ಗದಗ | ಅಂಚೆ ಇಲಾಖೆ ಸೇವೆ ಜನರ ಮನೆ ಬಾಗಿಲಿಗೆ ಲಭಿಸಲಿದೆ: ಅಂಚೆ ಅಧೀಕ್ಷಕ ಪಿ.ಚಿದಾನಂದ

Date:

“ಅಂಚೆ ಇಲಾಖೆಯ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರ ವಿವಿಧ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ” ಎಂದು ಗದಗ ವಿಭಾಗೀಯ ಅಂಚೆ ಅಧೀಕ್ಷಕ ಪಿ.ಚಿದಾನಂದ ಅಭಿಪ್ರಾಯಪಟ್ಟರು.

ಪ್ರಧಾನ ಅಂಚೆ ಕಚೇರಿಯಯಲ್ಲಿ ಬುಧವಾರ  ನಡೆದ ಗದಗ ವಿಭಾಗದ ಪ್ರಶಸ್ತಿ ಪುರಸ್ಕೃತರಿಗೆ ಬಹುಮಾನ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ಪ್ರಸ್ತುತ ಪತ್ರ ವ್ಯವಹಾರ ಜೊತೆಗೆ ಅಂಚೆ ಇಲಾಖೆ ಡಿಜಟಲೀಕರಣ, ಬ್ಯಾಂಕಿಂಗ್,ವಿಮಾ, ಉಳಿತಾಯ ಖಾತೆ, ಠೇವಣಿ, ಅಪಘಾತ ವಿಮೆ ಸೇರಿದಂತೆ ಹಲವು ಯೋಜನೆಗಳನ್ನು ಪರಿಚಯಿಸಲಾಗುತ್ತಿದೆ. ಅವುಗಳನ್ನು ಹೆಚ್ಚೆಚ್ಚು ಜನರಿಗೆ ತಲುಪಿಸುವ ದಿಸೆಯಲ್ಲಿ ಪ್ರತಿಯೊಬ್ಬ ಅಂಚೆ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದರು.

“ಈಗಾಗಲೇ ಹಲವು ವಿಭಾಗದಲ್ಲಿ ಗದಗ ವಿಭಾಗ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಮುಂಚೂಣಿ ಸ್ಥಾನ ಗಿಟ್ಟಿಸಿಕೊಂಡಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಿಷನ್ ಸುರಕ್ಷ ಇದೇ ನ.1ರಿಂದ ಆರಂಭವಾಗಿದೆ. ಈ ವಿಭಾಗದಲ್ಲಿ ನಿರೀಕ್ಷಿತ ಗುರಿ ಸಾಧಿಸುವ ಹಿನ್ನಲೆ ಇನ್ನೂ 48 ದಿನ ಕಾಲಾವಕಾಶ ಇದೆ. ಹಾಗಾಗಿ ಎಲ್ಲರೂ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದರು.

“ನಾಳೆಯಿಂದ 3 ದಿನಗಳ ವಿಶೇಷ ಮೇಳ  ಆಯೋಜಿಸಲಾಗಿದೆ. ಹೆಚ್ಚೆಚ್ಚು ಪಾಲಿಸಿಯನ್ನು ಜನರು ಪಡೆದುಕೊಳ್ಳಬೇಕು. 8ಕ್ಕೂ ಹೆಚ್ಚು ವಿಮೆ ಯೋಜನೆ ಒಳಗೊಂಡಿವೆ. ಇದರಿಂದ ಗದಗ ವಿಭಾಗ ಸಾಧನೆ ವಲಯ ಮತ್ತು ರಾಜ್ಯ,ರಾಷ್ಟ ಮಟ್ಟದ ಮುಂಚೂಣಿ ಸಾಧನೆ ಸಹಕಾರಿಯಾಗಲಿದೆ” ಎಂದರು. 

“ಮುಂಬರುವ ದಿನಗಳಲ್ಲಿಯೂ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿವ ಸಲುವಾಗಿ ಹಲವು‌ ಬಹುಮಾನ ಸಹಿತ ಸ್ಥಾನ ಗಿಟ್ಟಿಸಿಕೊಳ್ಳಲು ಸದಾವಕಾಶವನ್ನು  ಸದ್ಭಳಕೆಗೆ ಮುಂದಾಗಬೇಕು” ಎಂದರು.

