ಗದಗ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಶೇಖರಗೌಡ ರಾಮತ್ನಾಳ

Date:

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಈ ಕುರಿತು ಅರಿವು ಮೂಡಿಸುವುದು ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಎಲ್ಲ ಇಲಾಖೆಯ ಕರ್ತವ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಸೋಮವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಲವು ಇಲಾಖೆಗಳೊಂದಿಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಅಂಗನವಾಡಿ ಕೇಂದ್ರ, ಶಾಲಾ ಕಟ್ಟಡಗಳ ಮೇಲೆ ಮಕ್ಕಳ ಸಹಾಯವಾಣಿ 1098 ಶಾಶ್ವತ ಫಲಕ ಬರೆಯಿಸಬೇಕು. ಶಾಲೆಗಳಲ್ಲಿ ಪ್ರತಿ ತಿಂಗಳು ಮಕ್ಕಳ ಸಭೆಗಳನ್ನು ಜರುಗಿಸುವದರ ಜೊತೆಗೆ ಗ್ರಾಮ ಪಂಚಾಯಿತಿಗಳಲ್ಲಿಯೂ ಮಕ್ಕಳ ಸಹಾಯವಾಣಿ 1098 ಶಾಶ್ವತ ಫಲಕ ಅಳವಡಿಸಬೇಕು. ಬಾಲ್ಯ ವಿವಾಹ ನಡೆಯುತ್ತಿರುವ ಕುರಿತು ಮಾಹಿತಿ ಬಂದರೆ ವಿಳಂಬಕ್ಕೆ ಆಸ್ಪದ ನೀಡದೆ ಕೂಡಲೇ ಸ್ಥಳಕ್ಕೆ ಧಾವಿಸಿ ಅಗತ್ಯ ದಾಖಲಾತಿಗಳೊಂದಿಗೆ ಎಫ್‌ಐಆರ್ ದಾಖಲಿಸಲು ಕ್ರಮ ವಹಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಾಲೆಯಲ್ಲಿ ಕಡ್ಡಾಯವಾಗಿ ಶೌಚಾಲಯಗಳು ಇರುವ ಹಾಗೆ ಹಾಗೂ ಅವುಗಳ ಸ್ವಚ್ಛತೆಗೆ ಕ್ರಮ ವಹಿಸಿ ಮಕ್ಕಳ ವಸತಿ ಶಾಲೆಗಳಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಲು ಮಕ್ಕಳ ಸಲಹಾ ಪೆಟ್ಟಿಗೆಗಳನ್ನು ತಪ್ಪದೇ ಅಳವಡಿಸಬೇಕು. ಶಾಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ಕಾನೂನು ಬಾಹಿರ ಚಟುವಟಿಕೆಗಳ ತಡೆಗಾಗಿ ಬೀಟ್ ಪೊಲೀಸರು ಶಾಲೆಗಳಿಗೆ ಭೇಟಿ ನೀಡಬೇಕು” ಎಂದು ಸಲಹೆ ಮಾಡಿದರು.

ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಕೆ ಟಿ ತಿಪ್ಪೆಸ್ವಾಮಿ ಮಾತನಾಡಿ, “ಶಾಲೆಗಳಲ್ಲಿ ಮಕ್ಕಳ ನಿಯಮಿತ ಆರೋಗ್ಯ ತಪಾಸಣೆಯಾಗಬೇಕು. ವಸತಿ ಶಾಲೆಯಲ್ಲಿ ಮಕ್ಕಳ ಆರೋಗ್ಯದ ಕುರಿತು ನಿರ್ಲಕ್ಷ್ಯ ತೋರಬಾರದು ಹಾಗೂ ಶಾಲೆಗಳಲ್ಲಿ ಮಕ್ಕಳಿಗೆ ಮೂಲಭೂತ ಸೌಕರ್ಯಗಳು ಒದಗುವಂತೆ ನೋಡಿಕೊಳ್ಳಬೇಕು. ಶಾಲೆಯ ಕಂಪೌಂಡಿನೊಳಗೆ ಸುರಕ್ಷಿತ ವಿದ್ಯುತ್ ಸಂಪರ್ಕ ಇರುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಅಪಘಾತ ಸಂಭವಿಸುವ ಸಾಧ್ಯತೆ ಇದ್ದು ಸಂಬಂಧಿತ ಮುಖ್ಯಸ್ಥರನ್ನೇ ಹೊಣೆಗಾರರಾಗಲಿದ್ದಾರೆ. ಪ್ರತಿ ಗ್ರಾಮ ಪಂಚಾಯತ್‍ಗಳಲ್ಲಿ ಮಕ್ಕಳ ಗ್ರಾಮ ಸಭೆ ನಡೆಸಬೇಕು. ಮಕ್ಕಳಿಗೆ ಏನಾದರೂ ಸಮಸ್ಯೆಯಾದಲ್ಲಿ ಸ್ವತಃ ಮಕ್ಕಳೇ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡುವ ಕುರಿತು ಮಕ್ಕಳಿಗೆ ಅರಿವು ಮೂಡಿಸಬೇಕು” ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಮಾತನಾಡಿ, “ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳ ಹಕ್ಕುಗಳ ಕುರಿತು ಹಾಗೂ ಪೋಕ್ಸೊ ಕಾಯ್ದೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಮಾತನಾಡಿ, “ಜಿಲ್ಲೆಯಲ್ಲಿ 2022-23 ನೇ ಸಾಲಿನಲ್ಲಿ ಒಟ್ಟು 47 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. 2023-24 ನೇ ಸಾಲಿನಲ್ಲಿ (ಜುಲೈ 15, ತಿಂಗಳ ಅಂತ್ಯಕ್ಕೆ ) ಒಟ್ಟು 9 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಕೋವಿಡ್‍ನಿಂದ ಪೋಷಕರಿಬ್ಬರನ್ನು ಕಳೆದುಕೊಂಡು ವಿಸ್ತೃತ ಕುಟುಂಬದ ಸದಸ್ಯರ ಆರೈಕೆಯಲ್ಲಿ 18 ವರ್ಷದೊಳಗಿನ ಮಕ್ಕಳಿಗೆ ಪಾಲನೆ, ಪೋಷಣೆ ಮತ್ತು ರಕ್ಷಣೆ ಒದಗಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಸೌಕರ್ಯ ಒದಗಿಸಲು ಮುಖ್ಯಮಂತ್ರಿ ಬಾಲಸೇವಾ ಯೋಜನೆಯಡಿ ಪ್ರತಿ ಮಗುವಿಗೆ ಪ್ರತಿ ತಿಂಗಳು ₹3,500 ರಂತೆ ಜಿಲ್ಲೆಯಲ್ಲಿ ಒಟ್ಟು 5 ಅರ್ಹ ಫಲಾನುಭವಿ ಮಕ್ಕಳಿಗೆ ಸಹಾಯಧನ ನೀಡಲಾಗುತ್ತಿದೆ. ವಿಶೇಷ ದತ್ತು ಸಂಸ್ಥೆಯಲ್ಲಿ ಒಟ್ಟು 3 ಮಕ್ಕಳು ಪೋಷಣೆ ಪಡೆಯುತ್ತಿವೆ. ಜಿಲ್ಲೆಯಲ್ಲಿ ಶಿಶು ಮಕ್ಕಳ ರಕ್ಷಣೆಗಾಗಿ ಸಾರ್ವಜನಿಕ ಜನದಟ್ಟಣೆ ಇರುವ ಸ್ಥಳಗಳಲ್ಲಿ, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ, ರೇಲ್ವೆ ನಿಲ್ದಾಣಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ. ಸಾರ್ವಜನಿಕರಲ್ಲಿ ಈ ಕುರಿತು ಅರಿವು ಮತ್ತು ಜಗೃತಿ ಮೂಡಿಸಲಾಗಿದೆ” ಎಂದು ಸಭೆಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಅನಾಥೆಯಾಗಿ ಓಡಾಡುತ್ತಿದ್ದ ಮಹಿಳೆಯ ರಕ್ಷಣೆ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧಿಕಾರಿ ಚಳಗೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ ವೈ ಶೆಟ್ಟೆಪ್ಪನವರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಜಗದೀಶ ನುಚ್ಚಿನ, ಬಾಲ ನ್ಯಾಯ ಮಂಡಳಿ ಸದಸ್ಯ ಜೆ ಸಿ ರೇಶ್ಮಿ, ಭಾರತಿ ಶಲವಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಅನ್ನಪೂರ್ಣ ಗಾಣಿಗೇರ ಸೇರಿದಂತೆ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಹಲವು ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...