ಗದಗ | ₹5 ಕೋಟಿ ವೆಚ್ಚದಲ್ಲಿ 13 ಸ್ಮಾರಕಗಳ ರಕ್ಷಣೆ; ಕಾಮಗಾರಿಗೆ ಶಿಲಾನ್ಯಾಸ

Date:

13 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆ ಮಾಡಲು ₹5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ನಡೆದಿದ್ದು, ಜಗತ್ತಿನ ಸಾಂಸ್ಕೃತಿಕ ಸಂಪತ್ತಿಗೆ ಲಕ್ಕುಂಡಿ ಸೇರಿಸಲು ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ಕರೆ ನೀಡಿದರು.

ಗದಗ ತಾಲೂಕಿನ ಲಕ್ಕುಂಡಿಯ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮೈಸೂರಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆಯುತ್ತಿರುವ ₹5 ಕೋಟಿ ವೆಚ್ಚದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 13 ಆರಕ್ಷಿತ ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಲಕ್ಕುಂಡಿಗೆ ಹೋದವರು ಹಂಪಿಗೆ ಹೊಗುತ್ತಾರೆ. ಹಂಪಿಗೆ ಹೋದವರು ಲಕ್ಕುಂಡಿಗೆ ಬಂದೇ ಬರ್ತಾರೆ ಎನ್ನುವಂತಾಗಬೇಕು. ಕಟ್ಟೆಯ ಕೆಳಗೆ ಅವಿತಿರುವ ಕಲೆ, ಶಿಲ್ಪಕಲೆಗಳು ಅದ್ಬುತ ಕಲಾಕೃತಿಗಳ ಉತ್ಖನನವಾಗಬೇಕಾದರೆ ಗ್ರಾಮಸ್ಥರ ಪ್ರೀತಿ, ಸ್ನೇಹ, ವಿಶ್ವಾಸ, ತ್ಯಾಗ ಬೇಕಾಗುತ್ತದೆ” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಲ್ಯಾಣ ಚಾಲುಕ್ಯ ಕಾಲದಲ್ಲಿ ಅದ್ಬುತ ಶಿಲ್ಪಕಲೆಗಳನ್ನು ಅಗೌರವದಿಂದ ನೋಡಲಾಗುತ್ತಿದೆ. ಇಂದಿನ ದಿನದಲ್ಲೂ ತಿಪ್ಪೆಯನ್ನು ಅಗೆದರೆ 20ಕ್ಕೂ ಹೆಚ್ಚು ಶಿಲ್ಪಕಲೆಗಳು ಸಿಗುತ್ತವೆ. ಕಟ್ಟೆಯನ್ನು ಅಗೆದರೂ ಮ್ಯೂಸಿಯಂ ಹಿಡಿಸಲಾಗದಷ್ಟು ಪಾರಂಪರಿಕ ಶಿಲ್ಪಕಲೆಗಳು ದೊರೆಯುತ್ತವೆ. ಆದ್ದರಿಂದ ಗ್ರಾಮಸ್ಥರು, ಯುವಕರು ಶಿಲ್ಪಕಲೆಗಳ ರಕ್ಷಣೆಗೆ ಮುಂದಾಗಬೇಕು” ಎಂದು ಹೇಳಿದರು.

“ಅತ್ಯಂತ ಪ್ರಾಮುಖ್ಯತೆ ಹೊಂದಿರುವ ಲಕ್ಕುಂಡಿಯನ್ನು ಚಾಲುಕ್ಯರು ಠಂಕ ಶಾಲೆಯನ್ನಾಗಿಸಿಕೊಂಡಿದ್ದರು. ಆ ಕಾಲದ ಇತಿಹಾಸ ಸಂಸ್ಕೃತಿ, ವೈಭವದ ಮೆರಗು, ಸಂಭ್ರಮ ಮರುಕಳಿಸುವಂತೆ ಆಂದೋಲನ ಪ್ರಾರಂಭಿಸಿ ಅದಕ್ಕೆ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವ ಕೆಲಸವಾಗಬೇಕು” ಎಂದರು.

“ಕರ್ನಾಟಕದಲ್ಲಿ ಸುಮಾರು 25 ಸಾವಿರ ಸ್ಮಾರಕಗಳಿವೆ. ಅವೆಲ್ಲವನ್ನೂ ಸರ್ಕಾರದಿಂದ ಅಭಿವೃದ್ಧಿಗೊಳಿಸುವುದರ ಜತೆಗೆ ಊರಿನ ಮತ್ತು ಸ್ಮಾರಕಗಳ ಬಗ್ಗೆ ಅಭಿಮಾನ ಹೊಂದಿ ಅಮೇರಿಕದಲ್ಲಿರುವ ಕನ್ನಡಿಗರು ಮುಂದೆಬಂದು ದತ್ತು ತೆಗೆದುಕೊಳ್ಳುತ್ತಿರುವುದು ಗರ್ವ ಮತ್ತು ಹೆಮ್ಮೆಯ ವಿಷಯವಾಗಿದೆ” ಎಂದು ನುಡಿದರು.

