ಗದಗ | ಅತಿವೃಷ್ಠಿ ನಿರ್ವಹಣೆ; ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Date:

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿ ಹಾಗೂ ಹಳ್ಳಗಳ ಪಾತ್ರದಲ್ಲಿ ವಾಸಿಸುವ ಜನರು ಸುರಕ್ಷಿತ ತಾಣಗಳಿಗೆ ತೆರಳಬೇಕು. ಅಧಿಕಾರಿಗಳು ಕೇಂದ್ರ ಸ್ಥಳದಲ್ಲಿಯೇ ಇದ್ದು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ಸೂಚನೆ ನೀಡಿದ್ದಾರೆ.

“ಜನ-ಜಾನುವಾರುಗಳಿಗೆ ಜೀವ ಹಾನಿ ಆಗದಂತೆ ಮುಂಜಾಗೃತೆ ಕ್ರಮಗಳನ್ನು ವಹಿಸಬೇಕು. ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮಳೆ ಹಾಗೂ ಪ್ರವಾಹದಿಂದ ಜನ-ಜಾನುವಾರು ಜೀವಹಾನಿ ಆಗದಂತೆ ನಿಗಾವಹಿಸಬೇಕು” ಎಂದು ತಿಳಿಸಿದ್ದಾರೆ.

“ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಯಲ್ಲಿ ವಾಸಿಸುವ ಕುಟುಂಬಗಳನ್ನು ಗುರುತಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯಬೇಕು. ವಿದ್ಯುತ್ ಕಂಬಗಳಿಗೆ ಜಾನುವಾರುಗಳನ್ನು ಕಟ್ಟದಂತೆ ಹಾಗೂ ಜನರು ಸ್ಪರ್ಶಿಸದಂತೆ ಜಾಗೃತಿ ಮೂಡಿಸಬೇಕು. ಅಗತ್ಯ ಬಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದು ಜನ ಜಾನುವಾರುಗಳನ್ನು ಸ್ಥಳಾಂತರಿಸಿ ಸಂಭವನೀಯ ಜೀವಹಾನಿ ತಡೆಗಟ್ಟಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಎಲ್ಲ ಚರಂಡಿ ಹಾಗೂ ರಾಜ ಕಾಲುವೆಗಳನ್ನು ಸ್ವಚ್ಛಗೊಳಿಸಲು ಸ್ಥಳಿಯ ಆಡಳಿತಕ್ಕೆ ಸೂಚಿಸಬೇಕು. ಒಟ್ಟಾರೆಯಾಗಿ ಎಲ್ಲ ಅಧಿಕಾರಿ ಸಿಬ್ಬಂದಿಗಳೆಲ್ಲರೂ ನಿರಂತರವಾಗಿ ಸಮನ್ವಯ ಸಾಧಿಸುವುದರ ಮೂಲಕ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬಹುದು” ಎಂದು ಮುಂಜಾಗೃತ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತಿವೃಷ್ಠಿ ನಿರ್ವಹಣೆಗಾಗಿ ಸಿದ್ಧತೆ: ಜಿಲ್ಲೆಯಲ್ಲಿ ಪ್ರವಾಹ ಸಂಭವಿಸಬಹುದಾದ 25 ಗ್ರಾಮ ಪಂಚಾಯತಗಳಲ್ಲಿ ವಿಪತ್ತು ನಿರ್ವಹಣಾ ಯೋಜನೆ ತಯಾರಿಸಲಾಗಿದೆ. ಪ್ರವಾಹ ಪರಿಸ್ಥಿತಿ ನಿರ್ವಹಣೆಗಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ 56 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದ್ದು ಪ್ರತಿ ಕೇಂದ್ರಕ್ಕೂ ಪ್ರತ್ಯೇಕ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಬೆಳೆ ಹಾಗೂ ಮನೆಹಾನಿ ಸಂಭವಿಸಿದ್ದಲ್ಲಿ ಸಮೀಕ್ಷೆಗಾಗಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.

ಮಳೆ ವಿವರ: ಜುಲೈ 1 ರಿಂದ ಈವರೆಗೆ ಜಿಲ್ಲೆಯಲ್ಲಿ 91 ಮಿಮೀ ಮಳೆಯಾಗಿದ್ದು ವಾಡಿಕೆ ಮಳೆ 51 ಮಿಮೀ ಇದ್ದು, ಶೇ.79ರಷ್ಟು ಹೆಚ್ಚಿಗೆ ಮಳೆಯಾಗಿದೆ. ಮಳೆಯಿಂದಾಗಿ ಜಿಲ್ಲೆಯಲ್ಲಿ 24 ಮನೆಗಳು ಭಾಗಶ: ಹಾನಿಗೀಡಾಗಿವೆ.

ಈ ಸುದ್ದಿ ಓದಿದ್ದೀರಾ? ವಿಪರೀತ ಮಳೆ ಹಿನ್ನೆಲೆ | ಕೊನೆಗೂ ಪದವಿ ಪರೀಕ್ಷೆ ಮುಂದೂಡಿದ ಮಂಗಳೂರು ವಿವಿ

ಜಲಾಶಯ ಮಟ್ಟ: ನವೀಲು ತೀರ್ಥ ಜಲಾಶಯ 37.785 ಟಿಎಂಸಿ ಸಾಮರ್ಥ್ಯ ಹೊಂದಿದ್ದು ಈವರೆಗೆ 9.314 ಟಿ.ಎಂ.ಸಿ. ನೀರು ಸಂಗ್ರವಾಗಿದೆ. ನೀರಿನ ಒಳ ಹರಿವು 21247 ಕ್ಯೂಸೆಕ್ಸ ಇದ್ದು ಹೊರ ಹರಿವು 194 ಕ್ಯೂಸೆಕ್ಸ ಇದೆ. ಭದ್ರಾ ಜಲಾಶಯ 71.535 ಟಿ.ಎಂ.ಸಿ. ಸಾಮಥ್ರ್ಯ ಹೊಂದಿದ್ದು ಈ ವರೆಗೆ 29.653 ಟಿ.ಎಂ.ಸಿ. ನೀರು ಸಂಗ್ರಹವಾಗಿದ್ದು ನೀರಿನ ಒಳ ಹರಿವು 39348 ಕ್ಯೂಸೆಕ್ಸ ಇದ್ದು ಹೊರ ಹರಿವು 167 ಕ್ಯೂಸೆಕ್ಸ ಇದೆ.

ಬಿತ್ತನೆ ಪ್ರದೇಶದ ವಿವರ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 3,09,810 ಎಕರೆ ಪ್ರದೇಶದಲ್ಲಿ ಬಿತ್ತನೆಯ ಗುರಿ ಹೊಂದಲಾಗಿದ್ದು, ಈ ಪೈಕಿ 1,01,905 ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಶೇ.32.89ರಷ್ಟು ಬಿತ್ತನೆಯಾಗಿದೆ. ಅದೇ ರೀತಿ 60,575 ಎಕರೆ ತೋಟಗಾರಿಕೆ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿತ್ತು. ಈ ಪೈಕಿ 14,294 ಎಕರೆ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಶೇ. 23.60 ರಷ್ಟು ಗುರಿ ಸಾಧನೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...