ಗದಗ | ಕಿಮ್ಸ್ ನಿರ್ದೇಶಕರನ್ನು ಅಮಾನತು ಮಾಡುವಂತೆ ವೈದ್ಯಕೀಯ ಸಚಿವರಿಗೆ ಮನವಿ

Date:

“ಕೆ ಎಚ್ ಪಾಟೀಲ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರನ್ನು ಸೇವೆಯಿಂದ ಅಮಾನತ್ತು ಮಾಡಲು ಅನೇಕ ಗುರುತರಗಳ ಆರೋಪಗಳಿದ್ದು ಸಂಸ್ಥೆಯನ್ನು ಆರ್ಥಿಕವಾಗಿ ಹಿಂದುಳಿಯಲು ಏನೆಲ್ಲಾ ಮಾಡಬಹುದು ಅದನ್ನೆಲ್ಲಾ ಮಾಡುತ್ತಿದ್ದಾರೆ. ಕೂಡಲೇ ನಿರ್ದೇಶಕರನ್ನು ಅಮಾನತು ಮಾಡಬೇಕು”ಎಂದು ಎಡಿಎಸ್ಎಸ್ ಜಿಲ್ಲಾಧ್ಯಕ್ಷ ಶಿವಾನಂದ ತಮ್ಮಣ್ಣವರ ಒತ್ತಾಯಿಸಿದರು.

ಗದಗ ಪಟ್ಟಣದ ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರನ್ನು ಸೇವೆಯಿಂದ ಅಮಾನತ್ತು ಮಾಡುವಂತೆ ಡಾ. ಬಿ. ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ವತಿಯಿಂದ ಕರ್ನಾಟಕ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಡಾ. ಶರಣಗೌಡ ಪಾಟೀಲರವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕಿಮ್ಸ್ ನಲ್ಲಿ ಅಕ್ರಮ ನೇಮಕಾತಿ, ಭ್ರಷ್ಟಾಚಾರ, ಟೆಂಡರ್ ಪ್ರಕ್ರಿಯೆಯಲ್ಲಿ ಕಮಿಷನ್ ದಂಧೆ, ಸಿಬ್ಬಂದಿಗಳಿಗೆ ವಿನಾಕಾರಣ ಕಿರುಕುಳ ಮಾಡುತ್ತಿದ್ದು, ಹಿಟ್ಲರ್ ಆಡಳಿತ ನಡೆಸುತ್ತಿರುವರು. ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಗುತ್ತಿಗೆ ನೌಕರನಿಗೆ ಲೆಕ್ಕ ಅಧೀಕ್ಷಕರೆಂದು ಕಾನೂನು ಬಾಹಿರವಾಗಿ ಆದೇಶ ನೀಡಿದ್ದಾರೆ. ಲೆಕ್ಕ ಅದಿಕ್ಷಕರ ಹುದ್ದೆ ಸರ್ಕಾರದ ಮಟ್ಟದಲ್ಲಿ ಆಯ್ಕೆಯಾಗುತ್ತದೆ. ಇಲ್ಲಿನ ನಿರ್ದೇಶಕರು ನೇಮಕಾತಿಗೆ ಯಾವುದೇ ಸರ್ಕಾರದ ನಿಯಮಗಳನ್ನು ಪಾಲಿಸಿದೆ, ನೇರವಾಗಿ ಅರ್ಹತೆ ಇಲ್ಲದ ಗುತ್ತಿಗೆ ನೌಕರನಿಗೆ ಲೆಕ್ಕ ಅಧೀಕ್ಷಕರ ಹುದ್ದೆಯನ್ನು ನೀಡಿದ್ದಾರೆ. ಇದು ಕಾನೂನು ಬಾಹಿರವಾಗಿದೆ. ಇನ್ನಿತರೇ ಪ್ರಯಾಣ ಭತ್ಯೆಯನ್ನು ನೀಡುತ್ತಿರುವರು. ನಿರ್ದೆಶಕರ ವಾಹನದಲ್ಲಿ ಓಡಾಟ ಮಾಡಿ ಬಸ್ಸಿನಲ್ಲಿ ಹೊದಂತೆ ಮಾಹಿತಿ ನೀಡಿ, ವೇತನವನ್ನೂ ಹೋರತುಪಡಿಸಿ ಪ್ರತಿ ತಿಂಗಳಿಗೆ 25 ರಿಂದ 30 ಸಾವಿರ ಪ್ರಯಾಣ ಭತ್ಯೆ ತೆಗೆದುಕೊಳ್ಳುತ್ತಿರುವನು” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೇಮಕಾತಿಯಲ್ಲಿ ಅನುಮಾನಗಳಿವೆ. ಆರೋಪಗಳಿವೆ. ಇಲಾಖೆಯವರು ಯಾಕೆ ತನಿಖೆ ನಡೆಸಬೇಕು. ಈ ವಿಚಾರಣೆಗೆ ಸೂಕ್ತ ಅಧಿಕಾರಿ ಅಥವಾ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ಭ್ರಷ್ಟಾಚಾರವನ್ನು ಬಯಲಿಗೆ ತರಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮೇ 26ರಿಂದ 28ರವಗೆ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ

“ನಿರ್ದೇಶಕರಿಗೆ ಯಾವುದೇ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅವಕಾಶ ಇರುವುದಿಲ್ಲ. ಕ್ಲೇಮ್ ಎಕ್ಸಿಕ್ಯೂಟಿವ್‌ಗಳ ಹುದ್ದೆಗೆ ಅರ್ಹತೆ ಇಲ್ಲದೆ ಮೂರು ಜನರನ್ನು ಕೆಲಸಕ್ಕೆ ಆದೇಶ ನೀಡಿದ್ದು, ಕೆಲಸ ಮಾಡದೇ ಸಂಬಳ ಪಡೆಯುತ್ತಿದ್ದಾರೆ. ಕೂಡಲೇ ನಿರ್ದೇಶಕರನ್ನು ಅಮಾನತು ಮಾಡಬೇಕು” ಎಂದು ಶಿವಾನಂದ ತಮ್ಮಣ್ಣವರ ಒತ್ತಾಯಿಸಿದರು.

ಈ ಸಮಯದಲ್ಲಿ ಪ್ರದಾನ ಕಾರ್ಯದರ್ಶಿ ನಿತೀಶ್ ಘಟ್ಟೆಣ್ಣವರ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...