ಗದಗ | ತಹಶೀಲ್ದಾರ್ ಕಛೇರಿ ಸ್ಥಳಾಂತರ ಖಂಡಿಸಿ ಪ್ರತಿಭಟನೆ

Date:

ತಹಶೀಲ್ದಾ‌ರ್ ಕಛೇರಿಯನ್ನು ಎಪಿಎಂಸಿ ಆವರಣದಲ್ಲಿರುವ ಟೆಂಡರ್‌ ಹಾಲ್‌ಗೆ ಸ್ಥಳಾಂತರಿಸುವ ನಿರ್ಧಾರ ವಿರೋಧಿಸಿ ಸೋಮವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ದಾದಾಸಾಹೇಬ್ ಡಾ.ಎನ್.ಮೂರ್ತಿ ಸ್ಥಾಪಿತ) ಹಾಗೂ ಬಾಬು ಜಗಜೀವನ್ ರಾಮ್ ಆದಿ ಜಾಂಬವ ಯುವ ಬ್ರಿಗೇಡ್ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾ‌ರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಮಂಜುನಾಥ್ ಬುರಡಿ ಮಾತನಾಡಿ, “ನಾವು ಸ್ಥಳಾಂತರ ಮಾಡಬೇಕಾಗಿರುವದು ತಾಲ್ಲೂಕು ಪಂಚಾಯಿತಿ ಹೊರತು ತಹಶೀಲ್ದಾ‌ರ್ ಕಚೇರಿಯಲ್ಲ. ಸರ್ಕಾರಿ ಕೆಲಸ ಸಾರ್ವಜನಿಕ ಕೆಲಸ. ತಹಶೀಲ್ದಾ‌ರ್ ಕಚೇರಿ ಇದ್ದ ಸ್ಥಳದಲ್ಲೇ ಇರಬೇಕು. ಜಿಲ್ಲಾಧಿಕಾರಿಗಳು ಕೂಡಲೇ ತಮ್ಮ ಆದೇಶವನ್ನು ಮರಳಿ ಪಡೆಯಬೇಕು. ಇಲ್ಲವಾದರೆ ಮುಂದಿನ ದಿನಮಾನಗಳಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಉಗ್ರ ಹೋರಾಟ ಮಾಡಲಾಗುವದು” ಎಂದು ಎಚ್ಚರಿಕೆ ನೀಡಿದರು.

“ಈ ಕಚೇರಿಯ ಸ್ಥಳಾಂತರದ ಹಿಂದೆ ಕಾಣದ ಕೈಗಳ ಕೈವಾಡ ಇದೆ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸಾರ್ವಜನಿಕರ ಅನುಕೂಲ ಮರೆತು ಪ್ರಭಾವಿಗಳ ಮಾತು ಕೇಳಿ ಸ್ಥಳಾಂತರಿಸಿದ್ದೆ ಆದರೆ ಮುಂದಿನ ದಿನಮಾನಗಳಲ್ಲಿ ಗ್ರಾಮ ಗ್ರಾಮಗಳಲ್ಲಿ ಈ ವಿಷಯವನ್ನು ತಿಳಿಸಿ ಬೃಹತ್ ಮಾಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಜೇಂದ್ರಗಡ ಪಟ್ಟಣ ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು, ಈಗಾಗಲೇ ತಾಲ್ಲೂಕು ಕಚೇರಿಗಳ ಕಟ್ಟಡಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಹೀಗಿರುವಾಗ ತಹಶೀಲ್ದಾ‌ರ್ ಕಚೇರಿಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸುವುದರಿಂದ ಹಲವು ತೊಂದರೆಗಳು ಉಂಟಾಗಲಿವೆ. ಕೂಡಲೇ ಕಚೇರಿ ಸ್ಥಳಾಂತರ ಬಿಡಬೇಕು” ಎಂದು ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕುಕನೂರು | ಮಾನವೀಯ ಮೌಲ್ಯಗಳ ನಾಯಕ ಕೆ ಎಚ್ ಪಾಟೀಲ: ಗೃಹ ಸಚಿವ ಪರಮೇಶ್ವರ್‌

ಈ ಸಂದರ್ಭದಲ್ಲಿ ಶಿವಪ್ಪ ಮುಶಿಗೇರಿ, ಡಿ.ಜಿ. ಕಟ್ಟಿಮನಿ, ಡಿ.ಎಂ. ಸಂದಿಮನಿ, ರವಿ ಮಾದರ, ಯಮನೂರಪ್ಪ ಪುರ್ತಗೇರಿ, ಮಾರುತಿ ಹಾದಿಮನಿ, ಸಣ್ಣಪ್ಪ ಪೂಜಾರ, ಭೀಮಪ್ಪ ಹಿರೇಹಾಳ, ಯಲ್ಲಪ್ಪ ಶಾಂತಗೇರಿ, ರೋಣಪ್ಪ ಚಿಲಝರಿ, ಚನ್ನಪ್ಪ ಪೂಜಾರ, ದುರಗಪ್ಪ ಹಿರೇಮನಿ, ಶಿವು ಭೂಮದ, ಶರಣು ಅರಳಿಗಿಡದ, ಯಮನೂರ ಅಬ್ಬಿಗೇರಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...