ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

Date:

ಸಂವಿಧಾನ ಶಿಲ್ಪಿ ದಿನದರ್ಶಿಕೆ ವಿಶೇಷವೆಂದರೆ ಪ್ರತಿ ಆಯಾ ದಿನದ ದಿನಾಂಕದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಸಂಬಂಧಿಸಿದ ಮಾಹಿತಿ ಇದರಲ್ಲಿದೆ ಎಂದು ದಲಿತ ಕಲಾ ಮಂಡಳಿ ಮುಖಂಡ ಮುತ್ತು ಬಿಳಿಯಲಿ ಹೇಳಿದರು.

ಗದಗ ಪಟ್ಟಣದಲ್ಲಿ ದಲಿತ ಕಲಾ ಮಂಡಳಿಯ ಗೆಳೆಯರು ಸೇರಿ “ಸಂವಿಧಾನ ಶಿಲ್ಪಿ” ದಿನದರ್ಶಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

“ಲಡಾಯಿ ಪ್ರಕಾಶನ ಪ್ರಕಟಿಸಿರುವ 2025ರ ರಾಜ್ಯದಲ್ಲಿ ಲಡಾಯಿ ಪ್ರಕಾಶನ ವೈಚಾರಿಕ ಪುಸ್ತಕಗಳಿಗೆ ಹೆಸರು ವಾಸಿಯಾಗಿದೆ. ಇಂತಹ ಪ್ರಕಾಶನದಿಂದ ಪ್ರತಿವರ್ಷ ಸಂವಿಧಾನ ಶಿಲ್ಪಿ ದಿನದರ್ಶಿಯನ್ನು ಹೊರತಂದು ಸಮಾಜಕ್ಕೆ ವೈಚಾರಿಕತೆಯನ್ನು ಬಿತ್ತುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೇರೆ ಕ್ಯಾಲೆಂಡರ್‌ಗಳು ಬರೀ ಸನಾತನವಾದದಿಂದ ತುಂಬಿರುತ್ತವೆ. ಪಂಚಾಂಗ, ಭವಿಷ್ಯ ಇನ್ನೂ ಮುಂತಾದ ಮೂಢನಂಬಿಕೆಗಳಿಂದ ಕೂಡಿದ್ದು, ಜನರನ್ನು ಮತ್ತಷ್ಟು ಮೌಢ್ಯರನ್ನಾಗಿ ಮಾಡುತ್ತಿವೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಳಪೆ ಕಾಮಗಾರಿ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕೆಆರ್‌ಎಸ್ ಆಗ್ರಹ

“ಪ್ರತಿಯೊಬ್ಬರ ಮನೆಯಲ್ಲೂ ಇಂತಹ ಸಂವಿಧಾನ ಶಿಲ್ಪಿ ದಿನದರ್ಶಿಯನ್ನು ಪ್ರತಿಯೊಬ್ಬರ ಮನೆಯಲ್ಲೂ ಹಾಕಿಕೊಳ್ಳಬೇಕು. ಲಡಾಯಿ ಪ್ರಕಾಶನದ ಬಸೂ(ಬಸವರಾಜ್‌ ಸೂಳಿಬಾವಿ) ಸರ್ ಅವರು ಈ ದಿನದರ್ಶಿಕೆ ಎಲ್ಲರ ಮನೆಗೂ ತಲುಪಬೇಕೆಂಬ ಕಾರಣಕ್ಕೆ ರಿಯಾಯಿತಿ ದರದಲ್ಲಿ ಕೊಡುತ್ತಿದ್ದಾರೆ. ಕೂಡಲೇ ಈ ದಿನದರ್ಶಿಕೆಯನ್ನು ತರಸಿಕೊಳ್ಳಿ” ಎಂದು ಮುತ್ತು ಬಿಳಿಯಲಿ ಮನವಿ ಮಾಡಿದರು.

ಈ ಸಮಯದಲ್ಲಿ ದಲಿತ ಕಲಾ ಮಂಡಳಿ ಮುಖಂಡರಾದ ಆನಂದ ಶಿಂಗಾಡಿ, ಶರೀಫ್ ಬಿಳಿಯಲಿ, ಪರಶು ಕಾಳೆ, ಅನಿಲ್ ಕಾಳೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...