ಗದಗ | ಅವಳಿ ನಗರಕ್ಕೆ ಸಮರ್ಪಕ ನೀರಿನ ಪೂರೈಕೆಗೆ ಆದ್ಯತೆ ಇರಲಿ : ಸಚಿವ ಎಚ್ ಕೆ ಪಾಟೀಲ

Date:

“ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ಸಮರ್ಪಕ ನೀರು ಪೂರೈಕೆಗೆ ಆದ್ಯತೆ ವಹಿಸಬೇಕು. ಅಲ್ಲದೇ ಪ್ರತಿ ಮೂರು ದಿನಕ್ಕೊಮ್ಮೆ ನೀರು ಪೂರೈಕೆ ಆಗಬೇಕು” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ಸೂಚನೆ ನೀಡಿದರು.

ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರದಂದು ಗದಗ ಬೆಟಗೇರಿ ಅವಳಿ ನಗರಕ್ಕೆ ನೀರು ಸರಬರಾಜು ಕುರಿತಂತೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೂಕ್ತ ನಿರ್ದೇಶನ ನೀಡಿದರು.

“ಅಗತ್ಯ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ನೀರು ಸರಬರಾಜು ಮಾಡಲು ಪ್ರಥಮಾದ್ಯತೆ ನೀಡಬೇಕು. ವಿನಾಕಾರಣ ನೀರಿನ ಅಪವ್ಯಯವನ್ನು ತಡೆದು ಅಗತ್ಯವಿರುವಲ್ಲಿ ನೀರು ಪೂರೈಕೆ ಮಾಡಲು ಅಧಿಕಾರಿ ವರ್ಗ ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿ ದಿನ ರಾತ್ರಿ ನದಿಯಿಂದ ಜಾಕ್ವೆಲ್ ಮೂಲಕ ನೀರನ್ನು ಟ್ಯಾಂಕಿನಲ್ಲಿ ಸಂಗ್ರಹಿಸಿ, ಮುಂಜಾನೆ ವಾರ್ಡ್ ವಾರು ನೀರು ಪೂರೈಕೆಗೆ ವಾಲ್ ಮನ್ ಗಳು ಮುಂದಾಗಬೇಕು” ಎಂದರು.

“ನಗರಸಭೆಯಿಂದ ಸದ್ಯ ಕಾರ್ಯನಿರ್ವಹಿಸುತ್ತಿರುವ ವಾಲ್ಮಾನ್ ಗಳು ಸೂಪರ್ವೈಸರ್ಗಳನ್ನು ಬದಲಾವಣೆ ಮಾಡಬೇಕು. ಅವರಿಗೆ ಪ್ರತ್ಯೇಕ ಬೀದಿ, ವಾರ್ಡ್ ಗಳ ಮರುಹಂಚಿಕೆ ಮಾಡಿ ಸಮರ್ಪಕ ನೀರು ಪೂರೈಕೆಗೆ ಇರುವ ಕ್ರಮ ಕೈಗೊಳ್ಳಬೇಕು, ಈ ಬಗ್ಗೆ ನಗರಸಭೆ ಪೌರಾಯುಕ್ತರು ಮುಂದಾಗಬೇಕು” ಎಂದು ಸಚಿವರು ಸೂಚನೆ ನೀಡಿದರು.

“ನಾವೆಲ್ಲರೂ ನೀರು ಪೂರೈಕೆ ಮಾಡುವ ವಾಲ್ಮೆನ್ ಮೇಲೆ ವಿಶ್ವಾಸವಿಟ್ಟು ಗಮನಿಸೋಣ, ಮುಂದಿನ 100 ದಿವಸದೊಳಗೆ ಸಮರ್ಪಕ ನೀರಿನ ವ್ಯವಸ್ಥೆ ಆಗುವಂತೆ ಅವರು ಕಾರ್ಯನಿರ್ವಹಿಸುವ ವಿಶ್ವಾಸವಿದೆ. ನೀರು ಪೂರೈಕೆ ಕುರಿತಂತೆ ನವಂಬರ್ 1 ರಂದು ಮತ್ತೆ ನಾವೆಲ್ಲರೂ ಸೇರೋಣ, ಆಗ ನೀರಿನ ಸಮಸ್ಯೆ ಪೂರೈಕೆ ಸಂಪೂರ್ಣ ನಿವಾರಣೆಯಾಗಿರಬೇಕು” ಎಂದರು.

“ಅವಳಿ ನಗರಕ್ಕೆ ನೀರು ಪೂರೈಕೆಗಾಗಿಯೇ ಪ್ರತ್ಯೇಕ ಒಬ್ಬ ಇಂಜಿನಿಯರ್ ನೇಮಕ ಮಾಡಿ ನೀರು ಪೂರೈಕೆ ಸರಳೀಕರಣಗೊಳಿಸುವಂತೆ, ಅಲ್ಲದೆ ಪೈಪ್, ವಾಲ್ ನಿಂದ ಪೋಲಾಗುವ ನೀರನ್ನು ತಡೆಯಲು ಶೀಘ್ರ ದುರಸ್ತಿ ಕೈಗೊಳ್ಳಲು” ಸಚಿವ ಹೆಚ್ ಕೆ ಪಾಟೀಲ ಸೂಚಿಸಿದರು.

“ಅವಳಿ ನಗರಕ್ಕೆ ನೀರು ಪೂರೈಕೆ ಕುರಿತಂತೆ ನಗರಸಭೆ ಪೌರಾಯುಕ್ತರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಸಮರ್ಪಕ ನೀರು ಪೂರೈಕೆ ಆಗುತ್ತಿರುವ ಬಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮೇಲುಸ್ತುವಾರಿ ಕಾರ್ಯ ನಿರ್ವಹಿಸಬೇಕು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಮಾತನಾಡಿ, “ಮೊದಲು ದಿಬ್ಬದಲ್ಲಿರುವ ಮನೆಗಳಿಗೆ ನೀರಿನ ಪೂರೈಕೆ ಮಾಡಬೇಕು ನಂತರದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ಪೂರೈಕೆ ಆಗುವಂತೆ ನಿಗ ವಹಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪ್ರಗತಿಪರ ಸಂಘಟನೆಗಳ ಸಮ್ಮುಖದಲ್ಲಿ ವಿವಿಧ ಸಮಸ್ಯೆಗಳ ಕುರಿತು ಚರ್ಚೆ

ಈ ವೇಳೆ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಪ್ರಭು ಬುರುಬುರೆ, ಸಿದ್ದು ಪಾಟೀಲ, ಅಶೋಕ ಮಂದಾಲಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ಅಧಿಕಾರಿ ರೋಹನ್ ಜಗದೀಶ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸವನಗೌಡ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್ ಸೇರಿದಂತೆ ನಗರಸಭೆಯ ಅಧಿಕಾರಿಗಳು, ವಾಲ್ಮಾನ್ ಗಳು ಸೂಪರ್ ವೈಸರ್ ಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...