“ಎರಡು ವಾರ ವಿಶೇಷ ಉಳಿತಾಯ ಪಾಕ್ಷಿಕ. ಅಂಚೆ ಇಲಾಖೆ ಗದಗ ವಿಭಾಗದಿಂದ ಉಳಿತಾಯ ಪಾಕ್ಷಿಕ. ಎರಡು ವಾರ ವಿಶೇಷ ಮೇಳ ನಡೆಯಲಿದೆ. ಹಾಗಾಗಿ ಎಲ್ಲರೂ ಹೆಚ್ಚೆಚ್ಚು ಖಾತೆ ತೆರೆಯಲು ಮುಂದಾಗಬೇಕು ಜೊತೆಗೆ ಗ್ರಾಹಕರಿಗೆ ಖಾತೆ ತೊರೆಯುವದನ್ನು ಬಿಡುವಂತೆ ಮನವೊಲಿಸಲು ಮುಂದಾಗಬೇಕು” ಎಂದರು.

“ಗದಗ ವಿಭಾಗ ನಿಗದಿತ ಗುರಿ ಸಾಧನೆ ಹಿನ್ನಲೆಯಲ್ಲಿ ರಾಜ್ಯ ಮಟ್ಟದಲ್ಲಿ ಉಳಿತಾಯ ಸೇರಿದಂತೆ ಎಲ್ಲಾ ವಿಭಾಗದಲ್ಲಿ ಮುಂಚೂಣಿ ಸ್ಥಾನದ ಹಿನ್ನಲೆ ಹೊಂದಿದೆ. ಆದರೇ, ಪ್ರಸ್ತುತ ಇನ್ನೂ ಹೆಚ್ಚೆಚ್ಚು ಖಾತೆ ಆರಂಭಕ್ಕೆ ಮುಂದಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ₹3300 ಕಬ್ಬಿನ ದರ ನಿಗದಿ ಮಾಡಲು ರೈತರು ಧರಣಿ

ಪ್ರಧಾನ ಅಂಚೆ ಪಾಲಕರಾದ ಮಂಜುಳಾ ದೇಗಿನಾಳ ಅಧ್ಯಕ್ಷೆತೆ ವಹಿಸಿ ಮಾತನಾಡಿದರು. ಗದಗ‌ ಐಪಿಪಿಬಿ ಮ್ಯಾನೇಜರ್ ಆನಂದ ಸಾಗರ, ಗದಗ ಉಪ ವಿಭಾಗದ ಸಹಾಯಕ ಅಧೀಕ್ಷಕರಾದ ಶ್ರೀಕಾಂತ ಜಾದವ, ರೋಣ ಉಪ ವಿಭಾಗದ ನಿರೀಕ್ಷಕ ವೆಂಕಟೇಶರಡ್ಡಿ ಕೊಳ್ಳಿ ಮಾತನಾಡಿದರು. ಪ್ರಶಸ್ತಿ ಪುರಸ್ಕೃತರ ಪರವಾಗಿ ಬಸವರಾಜ ಮಡಿವಾಳರ ಮಾತನಾಡಿದರು.

ಇದೇ ವೇಳೆ ಅಂಚೆ ಪೇದೆಯಿಂದ ಪದೋನ್ನತಿ ಪಡೆದ ಸರೋಜಾ ಪಟ್ಟಣಶೆಟ್ಟಿ ಅವರನ್ನು ಸನ್ಮಾನಿಸಿ, ಗೌರವಿಸಿಲಾಯಿತು.ಅನೀತಾ ಕುರಿ ಸ್ವಾಗತಿಸಿದರು.ಅಂಚೆ ಸಹಾಯಕ ಬಸವರಾಜ‌ ಶೇಡದ, ಶ್ರೀದೇವಿ ಕಲಕೇರಿ ನಿರೂಪಿಸಿದರು. ಭೀಮಣ್ಣ ದೊಡ್ಡಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...