ಗದಗ | ʼಕೆ ಎಚ್ ಪಾಟೀಲ ಐಟಿಐ ಕಾಲೇಜುʼ ಎಂದು ನಾಮಕರಣ 

Date:

ಗದಗ ನಗರದ ಬೆಟಗೇರಿಯ ಕಣಗಿನಹಾಳ ರಸ್ತೆಯಲ್ಲಿರುವ ಐಟಿಐ ಮಹಿಳಾ ಕಾಲೇಜಿಗೆ ಕೆ ಎಚ್ ಪಾಟೀಲ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಚ್ ಕೆ ಪಾಟೀಲ್ ಅವರು ನಾಮಕರಣ ಮಾಡಿದರು.‌

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಐಟಿಐ ಕಾಲೇಜು ಗದಗ ಬೆಟಗೇರಿ ಸಂಯುಕ್ತ ಆಶ್ರಯದಲ್ಲಿ ಬೆಟಗೇರಿಯ ಕಣಗಿನಹಾಳ ರಸ್ತೆಯಲ್ಲಿರುವ ಐಟಿಐ ಕಾಲೇಜಿನಲ್ಲಿ ನಡೆದ ನಾಮಕರಣದ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದರು.

“ಐಟಿಐ ಕಾಲೇಜು 1990-91ರಲ್ಲಿ ವಿಶ್ವಬ್ಯಾಂಕ್ ಯೋಜನೆ ಅಡಿಯಲ್ಲಿ ಮಂಜೂರಾಗಿತ್ತು. ಸ್ವಂತ ಕಟ್ಟಡ ಇಲ್ಲದ್ದರಿಂದ ಕೆ ಎಚ್ ಪಾಟೀಲ ಅವರು ಬೆಟಗೇರಿಯಲ್ಲಿನ ಹುಲಕೋಟಿ ಸಹಕಾರಿ ಶಿಕ್ಷಣ ಸಮಸ್ಥೆಯ ವಸತಿ ನಿಲಯದಲ್ಲಿನ ತಾತ್ಕಾಲಿಕ ತರಬೇತಿ ನೀಡಲು ಅನುಕೂಲ ಮಾಡಿಕೊಟ್ಟಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಂತ ಕಟ್ಟಡ ಕಟ್ಟಲು ಜಮೀನು ಸಿಗದಿರುವ ಸಂದರ್ಭದಲ್ಲಿ ಹುಲಕೋಟಿ ಸಹಕಾರಿ ಶಿಕ್ಷಣ ಸಂಸ್ಥೆಯಿಂದ ಬೆಟಗೇರಿಯಲ್ಲಿನ 1.22 ಎಕರೆ ಜಮೀನನ್ನು ದಾನವಾಗಿ ನೀಡಿ ಸಂಸ್ಥೆಯು ಬೇರಡೆ ಸ್ಥಳಾಂತರವಾಗುವುದನ್ನು ತಪ್ಪಿಸಿ ಬೆಟಗೇರಿಯಲ್ಲಿಯೇ ಉಳಿಯುವಂತೆಯೇ ಮಾಡುವ ಮೂಲಕ ಸಾವಿರಾರು ಬಡಮಕ್ಕಳ ಶಿಕ್ಷಣಕ್ಕೆ ಕೆ ಎಚ್ ಪಾಟೀಲರು ಕಾರಣಕರ್ತರಾಗಿದ್ದರು” ಎಂದು ಶ್ಲಾಘಿಸಿದರು.

“ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, “ದೂರದೃಷ್ಟಿಯ ಹರಿಕಾರ, ಕೆ ಎಚ್ ಪಾಟೀಲ ಅವರು ಅನೇಕ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸಿದ್ದಾರೆ. ಬಡ ಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಈ ಐಟಿಐ ಕಾಲೇಜಿನಲ್ಲಿ ಈ ಬಾಗದ ಬಡಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ರಾಜ್ಯದ, ದೇಶದ ವಿವಿಧ ರಂಗಗಳಲ್ಲಿ ಉತ್ತಮ ಹುದ್ದೆಯಲ್ಲಿ ಕಾರ್ಯನಿರ್ವಹಿಸುವಂತಾಗಲಿ ಹಾಗೂ ಇತರರಿಗೆ ಉದ್ಯೋಗದಾತರಾಗಲಿ” ಎಂದು ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಎಸ್‌ಸಿ/ಎಸ್‌ಟಿ ಅನುದಾನ ಗ್ಯಾರಂಟಿ ಯೋಜನೆಗೆ ಬಳಕೆ; ಬಿಜೆಪಿ ಆರೋಪ

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಿ ಆರ್ ಪಾಟೀಲ, ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ಡಾ. ಬಸವಪ್ರಭು ಹಿರೇಮಠ, ಕೆ ಎಚ್ ಪಾಟೀಲ, ಐಟಿಐ ಸಂಸ್ಥೆಯ ಪ್ರಾಚಾರ್ಯ ಡಾ. ಮಲ್ಲೂರ ಬಸವರಾಜ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...