ಗದಗ | ಮರ್ಯಾದೆ ಹತ್ಯೆ ಖಂಡಿಸಿ ಹೆದ್ದಾರಿ ತಡೆದು ದಲಿತಪರ ಸಂಘಟನೆಗಳು ಪ್ರತಿಭಟನೆ

Date:

ಇನಾಮ್ ವೀರಾಪುರ ಗ್ರಾಮದಲ್ಲಿ ದಲಿತ ಯುವಕ ವಿವೇಕಾನಂದ ಹರಿಜನ ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿ ಗರ್ಭಿಣಿಯಾದ ಮಾನ್ಯ ಪಾಟೀಲ ಯುವತಿಯ ಮರ್ಯಾದೆ ಹತ್ಯೆ ಖಂಡಿಸಿ, ಆರೋಪಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ದಲಿತಪರ ಸಂಘಟನೆಗಳು, ಕನ್ನಡಪರ ಸಂಘಟನೆಗಳು ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಶಿವಾಜಿ ವೃತ್ತದಲ್ಲಿ ಹುಬ್ಬಳ್ಳಿ- ಸೊಲ್ಲಾಪುರ್ ರಾಷ್ಟ್ರಿಯ ಹೆದ್ದಾರಿ ತಡೆದು   ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. 

ಪ್ರತಿಭಟನೆಯಲ್ಲಿ ದಲಿತ ಮುಖಂಡರು ಮತ್ತು ವಸಂತ ಜೋಗಣ್ಣವರ ಮಾತನಾಡಿ, “ಸಮಾಜದಲ್ಲಿ ಜಾತಿ ವ್ಯವಸ್ಥೆ ಇನ್ನೂ ತುಂಬಾ ಇದೆ. ಇಂತಹ ಮರ್ಯಾದೆ ಹತ್ಯೆಯನ್ನು ಖಂಡಿಸಲು ಕಾನೂನನ್ನು ಗಟ್ಟಿಗೊಳಿಸಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದರು. 

ಡಿಎಸ್ಎಸ್ ತಾಲ್ಲೂಕು ಸಂಚಾಲಕರು ದತ್ತಾತ್ರೇಯ ಜೋಗಣ್ಣವರ ಮಾತನಾಡಿ, “ಜಾತಿ ಇಲ್ಲ, ಜಾತಿ ಬೇಡ, ಜಾತಿಯಿಂದ ಆಚೆ ಬನ್ನಿ ಹೀಗೆ ಬೇರೆ ವರ್ಗದವರು ಮತ್ತು ಇತ್ತೀಚೆಗೆ ನಮ್ಮವರು ಹೇಳುವುದು ಸಾಮಾನ್ಯವಾಗಿದೆ. ಆದರೆ ಅದನ್ನು ಯಾರು ಪಾಲಿಸುತ್ತಿಲ್ಲ. ತಂದೆಯೇ ತನ್ನ ಸ್ವಂತ ಮಗಳನ್ನೇ ಕೊಲೆ ಮಾಡುವಂತಹ ಮನಸ್ಥಿತಿಯನ್ನು ಪ್ರೇರೇಪಿಸಿದ್ದು ಜಾತಿಯಲ್ಲವೇ? ಈ ಜಾತಿಗಳ ಮೂಲ ಬೇರು ವರ್ಣಾಶ್ರಮದ ಆಚರಣೆಯಲ್ಲವೇ? ಮಗಳನ್ನು ಕೊಂದ ತಂದೆಯ ಜಾತಿಯವರು ಇದರಿಂದ ನೊಂದುಕೊಂಡಿದ್ದಾರೋ ಅಥವಾ ಖುಷಿಯಾಗಿದ್ದರೋ ಗೊತ್ತಿಲ್ಲ. ಆದರೆ ನಮಗಂತೂ ಪ್ರಪಂಚವನ್ನೇ ಕಾಣದ ಪುಟ್ಟ ಮಗುವಿನ ಗರ್ಭಿಣಿಯನ್ನು ಸಾಯಿಸಿದ್ದು ಹೇಯ ಕೃತ್ಯ ಅನ್ನಿಸಿದೆ” ಎಂದು ಆಕ್ರೋಶ ವ್ಯಕ್ತಪಡಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವ ಹೋರಾಟಗಾರರು ವಿಜಯ ಛಲವಾದಿ ಮಾತನಾಡಿ, “ದಲಿತ ಸಮುದಾಯದವರ ಜೊತೆ ಸಂಬಂಧ ಮಾಡಿಕೊಂಡರೆ ಈ ತರಹ ವಿಕೃತ ಹಂತಕ್ಕೆ ಯೋಚಿಸುತ್ತಾರೆಂಬ ನೋವು ಕಾಡುತ್ತದೆ. ಇಂತಹ ಘಟನೆಗಳು ನಿಲ್ಲಬೇಕು. ಇಲ್ಲದಿದ್ದರೇ ಮನುಕುಲಕ್ಕೆ ಅವಮಾನ” ಎಂದು ವಿಷಾದ ವ್ಯಕ್ತಪಡಿಸಿದರು.

