ಗದಗ | ಒಂದೇ ಗೋದಾಮಿನಲ್ಲಿ ಪಡಿತರ ಅಕ್ಕಿ, ರಸಗೊಬ್ಬರ, ಕ್ರಿಮಿನಾಶಕ, ಸಿಮೆಂಟ್ ದಾಸ್ತಾನು: ಆತಂಕದಲ್ಲಿ ಗ್ರಾಮಸ್ಥರು

Date:

ಬಡವರಿಗೆ ಉತ್ತಮ ಗುಣ ಮಟ್ಟದ ಆಹಾರ ಕೊಡುವ ಉದ್ದೇಶದಿಂದ ಸರಕಾರ ಪಡಿತರ ಕಾರ್ಡ್ ವ್ಯವಸ್ಥೆ ಮಾಡಿ, ನ್ಯಾಯ ಬೆಲೆ ಅಂಗಡಿ ಮೂಲಕ ಬಡವರಿಗೆ ಕೊಡಲಾಗುತ್ತದೆ. ಆದರೆ ಇಲ್ಲೊಂದು ನ್ಯಾಯಬೆಲೆಯ ಅಂಗಡಿಯಲ್ಲಿ ಪಡಿತರ ಅಕ್ಕಿಯ ಜೊತೆಗೆ ಗೊಬ್ಬರ, ಕ್ರಿಮಿನಾಶಕದಂತಹ ಎಣ್ಣೆ ಔಷಧಿ, ರಸಗೊಬ್ಬರ, ಶೇಖರಣೆ ಮಾಡಿ, ಜನರಿಗೆ ರೇಷನ್ ಹಂಚುತ್ತಾರೆ. ಜನರ ಜೀವದ ಜೊತೆಗೆ ಚೆಲ್ಲಾಟ ಆಡುತ್ತಿದ್ದಾರೆ.

ಇದು ಬೆಳಕಿಗೆ ಬಂದಿರುವುದು ಗದಗ ಜಿಲ್ಲೆಯ ರೋಣ ತಾಲೂಕಿನ ಹಾಳಕೇರಿ ಗ್ರಾಮದಲ್ಲಿ. ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಸರಕಾರದಿಂದ ಬರುವಂತಹ ರೇಷನ್‌ ಸಾಮಗ್ರಿಗಳನ್ನು ಮಾತ್ರ ಇಟ್ಟುಕೊಂಡು ಜನರಿಗೆ ವಿತರಣೆ ಮಾಡಬೇಕು. ಆದರೆ, ಈ ನ್ಯಾಯಬೆಲೆ ಅಂಗಡಿಯ ವ್ಯವಸ್ಥಾಪಕ ರಸಗೊಬ್ಬರ, ಕ್ರಿಮಿನಾಶಕ ಔಷಧಿಗಳು, ಸಿಮೆಂಟ್, ರೇಷನ್ ಜೊತೆಗೆ ಇಟ್ಟು ಎಲ್ಲವನ್ನೂ ಹಂಚುತ್ತಿದ್ದಾನೆ. ಇದರಿಂದ ಕಲಬೆರಕೆಯಾದರೆ ಜನರ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚಿದೆ.

ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಸರಕಾರಿ ರಜೆ ಹೊರತು ಪಡಿಸಿ, ತಿಂಗಳು ಪೂರ್ತಿ ರೇಷನ್ ವಿತರಣೆ ಮಾಡಬೇಕು. ಆದರೆ ಇಲ್ಲಿ ಕೇವಲ ಮೂರು ದಿನ ವಿತರಣೆ ಮಾಡಿ ಬಂದು ಮಾಡುತ್ತಾರೆ. ಜನರು ಕೇಳಲು ಹೋದರೆ, ರೇಷನ್ ಖಾಲಿ ಆಗಿದೆ, ಮುಂದಿನ ತಿಂಗಳು ಬರಬೇಕು ಎಂದು ದರ್ಪದಿಂದ ವರ್ತಿಸುತ್ತಾನೆ ಎಂಬ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ನ್ಯಾಯಬೆಲೆ ಅಂಗಡಿ ಬೋರ್ಡ್ ಕೂಡ ಸರಿಯಾಗಿ ಕಾಣದಂತೆ ಇಡಲಾಗಿದೆ. ರಾಸಾಯನಿಕ ಗೊಬ್ಬರಗಳೇನಾದರೂ ಯಾವುದಾದರೂ ಪಡಿತರ ಸಾಮಗ್ರಿಯಲ್ಲಿ ಮಿಶ್ರಣವಾಗಿ ಅನಾಹುತವಾದಲ್ಲಿ ಯಾರು ಹೊಣೆ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೇ ಕಟ್ಟಡದಲ್ಲಿ ಎರಡು ಬೋರ್ಡ್

ಹಾಳಕೇರಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಹಾಗೂ ಸಹಕಾರಿ ಪತ್ತಿನ ಸೊಸೈಟಿ ಎರಡು ಒಂದೇ ಕಟ್ಟಡದಲ್ಲಿ ಇವೆ. ಸರಕಾರದ ನಿಯಮಗಳನ್ನು ಇವರು ಲೆಕ್ಕಕ್ಕೆ ಇಡುವುದಿಲ್ಲ. ತಮಗೆ ಹೇಗೆ ತಿಳಿಯುತ್ತದೆಯೋ ಹಾಗೆ ವರ್ತನೆ ಮಾಡುತ್ತಿದ್ದಾರೆ ಎಂದು ಗ್ರಾಮದ ಮಂದಿ ದೂರು ನೀಡಿದ್ದಾರೆ.

