ಗದಗ | ಮಾಲಿನ್ಯಯುತ ಮನಸ್ಸೇ ಮಸಣ: ಪ್ರಜ್ಞಾ ಮತ್ತೀಹಳ್ಳಿ

Date:

ಪ್ರಸ್ತುತದ ಯುವಜನರು ತಂತ್ರಜ್ಞಾನದ ಗೀಳಿಗೆ ಬಲಿಯಾಗಿ ಮನಸ್ಸನ್ನು ಕಲುಷಿತಗೊಳಿಸಿಕೊಳ್ಳಲಾಗುತ್ತಿದ್ದು, ಮಾಲಿನ್ಯಯುತ ಮನಸ್ಸೇ ಮಸಣವಾಗುತ್ತಿದೆ. ಬದಲಾಗಿ ಉತ್ತಮ ಭವಿಷ್ಯದ ನಿರ್ಮಾಣಕ್ಕಾಗಿ ತಂತ್ರಜ್ಞಾನ ಬಳಸಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಕಿತ್ತೂರಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಪ್ರಜ್ಞಾ ಮತ್ತೀಹಳ್ಳಿ ಕರೆ ನೀಡಿದರು.

ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ‌ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಕುಮಾರವ್ಯಾಸನ ನಾಡಿನಲ್ಲಿ ನಿಂತು ಮಾತನಾಡುವುದೆಂದರೆ ತಾನಾಗಿಯೇ ಉತ್ಸಾಹ ಆವರಿಸಿಕೊಳ್ಳುತ್ತದೆ. ತಾರುಣ್ಯದ ಭರಾಟೆಯ ನಂತರ ಬದುಕಿನಲ್ಲಿ ನಮ್ಮ ಸಾಮರ್ಥ್ಯ ಅರಿವಾಗುವುದು. ನಿಮ್ಮ ಮುಂದಿನ ಬದುಕಿನ ಅನೇಕ ಸಂದರ್ಭಗಳಲ್ಲಿ ಕೀಳರಿಮೆ, ಸಂಕೋಚ, ಭಯ, ಆರ್ಥಿಕ ಕೊರತೆ ಹೀಗೆ ಹಲವು ರೀತಿಯ ತೊಂದರೆಗಳು ಎದುರಾಗಬಹುದು. ಅವುಗಳನ್ನು ಮೀರಿ ನಿಲ್ಲುವ ಶಕ್ತಿ ನಮ್ಮದಾಗಿಸಿಕೊಳ್ಳೋಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬದುಕಿನ ಸವಾಲುಗಳನ್ನು ದೈರ್ಯದಿಂದ ಎದುರಿಸಿ, ಅವುಗಳನ್ನೂ ಮನರಂಜನೆ ಎಂದು ಭಾವಿಸೋಣ. ಸುಖ ಬಂದಾಗ ಸೋಮಾರಿಗಳಾಗಿ, ಕಷ್ಟ ಬಂದಾಗ ಎಚ್ಚರವಾಗಿರುವ ಮನೋವೃತ್ತಿ ತೊರೆದು ಸದಾ ಸನ್ನದ್ಧರಾಗಿರುವ ಅಗತ್ಯವಿದೆ. ನಮ್ಮ ಸಮಸ್ಯೆಗಳನ್ನು ನಾವೇ ಬಗೆಹರಿಸಿಕೊಳ್ಳುವ ಶಕ್ತಿ ಸಂಪಾದಿಸಿಕೊಳ್ಳುವುದು ಪ್ರಸ್ತುತದಲ್ಲಿ ಅಗತ್ಯವಾಗಿದೆ.‌ ಬದುಕಿನ ಬಹುದೊಡ್ಡ ತೊಂದರೆಗಳ ನಡುವೆ ಮತ್ತೊಂದು ಅವಕಾಶ ಸೃಷ್ಟಿಸುವ ಸಾಧ್ಯತೆಯೂ ಇದೆ. ನಮ್ಮೆದುರಿನ ದುರಂತಗಳಲ್ಲಿಯೂ ಒಳಿತನ್ನು ಮಾತ್ರ ಆಯ್ದುಕೊಳ್ಳೋಣ. ಇವತ್ತಿನ ಶಿಕ್ಷಣ ಪದ್ದತಿ ಸೃಜನಶೀಲತೆಯನ್ನು ಕೊಲ್ಲುತ್ತಿದೆ. ಹಾಗಾಗಿ ಸೃಜನಶೀಲತೆ ಬೆಳಸಿಕೊಳ್ಳುವ ಅಗತ್ಯತೆ ತುಂಬಾ ಅಗತ್ಯವಿದೆ. ಸೃಜನಶೀಲತೆ ನಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರವೂ ಆಗಬಹುದು” ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಲ್‌ಜಿಬಿ ಅಧ್ಯಕ್ಷೆ ರಜನಿ ಪಾಟೀಲರವರು ಮಾತನಾಡಿ, “ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳ ಪರಿಶ್ರಮವೇ ಅವರ ಮುಂದಿನ ಗುರಿಗೆ ಉತ್ತಮ ಮಾರ್ಗ ಕಲ್ಪಿಸುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಮುನ್ನಡೆಯಬೇಕಿದೆ. ಸಾಧನೆಯ ಯಶಸ್ಸು ಪಡೆಯಲು ಮಾರ್ಗ ಸರಳವಾಗಿಲ್ಲ. ಆದರೆ ಸತತ ಪರಿಶ್ರಮದಿಂದ ಯಶಸ್ಸಿನ ಹಾದಿಯತ್ತ ಸಾಗಲು ಸಾಧ್ಯ. ಯಶಸ್ಸಿನಲ್ಲಿ ಜ್ಞಾನ ಶಕ್ತಿ, ಇಚ್ಛಾಶಕ್ತಿ, ಕ್ರಿಯಾ ಶಕ್ತಿಯೆಂಬ ಅಂಶ ಆಳವಾಗಿ ಬೇರೂರುವ ಅಗತ್ಯವಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ನಿವೇಶನ ಹಂಚಿಕೆಗೆ ಗ್ರಾಮಸ್ಥರ ಒತ್ತಾಯ

ಕಾರ್ಯಕ್ರಮದಲ್ಲಿ ಯುಜಿಸಿ ನೆಟ್ ಪರೀಕ್ಷೆ ಉತ್ತೀರ್ಣಗೊಂಡ ಮಹಾವಿದ್ಯಾಲಯದ ಉಪನ್ಯಾಸಕ ಪ್ರೊ. ತೇಜಸ್ವಿನಿ ಪರ್ವತೀಕರ ಹಾಗೂ ಸಿ ಎ ಪೌಂಡೇಶನ್ ಪರೀಕ್ಷೆ ಉತ್ತೀರ್ಣಗೊಂಡ ವಿದ್ಯಾರ್ಥಿಗಳಾದ ಗಾಯತ್ರಿ ಮಾದಗುಂಡಿ, ಸಹನಾ ಹುಣಸಿಮರದ ಅವರನ್ನು ಸನ್ಮಾನಿಸಲಾಯಿತು.

ಎಲ್‌ಜಿಬಿ ಸದಸ್ಯ ಮೃತ್ಯುಂಜಯ ಸಂಕೇಶ್ವರ, ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...