ದಲಿತ ಯುವ ಮುಖಂಡರು ಗುರುನಾಥ ಕೆಂಗಾರಕರ ಮಾತನಾಡಿ, “ಬುದ್ಧ ಬಸವ ಅಂಬೇಡ್ಕರ್ ಅವರು ಸಮಾನತೆಗೆ ಹೋರಾಡಿದ ನಾಯಕರು. ಅವರ ನಾಡಲ್ಲಿ ಈ ರೀತಿಯ ವಿಕೃತಿ ಅವರ ಆಶಯ ತತ್ವಗಳಿಗೆ  ವಿರುದ್ಧವಾಗಿದೆ. ಇಂತಹ ಮನ ಕಲಕುವ ಘಟನೆಯನ್ನು ಮಾಡಿದ ಆರೋಪಿಗಳನ್ನು ಮರಣದಂಡೆಗೆ ವಿಧಿಸಬೇಕು” ಎಂದು ಸರಕಾರಕ್ಕೆ ಒತ್ತಾಯ ಮಾಡಿದರು

ಪ್ರತಿಭಟನೆಯಲ್ಲಿ ಎಫ್ ವೈ ದೊಡ್ಡಮನಿ, ಡಾ. ಮುತ್ತು ಸುರಕೋಡ ಮಾತನಾಡಿದರು. ಪ್ರತಿಭಟನೆಯಲ್ಲಿ ಯಶವಂತ್ ಚಲವಾದಿ, ದುರಗಪ್ಪ ಜೋಗಣ್ಣವರ, ಸಣ್ಣದುರ್ಗಪ್ಪ ದಂಡಾಪುರ, ಪುನೀತ ಜೋಗಣ್ಣವರ, ವಿಕ್ರಂ ಹೊನ್ನಕೇರಿ, ಪ್ರಶಾಂತ್ ತಡಸಿ, ಕಿರಣ ಜೋಗಣ್ಣವರ, ನಬಿಸಬಾ ಕಿಲ್ಲದಾರ, ವಿಜಯ್ ಬಡಿಗೇರ, ಶರಣು ಛಲವಾದಿ, ಖಾಜು ಕಿಲ್ಲದಾರ್, ನವೀನ್ ಜೋಗನ್ನವರ, ಮಾಂತೇಶ ಪೂಜಾರ, ಸಿದ್ದು ಕೆಲಗೇರಿ, ಮುತ್ತು ಪೂಜಾರ, ಪ್ರವೀಣ ಬಾಂಗಿ,ರವಿ ಚಿಂತಾಲ್, ಹಸನ ಮೇಸ್ತ್ರಿ, ಶ್ರೀಕಾಂತ ಜೋಗಣ್ಣವರ, ಅರ್ಜುನ ಮಾದರ ಇನ್ನೂ ಅನೇಕರು ಉಪಸ್ಥಿತರಿದ್ದರು

ವರದಿ: ಗುರುನಾಥ ಬ ಕೆಂಗಾರಕರ, ಸಿಟಿಜನ್ ಜರ್ನಲಿಸ್ಟ್ ನರಗುಂದ

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...