WhatsApp Image 2024 10 17 at 3.56.18 PM

ಪಡಿತರ ರೇಷನ್ ಹಾಗೂ ಕ್ರಿಮಿನಾಶಕ ಪದಾರ್ಥಗಳು ಗೊಬ್ಬರ ಎಣ್ಣೆ ಔಷಧಿ, ಸಿಮೆಂಟ್ ಎಲ್ಲವನ್ನು ಒಟ್ಟೊಟ್ಟಿಗೆ ಇಟ್ಟು ಹಂಚುವುದರಿಂದ ಪರಿಣಾಮ ಏನಾಗುತ್ತದೆ ಎಂಬುದು ಪರಿಜ್ಞಾನವಿಲ್ಲದೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಪ್ರಶ್ನಿಸಿದರೆ ನಮ್ಮ ಮೇಲೆಯೇ ರೇಗಾಡುತ್ತಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಸಹಕಾರಿ ಪತ್ತಿನ ಸೊಸೈಟಿಯಲ್ಲಿ ದುಡ್ಡು ಕೊಟ್ಟವರಿಗೆ ಬೀಜ, ಗೊಬ್ಬರ!

ಸರಕಾರದ ನಿಯಮದ ಪ್ರಕಾರ ಸೊಸೈಟಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜಮೀನುದಾರರಿಗೆ, ಸಂಬಂಧಿಸಿದ ದಾಖಲೆಗಳು ಇದ್ದರೆ ಅವರಿಗೆ ಬೀಜ ಗೊಬ್ಬರ ಕೊಡಬೇಕು. ಆದರೆ ಇವರಿಗೆ ಸಿಗುವುದಿಲ್ಲ. ಈ ನಿಯಮ ಕಡೆಗಣಿಸಿ ಯಾರು ದುಡ್ಡು ಕೊಡುತ್ತಾರೋ, ಅವರಿಗೆ ಬೀಜ ಗೊಬ್ಬರ ಕೊಡುತ್ತಾರೆ. ಇಲ್ಲಿರುವ ಡಿ ದರ್ಜೆ ಕೆಲಸಗಾರ ಕೂಡ ಸಾರ್ವಜನಿಕರೊಂದಿಗೆ ಬೇಜವಾಬ್ದಾರಿಯಿಂದ ವರ್ತಿಸುತ್ತಾನೆ ಎಂದು ಅಲ್ಲಿಯ ಜನರು ಹೇಳುತ್ತಾರೆ.

WhatsApp Image 2024 10 17 at 3.56.17 PM

ಈ ದಿನ.ಕಾಮ್‌ನೊಂದಿಗೆ ಹಾಳಕೇರಿ ಗ್ರಾಮಸ್ಥ ಮಂಜು ಬುರಡಿ ಮಾತನಾಡಿ, “ಪಡಿತರ ರೇಷನ್ ಹಾಗೂ ಕ್ರಿಮಿನಾಶಕ ಔಷಧಿಗಳು, ಸಿಮೆಂಟ್ ಎಲ್ಲವನ್ನು ಒಂದೇ ಕಡೆ ಶೇಖರಣೆ ಮಾಡಿ, ಸಾರ್ವಜನಿಕರಿಗೆ ಹಂಚಲಾಗುತ್ತಿದೆ. ಅಕಸ್ಮಾತ್ ಎಲ್ಲವೂ ಕಲಬೆರಕೆಯಾದರೆ ಜನರ ಪ್ರಾಣಕ್ಕೆ ಕುತ್ತು ಬರುವ ಅಪಾಯವಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ತಡೆಗಟ್ಟಬೇಕು. ಇಲ್ಲಿರುವ ಈಗಿನ ಅಧಿಕಾರಿಯನ್ನು ಬೇರೆ ಕಡೆ ಕಳುಹಿಸಿ, ಜನರಿಗೆ ಸ್ಪಂದಿಸುವ ಅಧಿಕಾರಿಯನ್ನು ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ದಿನ.ಕಾಮ್ ನೊಂದಿಗೆ ಗಜೇಂದ್ರಗಡ ಆಹಾರ ಇಲಾಖೆ ಅಧಿಕಾರಿ ಉಮೇಶ್ ಅರಳಿಗಿಡದ ಮಾತನಾಡಿ, “ಈ ವಿಷಯ ಗಮನಕ್ಕೆ ಬಂದಿದ್ದು, ಕೂಡಲೇ ಕ್ರಮ ತೆಗೆದುಕೊಂಡು ಬೇರೆ ಕಡೆ ನ್ಯಾಯಬೆಲೆ ಅಂಗಡಿ ಮಾಡಲು ತಿಳಿಸಿದ್ದೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಅಪಾಯ ಸಂಭವಿಸುವ ಮುನ್ನವೇ ಸಂಬಂಧಿಸಿದ ಅಧಿಕಾರಿಗಳು ಎಚ್ಛೆತ್ತುಕೊಂಡು ತಡೆಗಟ್ಟುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

WhatsApp Image 2024 10 17 at 3.56.19 PM
SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...