ಗದಗ | ಸರಕಾರಿ, ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳು ನಿಷೇಧ: ಸಿಪಿಐ(ಎಂ) ಸ್ವಾಗತ

Date:

“ಬಹುತ್ವವೇ ಜೀವಾಳ ಆಗಿರುವ ಭಾರತವನ್ನು ಹಿಂದುತ್ವವಾದದ ಮೂಲಕ ಏಕ ಧರ್ಮವನ್ನು ಹೇರುವ ಕನಸಿನಲ್ಲಿ ಮುನ್ನಡೆಯುತ್ತಿರುವ ಆರ್‌ಎಸ್‌ಎಸ್ ಗೆ ಈಗ ಶತಮಾನ. ಈ ಹೊತ್ತಿನಲ್ಲಿ ಅದು ತಾನು ಮತ್ತು ತನ್ನ ಅಂಗ ಸಂಸ್ಥೆಗಳ ಮೂಲಕ ನಡೆಸಿಕೊಂಡು ಬಂದಿರುವ ಚಟುವಟಿಕೆಗಳನ್ನು ಅವಲೋಕಿಸಿದರೆ ಜನರನ್ನು ಭಾವನಾತ್ಮಕವಾಗಿ ಸೆಳೆದು ಧರ್ಮಾಧಾರಿತ ವಿಭಜನೆಯನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ. ಸರಕಾರ ಸಾರ್ವಜನಿಕ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧ ಮಾಡಿರುವ ಪ್ರಸ್ತಾಪ ಸಿಪಿಐಎಂ ಸ್ವಾಗತಸುತ್ತದೆ” ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಾಲು ರಾಠೋಡ ಹೇಳಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಅವರು ಪತ್ರಿಕಾ ಹೇಳಿಕೆ ನೀಡಿದ್ದು, “ಎಳೆ ಮಕ್ಕಳನ್ನು ಕೇಂದ್ರೀಕರಿಸಿಕೊಂಡು ಅವರು ನಡೆಸುವ ಚಟುವಟಿಕೆಗಳು ಭವಿಷ್ಯದ ಭಾರತವನ್ನು ಕೋಮುದ್ವೇಷದ ಜ್ವಾಲಾಮುಖಿಯಾಗಿ ಮಾರ್ಪಡಿಸುವುದರಲ್ಲಿ ಸಂಶಯವಿಲ್ಲ” ಎಂದು ಹೇಳಿದ್ದಾರೆ.

“ಜನರ ಮನಸ್ಸಿನಲ್ಲಿ ಕೋಮುವಿಷಬೀಜ ಬಿತ್ತುವ ಉದ್ದೇಶದಿಂದಲೇ ಆಡಳಿತದ ಎಲ್ಲ ವಿಭಾಗಗಳಲ್ಲಿ ತನ್ನ ಸಿದ್ದಾಂತವನ್ನು ಅಂತರಂಗದಲ್ಲಿ ಬೆಂಬಲಿಸುವವರನ್ನು ತೂರಿಸಿರುವ ಸಂಘ ನೆಲದ ಕಾನೂನನ್ನು ಕಾಲಕಸದಂತೆ ಪರಿಗಣಿಸುತ್ತಿದೆ. ತಾನೊಂದು ಸಾಂಸ್ಕೃತಿಕ ಸಂಘಟನೆ ಎಂದು ಕರೆದುಕೊಳ್ಳುವ ಆದರೆ ದೇಶದ ರಾಜಕಾರಣವನ್ನು ತನಗೆ ಬೇಕಾದ ಹಾಗೆ ನಿಯಂತ್ರಿಸುವ ಮತ್ತು ದ್ವೇಷ ರಾಜಕಾರಣವನ್ನು ಮುಂದೊತ್ತುತ್ತಿರುವ ಸಂಗತಿ ಜಗಜ್ಜಾಹಿರವಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ, ಮೆರವಣಿಗೆಗಳನ್ನು ನಡೆಸಲು ನಿರ್ಬಂಧವಿದೆ. ಇದಕ್ಕೆ ತಡೆ ಒಡ್ಡುವ, ಪ್ರಕರಣ ದಾಖಲಿಸುವ ನಗರ ಪೊಲೀಸ್ ಇಲಾಖೆ ಆರ್‌ಎಸ್‌ಎಸ್‌ಗೆ ಪಥಸಂಚಲನಕ್ಕೆ ಅನುಮತಿ ನೀಡಿ ಸಂಚಾರ ನಿರ್ಬಂಧ ಹೇರಿ ಪೊಲೀಸ್ ಬಂದೋಬಸ್ತಿನಲ್ಲಿ ನಡೆಸಿಕೊಟ್ಟ ಘಟನೆ ನಡೆದಿದೆ.

ರಾಜ್ಯದಲ್ಲಿ ಸರಕಾರ ಇದೆಯೋ, ಇಲ್ಲವೋ ಎಂಬಂತಹ ಸ್ಥಿತಿ ಇದೆ” ಎಂದು ಕಿಡಿಕಾರಿದರು.

“ಈ ಮೊದಲೂ ಪೆಹಲ್ಗಾಮ್ ದುರಂತದ ವಿರುದ್ಧ ಇತರ ಸಂಘಟನೆಗಳಿಗೆ ಖಂಡನಾ ಸಭೆ ಶಾಂತಿ ಸಭೆ ನಡೆಸಲು ಅವಕಾಶ ನಿರಾಕರಿಸಿ ಸಂಘದ ಸದಸ್ಯರೂ ಇರುವ ಭಾರತೀಯ ಜನತಾ ಪಕ್ಷದ ನಾಯಕರುಗಳೇ ಭಾಗವಹಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ಮಾಡಿದ ಘಟನೆಯೂ ನಡೆದಿದೆ” ಎಂದಿದ್ದಾರೆ.

“ಇವೆಲ್ಲವನ್ನೂ ಸರಕಾರ ಮತ್ತು ಸಮಾಜ ಗಂಭೀರವಾಗಿ ಪರಿಗಣಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರತಿಪಾದಿಸುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸಲು ಕಂಕಣಬದ್ಧವಾಗಬೇಕು. ಸಹಬಾಳ್ವೆಯ ಸಾಮರಸ್ಯದ ಮೌಲ್ಯಗಳನ್ನು ಸ್ಥಿರವಾಗಿಸಲು ಜನರನ್ನು ಅಣಿನೆರೆಸಬೇಕೆಂದು ಕರೆ ನೀಡುತ್ತದೆ” ಎಂದು ಪತ್ರಿಕಾ ಹೇಳಿಕೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...