ಗದಗ | ಪ್ರೊ. ಬಿ. ಕೃಷ್ಣಪ್ಪ ಜನ್ಮದಿನ ʼಸಂಘರ್ಷ ದಿನʼವಾಗಿ ಆಚರಿಸಲು ನಿರ್ಧಾರ: ಬಾಲರಾಜ ಅರಬರ‌

Date:

ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಆಶಯ ಈಡೇರಿಸುವ ಹಾಗೂ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ 70ರ ದಶಕದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಟ್ಟುಹಾಕಿದ ಹೋರಾಟಗಾರ ಪ್ರೊ. ಬಿ.ಕೃಷ್ಣಪ್ಪ ಅವರ ಜನ್ಮದಿನವನ್ನು ‘ಸಂಘರ್ಷ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಗದಗ ಸಮಿತಿಯ ಜಿಲ್ಲಾ ಸಂಚಾಲಕ ಬಾಲರಾಜ ಅರಬರ ಹೇಳಿದರು.

ಗದಗ ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಮುಂಡರಗಿ ತಾಲೂಕು ಸಂಚಾಲಕ ಹನಮಂತ ಪೂಜಾರ ಮಾತನಾಡಿ, “ಪ್ರೊ. ಕೃಷ್ಣಪ್ಪ ಅವರಂತಹ ಅಪ್ರತಿಮ ನಾಯಕ, ಚಿಂತಕ, ಹೋರಾಟಗಾರನ ಜನ್ಮದಿನವನ್ನು ‘ಸಂಘರ್ಷ ದಿನ’ವನ್ನಾಗಿ ಆಚರಿಸಲಾಗುವುದು. ಜೂ.9 ರಂದು ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಪುರಭವನದಲ್ಲಿ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕ‌ರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು
ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಾಲ್ಯದಲ್ಲಿ ಅಸ್ಪೃಶ್ಯತೆಯ ಅವಮಾನ, ಶೋಷಣೆ ಅನುಭವಿಸಿದ ಇವರು ಕರ್ನಾಟಕದಲ್ಲಿ ಪ್ರತ್ಯೇಕ ದಲಿತ ಚಳವಳಿ ಪ್ರಾರಂಭಿಸಿದರು. ಪ್ರೊ. ಬಿ. ಕೃಷ್ಣಪ್ಪ- ಹಬ್ಬನವರು ದಲಿತ ಹೋರಾಟಗಾರರಾಗಿ ಅಷ್ಟೇ ಅಲ್ಲದೇ ಪತ್ರಕರ್ತರಾಗಿ, ಲೇಖಕರಾಗಿ ಮತ್ತು ಅಂಬೇಡ್ಕರ್ ವಾದದ ಕಣೋಟದಿಂದ ಸಾಹಿತ್ಯ, ಸಮಾಜ, ರಾಜಕಾರಣವನ್ನು/ ಗ್ರಹಿಸಲು ಪ್ರಯತ್ನಿಸಿದ ಅಪೂರ್ವ ಚಿಂತಕರು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಪ್ರಜಾಪ್ರಭುತ್ವ, ಸಂವಿಧಾನ, ಜನಜೀವನದ ಮೇಲಿನ ದಾಳಿಗೆ ಜನತಾ ತೀರ್ಪು ದೊರಕಿದೆ: ಸಿಪಿಐ(ಎಂ)

ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಗೋಕಾವಿ, ರೋಣ ತಾಲೂಕು ಸಂಚಾಲಕ ಹನಮಂತ ಚಲವಾದಿ, ರಮೇಶ ಚಲವಾದಿ, ಕೆಂಚಪ್ಪ ಮ್ಯಾಗೇರಿ, ಮಾಂತೇಶ ನಡಗಲಿ, ಪ್ರಕಾಶ ಕಮಡೊಳ್ಳಿ, ಪ್ರಕಾಶ ಭಜಂತ್ರಿ, ಹೊನ್ನಪ್ಪ ಸಾಕಿ, ಶ್ರೀಧರ ಕಲಾಲ, ಪ್ರಕಾಶ ಗಡ್ಡದವರ, ಪೂಜಾ ಬೇವೂರ, ಸಂತೋಷ ಜಾಲನ್ನವರ, ಮಾರುತಿ ಅಂಗಡಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...