ಗದಗ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ; ಆರೋಪಿಗಳ ಬಂಧನಕ್ಕೆ ಛಲವಾದಿ ಮಹಾಸಭಾ ಆಗ್ರಹ

Date:

ಕಾರಟಗಿ ಪಿಎಸ್‌ಐ ಪರಶುರಾಮ್ ಅವರ ಸಾವಿನ ಹಿಂದಿರುವ ಶಕ್ತಿಗಳನ್ನು ಬಂಧಿಸುವಂತೆ ಆಗ್ರಹಿಸಿ ಛಲವಾದಿ ಮಹಾಸಭಾದಿಂದ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಳಿಕ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು.

‌ಈ ವೇಳೆ ಛಲವಾದಿ ಮಹಾಸಭಾದ ಅಧ್ಯಕ್ಷ ಆನಂದ್ ಶಿಂಗಾಡಿ ಮಾತನಾಡಿ, “ಪಿಎಸ್‌ಐ ಸೇವೆ ಸಲ್ಲಿಸುತ್ತಿದ್ದ ಪರಶುರಾಮ್‌ ಎಂಬ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತಪಡಿಸಿರುವ ಗೃಹ ಸಚಿವರ ಹೇಳಿಕೆ ಖಂಡನೀಯ. ಯಾದಗಿರಿ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಪಿಎಸ್‌ಐ ಪರಶುರಾಮ ಅವರ ಸಾವಿನ ಹಿಂದಿನ ಶಕ್ತಿಗಳನ್ನು ಕೂಡಲೇ ಬಂಧಿಸಬೇಕು” ಎಂದು ಆಗ್ರಹಿಸಿದರು.

“ಪಿಎಸ್‌ಐ ಪರಶುರಾಮ ಅವರಿಗೆ ಯಾದಗಿರಿ ಜಿಲ್ಲೆಯ ಶಾಸಕ ಮತ್ತು ಅವರ ಪುತ್ರ ಕಿರುಕುಳ ನೀಡಿ, ಪರಶುರಾಮ್ ಅವರಿಗೆ ಲಂಚದ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಅವರು ಬೇಸರ ವ್ಯಕ್ತಪಡಿಸಿದ್ದರೆಂಬುದು ಅವರ ಕುಟುಂಬದವರ ಆರೋಪದಲ್ಲಿ ನಮೂದಾಗಿದೆ. ಈ ಹಿನ್ನೆಲೆಯಲ್ಲಿ ದಲಿತ ಸಮುದಾಯದ ವ್ಯಕ್ತಿಗಳು ಅಧಿಕಾರ ಹಿಡಿಯುವುದೇ ಸಾಹಸವಾಗಿರುವ ಈ ಕಾಲಘಟ್ಟದಲ್ಲಿ ಅದೇ ಸಮುದಾಯಕ್ಕೆ ಸೇರಿದ ಒಬ್ಬ ಪೋಲಿಸ್ ಅಧಿಕಾರಿಯನ್ನು ರಾಜಕೀಯ ಬಲದಿಂದ ಶಾಸಕರು ಮತ್ತು ಅವರ ಹಿಂಬಾಲಕರು ಕಿರುಕುಳ ನೀಡಿ ಅವರ ಸಾವಿಗೆ ಕಾರಣರಾಗಿದ್ದಾರೆ. ಹಾಗಾಗಿ ಅವರ ಸಾವಿಗೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು” ಎಂದು ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಆನಂದ್ ಶಿಂಗಾಡಿ ಅಸಮಾಧಾನ ವ್ಯಕ್ತಪಡಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಲಿತಪರ ಹೋರಾಟಗಾರ ಶರೀಫ್ ಬಿಳಿಯಲಿ ಮಾತನಾಡಿ, “ದಲಿತ ಸಮುದಾಯದ ಪೋಲಿಸ್ ಅಧಿಕಾರಿಗೆ ಕಿರುಕುಳ ನೀಡಿದ್ದಲ್ಲದೇ ಅವರ ಸಾವಿಗೂ ಕಾರಣರಾಗಿರುವವರ ಮೇಲೆ ಎಸ್‌ಸಿ/ಎಸ್‌ಟಿ ದೌರ್ಜನ್ಯ ಕಾಯ್ದೆ 1989ರ ಅಡಿ ಪ್ರಕರಣ ದಾಖಲಾಗಿದ್ದರೂ ಈವರೆಗೆ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿಲ್ಲ. ಇದು ದಲಿತರಿಗೆ ಮಾಡುವ ಅಪಮಾನವೇ ಸರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಕ್ಷಣೆ ನೀಡಬೇಕಾದ ಪೋಲಿಸ್ ಅಧಿಕಾರಿಗೇ ಈ ರೀತಿ ಆದರೆ ಇನ್ನೂ ಜನಸಾಮಾನ್ಯರ ಗತಿ ಏನು? ದಲಿತರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ದವಾಗಿದೆಯೆಂದು ಹೇಳಿದ ಸರ್ಕಾರ ಇವತ್ತು ದಲಿತರನ್ನು ದಮನ ಮಾಡಲು ಹೊರಟಿದೆ, ಇದು ನಿಲ್ಲಬೇಕು. ಕೇವಲ ದಲಿತಪರ ಕಾಳಜಿ ಇದ್ದರೆ ಸಾಲದು ಅವರ ಶ್ರೇಯೋಭೀವೃದ್ಧಿಗೆ ಕೆಲಸ ಮಾಡಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಪ್ರತ್ಯೇಕ ಘಟನೆ; ತಾಯಿ ಮೇಲೆ ಅತ್ಯಾಚಾರ, ಮನೆಗೆ ನುಗ್ಗಿ ಮಹಿಳೆಯ ಕೊಲೆ

“ಪಿಎಸ್‌ಐ ಪರಶುರಾಮ ಅವರ ಸಾವಿಗೆ ನ್ಯಾಯ ನೀಡಲೇಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಒಂದು ವೇಳೆ ಸರ್ಕಾರ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾದರೆ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ದಲಿತ ಮುಖಂಡ ಬಾಲರಾಜ್ ಅರಬರ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ದಲಿತಪರ ಮುಖಂಡರು ಮುತ್ತು ಬಿಳಿಯಲಿ, ಪರಶು ಕಾಳೆ, ಅನಿಲ್ ಕಾಳೆ, ಬಸವರಾಜ್ ಬಿಳಿಯಲಿ, ಮಲ್ಲೇಶ್ ಹೊಸಮನಿ, ಶಿವಾನಂದ ತಮ್ಮಣ್ಣವರ, ಯಲ್ಲಪ್ಪ, ಮುತ್ತು ಚೌಡಣ್ಣವರ, ರಮೇಶ್ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...