ನರಗುಂದ ಶಾಸಕ ಸಿ ಸಿ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, “ಲಕ್ಕುಂಡಿಗೆ ತನ್ನದೇ ಆದ ಐತಿಹಾಸಿಕ ಸ್ಥಾನವಿದೆ. ಪಾರಂಪರಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿರುವ ಲಕ್ಕುಂಡಿಯಲ್ಲಿ 101 ದೇವಾಲಯ, 101 ಬಾವಿಗಳಿವೆ ಎಂಬುದು ಇತಿಹಾಸದಿಂದ ತಿಳಿದುಬಂದರೂ ಸಧ್ಯ 30 ದೇವಾಲಯಗಳು, 30 ಬಾವಿಗಳು ಮಾತ್ರ ಕಂಡುಬರುತ್ತಿವೆ. ಅವುಗಳ ರಕ್ಷಣೆ ಹಾಗೂ ಅಭಿವೃದ್ಧಿ ಅವಶ್ಯಕವಾಗಿದೆ” ಎಂದರು.

“ಸರ್ಕಾರ ಯಾವುದೇ ಇರಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುವುದು ಗ್ರಾಮಸ್ಥರ ಜಾವಾಬ್ದಾರಿಯಾಗಿದೆ. ಲೋಕೋಪಯೋಗಿ ಸಚಿವನಾಗಿದ್ದ ಸಂದರ್ಭದಲ್ಲಿ ಈ ಭಾಗದಲ್ಲಿ 43 ಕೋಟಿ ರೂ. ಅಭಿವೃದ್ಧಿ ಕಾರ್ಯಕ್ರಮಗಳನ್ನು‌ ಮಾಡಲಾಗಿದೆ. ಸಚಿವ ಎಚ್ ಕೆ ಪಾಟೀಲ ಅವರು 5 ಕೋಟಿ ರೂ. ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಆರಂಭಿಕವಾಗಿ ಚಾಲನೆ ನೀಡಿರುವುದು ಸಂತಸದ ವಿಷಯ” ಎಂದರು.

ಲಕ್ಕುಂಡಿ ಗ್ರಾಮದಲ್ಲಿ ಅಪೂರ್ಣಗೊಂಡಿರುವ ಹಾಲಗೊಂಡ ಬಸವೇಶ್ವರ ಸಮುದಾಯ ಭವನ ಕಾಮಗಾರಿಗೆ ಅನುದಾನ ಒದಗಿಸುವುದು ಸೇರಿ ಪ್ರಸಕ್ತ ಸಾಲಿನ ಲಕ್ಕುಂಡಿ ಉತ್ಸವಕ್ಕೂ ಚಾಲನೆ ನೀಡಬೇಕು ಎಂದು ಶಾಸಕ ಸಿ ಸಿ ಪಾಟೀಲ ಅವರು ಸಚಿವರಿಗೆ ಮನವಿ ಮಾಡಿದರು. ಜತೆಗೆ ಸ್ಮಾರಕಗಳ ರಕ್ಷಣೆ, ಸ್ಮಾರಕಗಳ ಅಭಿವೃದ್ಧಿ ಗ್ರಾಮಸ್ಥರ ಹೊಣೆಗಾರಿಕೆಯೂ ಆಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗಣೇಶ ಚತುರ್ಥಿಯ ಮರುದಿನ ಮುಸ್ಲಿಮರ ಈ ಮನೆಯಲ್ಲಿ ಇಲಿ ಪೂಜೆ!

ಹಾಲಗುಂಡಿ ಬಸವೇಶ್ವರ ದೇವಾಲಯ ಮತ್ತು ಮಜ್ಜನ ಬಾವಿ, ಈಶ್ವರ ದೇವಾಲಯ, ಕಲ್ಮಠ ದೇವಾಲಯ ಮತ್ತು ಕಲ್ಮಠ ಬಾವಿ, ಕಣ್ಣರ ಬಾವಿ, ಕೋಟೆ ವೀರಭದ್ರೇಶ್ವರ ದೇವಾಲಯ, ಲಕ್ಷ್ಮಿನಾರಾಯಣ ದೇವಾಲಯ, ಲೆಕ್ಕದ ವೀರಣ್ಣ ದೇವಾಲಯ, ಈಶ್ವರ ಗುಡಿ ಹತ್ತಿರದ ಮಾಳಿ ಬಾವಿ, ಮಲ್ಲಿಕಾರ್ಜುನ ದೇವಾಲಯ, ನೀಲಕಂಠೇಶ್ವರ ದೇವಾಲಯ, ಸಿದ್ದೇಶ್ವರ ದೇವಾಲಯ, ಸೋಮೇಶ್ವರ ದೇವಾಲಯ, ಕಪ್ಪಲಿ ಬಾವಿ, ವಿರೂಪಾಕ್ಷ ದೇವಾಲಯ ಸೇರಿದಂತೆ ಒಟ್ಟು 13 ಅಸುರಕ್ಷಿತ ಸ್ಮಾರಕಗಳ ಸಂರಕ್ಷಣೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

ಲಕ್ಕುಂಡಿ ಗ್ರಾಪಂ ಅಧ್ಯಕ್ಷ ಕೆಂಚಪ್ಪ ಪೂಜಾರ, ಉಪಾಧ್ಯಕ್ಷೆ ಪುಷ್ಪಾ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಚಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಬಿ ಸಂಕದ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ರಾಜ್ಯ ಸಮಿತಿ ಸದಸ್ಯರಾದ ಸಿದ್ಧಲಿಂಗೇಶ್ವರ ಪಾಟೀಲ, ಅ ದ ಕಟ್ಟಿಮನಿ, ಮುಖಂಡರಾದ ವಿವೇಕ ಯಾವಗಲ್, ಅಶೋಕ ಮಂದಾಲಿ ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...