ಗದಗ | ಪ್ರಾಮಾಣಿಕ ಮೆರೆದ ರಿತ್ತಿ ಕುಟುಂಬಕ್ಕೆ 30×40 ನಿವೇಶನ; ಲಕ್ಕುಂಡಿ ಗ್ರಾಪಂ ನಿರ್ಧಾರ

Date:

“ಕಳೆದ ವಾರ ಮನೆ ಕಟ್ಟಲು ಅಡಿಪಾಯ ತಗೆಯುವಾಗ ಚಿನ್ನದ ನಿಧಿ ಸಿಕ್ಕಿದ್ದು, ಆ ಚಿನ್ನದ ನಿಧಿಯನ್ನು ಪ್ರಾಮಾಣಿಕವಾಗಿ ಸರಕಾರಕ್ಕೆ ಒಪ್ಪಿಸಿದ ರಿತ್ತಿ ಕುಟುಂಬಕ್ಕೆ ನಿವೇಶನ ಉಚಿತ ಶಿಕ್ಷಣ ಹಾಗೂ ಉದ್ಯೋಗ ನೀಡಲು ವಿಶೇಷ ಗ್ರಾಮ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ  ಕೆಂಚಪ್ಪ ಪೂಜಾರಿ ನೇತೃತ್ವದಲ್ಲಿ ಇಂದು ಗ್ರಾಮದ ಜನರ ಸರ್ವಾನುಮತದಿಂದ ವಿಶೇಷ ಗ್ರಾಮಸಭೆಯಲ್ಲಿ ರಿತ್ತಿ ಕುಟುಂಬಕ್ಕೆ ನಿವೇಶನ ನೀಡಲು ನಿರ್ಧಾರ ಕೈಗೊಂಡಿದೆ.

ಪ್ರಜ್ವಲ್ ರಿತ್ತಿಗೆ ಉಚಿತ ಶಿಕ್ಷಣ ಸೌಲಭ್ಯ ನೀಡುವುದಾಗಿ ಹಾಗೂ ತಾಯಿ ಗಂಗಮ್ಮ ಅವರಿಗೆ ಉದ್ಯೋಗ ಕಲ್ಪಿಸುವುದಾಗಿ ಪಂಚಾಯತ್ ಭರವಸೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ರಾಮಸಭೆಯ ನಿರ್ಣಯದ ಆಧಾರದಲ್ಲಿ, ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ನಿವೇಶನ 30×40 ಜಾಗ ಹಂಚಿಕೆ ಕುರಿತು ಅಗತ್ಯ ಪರಿಶೀಲನೆ ನಡೆಸಿ, ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳುವಂತೆ ಈ ಮೂಲಕ ಶಿಫಾರಸು ಮಾಡಲಾಗುತ್ತದೆ. ಈ ಪತ್ರದೊಂದಿಗೆ ವಿಶೇಷ ಗ್ರಾಮಸಭೆಯ ನಡಾವಳಿ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳ ವಿವರವನ್ನು ಸಲ್ಲಿಸಲಾಗಿದೆ. ಮಾನ್ಯರು ದಯವಿಟ್ಟು ಸದರಿ ಕುಟುಂಬಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ವಿಶೇಷ ಗ್ರಾಮ ಸಭೆ ತಿಳಿಸಿದೆ.

1002818418

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು ಸಿದ್ದು ಪಾಟೀಲ ಮಾತನಾಡಿ, “ಜಿಲ್ಲಾ ಉಸ್ತುವಾರಿ ಸಚಿವರು ಎಚ್ ಕೆ ಪಾಟೀಲ್ ಅವರು ಪ್ರಾಮಾಣಿಕವಾಗಿ ನಿಧಿಯನ್ನು ಸರಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಹಾಗೂ ತಾಯಿ ಗಂಗವ್ವ (ಕಸ್ತೂರೆವಾ)ರಿತ್ತಿ ಕುಟುಂಬವನ್ನು ಭೇಟಿ ಮಾಡಿ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದರು. ಅದೇ ರೀತಿಯಲ್ಲಿ ವಿಶೇಷ ಗ್ರಾಮ ಸಭೆಯಲ್ಲಿ ರಿತ್ತಿ ಕುಟುಂಬಕ್ಕೆ 30×40 ನಿವೇಶನ (ಸೈಟ್)ವನ್ನು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

“ಈ ನಡಾವಳಿ ಪ್ರತಿಯನ್ನು ಇಓ ಅವರಿಗೆ ರವಾನಿಸಿ, ಮನೆ ನಿವೇಶನ ನೀಡಲು ಅಗತ್ಯ ಎಲ್ಲ ದಾಖಲಾತಿಗಳನ್ನು ತಯಾರಿಸಿ, ಜನವರಿ 26 ಗಣರಾಜ್ಯೋತ್ಸವದಂದು ಪ್ರಜ್ವಲ್ ರಿತ್ತಿ ಹಾಗೂ ತಾಯಿ ಗಂಗವ್ವ (ಕಸ್ತೂರೆವ್ವಾ)ರಿತ್ತಿ ಕುಟುಂಬಕ್ಕೆ ನಿವೇಶನ ಪ್ರಮಾಣ ಪತ್ರವನ್ನು ತಲುಪಿಸಲಾಗುತ್ತದೆ” ಎಂದು ತಿಳಿಸಿದರು.

ವಿಶೇಷ ಗ್ರಾಮಸಭೆಯಲ್ಲಿ ಪ್ರಜ್ವಲ್ ರಿತ್ತಿ ಹಾಗೂ ತಾಯಿ ಗಂಗವ್ವ ರಿತ್ತಿ ಕುಟುಂಬವನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...