ವೇಗದಲ್ಲಿ ನೀರು ಬಂದರೆ ಮುಂದಿನ ಎರಡೇ ದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಡ್ಯಾಂ ಭರ್ತಿಯಾದ ನಂತರ ಏಕಾಏಕಿ ನೀರು ಹರಿಸಿದರೆ ಪ್ರವಾಹ ಉಂಟಾಗುತ್ತದೆ. ಹಾಗಾಗಿ ಇದನ್ನು ತಡೆಗಟ್ಟಲು ಈಗಿನಿಂದಲೇ ಸಣ್ಣ ಪ್ರಮಾಣದಲ್ಲಿ ನೀರನ್ನು ಹೊರಬಿಡಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನವಿಲುತೀರ್ಥ ಜಲಾಶಯದಿಂದ ಶನಿವಾರ ಸಂಜೆ ಐದು ಗಂಟೆಯಿಂದ 1000 ಕ್ಯೂಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅದೇರೀತಿ, 500 ಕ್ಯೂಸೆಕ್‌ ನೀರನ್ನು ಮಲಪ್ರಭಾ ಕಾಲುವೆಗೆ ಹರಿಸಲಾಗುತ್ತಿದೆ. ಒಟ್ಟಾರೆ, ಒಂದು ಸಾವಿರ ಕ್ಯೂಸೆಕ್‌ನಿಂದ ಐದು ಸಾವಿರ ಕ್ಯೂಸೆಕ್‌ ನೀರನ್ನು ನಿಧಾನವಾಗಿ ಹೊಳೆ, ಕಾಲುವೆಗಳಿಗೆ ಹರಿಸಲಾಗುವುದು” ಎಂದು ನೀರಾವರಿ ಇಲಾಖೆ ಎಂಜಿನಿಯರ್‌ ಜಗದೀಶ ಕುರಿ ಹೇಳಿದ್ದಾರೆ.

“ನವಿಲುತೀರ್ಥ ಡ್ಯಾಂನಿಂದ ನೀರು ಹರಿಸುತ್ತಿರುವ ಪರಿಣಾಮ ಮಲಪ್ರಭಾ ಹೊಳೆಯ ತಟದಲ್ಲಿರುವ ಎಂಟಕ್ಕೂ ಹೆಚ್ಚು ಗ್ರಾಮಗಳು ಸುರಕ್ಷತೆಯತ್ತ ಗಮನ ಹರಿಸಬೇಕಿದೆ. ಹೊಳೆ ಸಮೀಪ ಪಂಪ್‌ಸೆಟ್ ಇರುವ ರೈತರು ಪಂಪ್‌ಸೆಟ್, ಕೃಷಿ ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಅದೇರೀತಿ ಬೆಣ್ಣೆ ಹಳ್ಳದ ದಡದಲ್ಲಿರುವ ಗ್ರಾಮಗಳ ಜನರೂ ಕೂಡ ಸುರಕ್ಷತೆಯತ್ತ ಗಮನಹರಿಸಬೇಕು” ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ನರಗುಂದ ತಾಲೂಕಿನ ಕೊಣ್ಣೂರ, ಲಕಮಾಪುರ, ವಾಸನ, ಬೆಳ್ಳೇರಿ, ಕಪಲಿ, ಕಲ್ಲಾಪುರ, ಶಿರೋಳ, ಸುರಕೋಡ, ಕುರ್ಲಗೇರಿ, ಹದ್ಲಿ, ರಡ್ಡೇರನಾಗನೂರ, ಗಂಗಾಪುರ ಗ್ರಾಮಗಳು ಮಲಪ್ರಭಾ ಹಾಗೂ ಬೆಣ್ಣೆಹಳ್ಳದ ಪ್ರವಾಹದ ಆತಂಕದಲ್ಲಿವೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವುದು ನಮ್ಮ ಕಾಲೇಜಿನ ಹೆಮ್ಮೆ: ಪ್ರಾಂಶುಪಾಲ ಎ ಆರ್ ಹಂಡೆ

“ಮಳೆ ಹೆಚ್ಚಾಗಿರುವ ಕಾರಣ ನವೀಲುತೀರ್ಥ ಡ್ಯಾಂನ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚುತ್ತಲಿದೆ. ಶನಿವಾರ ಸಂಜೆಯಿಂದ ನದಿಗೆ ಅಂದಾಜು 1 ಸಾವಿರದಿಂದ 5 ಸಾವಿರ ಕ್ಯೂಸೆಕ್‌ ನೀರು ಹರಿಬಿಡಲಾಗಿದ್ದು, ಮಲಪ್ರಭಾ ನದಿಯ ತೀರದ ಜನರು ನದಿತಟದಿಂದ ಅಂತರ ಕಾಯ್ದುಕೊಳ್ಳಬೇಕು” ಎಂದು ಶಾಸಕ ಸಿ ಸಿ ಪಾಟೀಲ ಮನವಿ ಮಾಡಿದ್ದಾರೆ.

“ಒಳಹರಿವು ಹೆಚ್ಚಾದ ಪರಿಣಾಮ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹೊಳೆ, ಕಾಲುವೆಗೆ 1,500 ಕ್ಯೂಸೆಕ್‌ ನೀರು ಹರಿಸಲಾಗಿದೆ. ಪ್ರವಾಹ ಎದುರಿಸಲು ಎಲ್ಲ ವ್ಯವಸ್ಥೆ ಆಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...