ಗದಗ | ಮನರೇಗಾ ಕೆಲಸ ಪಡೆದು ಗ್ರಾಮೀಣ ಮಹಿಳೆಯರು ಆರ್ಥಿಕವಾಗಿ ಸಬಲರಾಗಿ: ಎಡಿಪಿಸಿ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಕಾನೂನುಬದ್ಧವಾಗಿ ‘ಕೆಲಸ ಮಾಡುವ ಹಕ್ಕನ್ನು’ ಪ್ರತಿಪಾದಿಸುತ್ತದೆ. ಆದ್ದರಿಂದ, ಮಹಿಳೆಯರು ತಮ್ಮ ಗ್ರಾಮ ಪಂಚಾಯಿತಿಗೆ ನಮೂನೆ-6ರ ಅರ್ಜಿ ಸಲ್ಲಿಸುವ ಮೂಲಕ ಉದ್ಯೋಗ ಕೇಳಿ ಪಡೆದುಕೊಳ್ಳಬೇಕು ಎಂದು ಗದಗ ಜಿಲ್ಲಾ ಪಂಚಾಯಿತಿ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಕಿರಣ ಎಸ್ ಎಚ್ ಸಲಹೆ ನೀಡಿದರು.

ಜಿಲ್ಲೆಯ ನರಗುಂದ ತಾಲೂಕಿನ ಹದಲಿ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡ ಮಹಿಳಾ ಸ್ನೇಹಿ ಉದ್ಯೋಗ ಖಾತ್ರಿ ಯೋಜನೆಯ ವಿಶೇಷ ಸಭೆಯಲ್ಲಿ ಮಾತನಾಡಿದರು.

“ವಯಸ್ಕ ಸದಸ್ಯರ ಪ್ರತಿ ಕುಟುಂಬಕ್ಕೆ ಆರ್ಥಿಕ ವರ್ಷದಲ್ಲಿ ಕನಿಷ್ಠ 100 ದಿನಗಳ ಖಾತರಿಯ ಕೂಲಿ ಉದ್ಯೋಗವನ್ನು ಒದಗಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯದ ಭದ್ರತೆಯನ್ನು ಖಚಿತಪಡಿಸುತ್ತದೆ. ಕೌಶಲ್ಯರಹಿತ ಕೆಲಸ ಮಾಡಲು ಮಹಿಳೆಯರು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಳತೆ ಪ್ರಕಾರ ಕೆಲಸ ಮಾಡಿದರೆ 316 ರೂ. ಪಾವತಿಸಲಾಗುತ್ತದೆ. ಪ್ರತಿ ಎನ್ಎಂಆರ್‌ನಲ್ಲಿ ಕಡ್ಡಾಯವಾಗಿ ಶೇ.60ರಷ್ಟು ಮಹಿಳೆಯರು ಇರುವಂತೆ ಬಿಎಫ್‌ಟಿ, ಡಿಇಒ ಕ್ರಮವಹಿಸುವಂತೆ ಸೂಚಿಸಿದರು. ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿದ್ದು, ಇದರ ಲಾಭ ಪಡೆದುಕೊಳ್ಳುವುದು ಪ್ರತಿಯೊಬ್ಬರ ಹಕ್ಕಾಗಿದೆ. ಜಿಲ್ಲೆಯಲ್ಲಿ ಶೇ. 60ರಷ್ಟು ಮಹಿಳೆಯರು ಉದ್ಯೋಗ ಖಾತ್ರಿಯಲ್ಲಿ ಕೆಲಸ ನಿರ್ವಹಿಸುವಂತೆ ನೋಡಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಎಲ್ಲ ಹಂತದ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಸಹಕಾರ ನೀಡಬೇಕು” ಎಂದು ಮನವಿ ಮಾಡಿದರು.

ಸಭೆಯಲ್ಲಿ ನರಗುಂದ ತಾಲೂಕು ಪಂಚಾಯತ ಐಇಸಿ ಸಂಯೋಜಕ ಸುರೇಶ ಬಾಳಿಕಾಯಿ ಮಾತನಾಡಿ, “ಮುಂಗಾರು ಮಳೆ ಕೈಕೊಟ್ಟು ಕೈಗೆ ಕೆಲಸ ಇಲ್ಲವಲ್ಲ ಎಂಬ ಕೊರಗುವುದು ಬೇಡ. ಮನರೇಗಾ ಯೋಜನೆಯಡಿ ನಿರಂತರವಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲಸ ಕೊಡಲಾಗುತ್ತಿದೆ. ಯೋಜನೆಯಡಿ ಕೆಲಸ ಪಡೆದು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣವಾಗಬೇಕು” ಎಂದು ತಿಳಿಸಿದರು.

ನರೇಗಾ ತಾಂತ್ರಿಕ ಸಂಯೋಜಕ. ಹನಮಂತ ಡಂಬಳ ಮಾತನಾಡಿ, “ಉದ್ಯೋಗ ಖಾತ್ರಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣ ಹೆಚ್ಚಿಸಲು ಎಲ್ಲ ವೈಯಕ್ತಿಕ ಹಾಗೂ ಇತರ ಕಾಮಗಾರಿಗಳ ಎನ್ಎಂಆರ್‌ಗಳನ್ನು ಮಹಿಳೆಯರ ಹೆಸರಿನಲ್ಲಿ ಸೃಜನೆ ಮಾಡಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಡವರಿಗೆ ಭೂಮಿ ಮಂಜೂರಾತಿ ಗ್ಯಾರಂಟಿ ನೀಡಲಿ: ಮಾರೆಪ್ಪ ಹರವಿ

ಮಹಿಳಾ ಸ್ನೇಹಿ ವಿಶೇಷ ಸಭೆಯಲ್ಲಿ ಹದಲಿ ಗ್ರಾಮ ಪಂಚಾಯಿಯಿ ಪಿಡಿಒ ಎಸ್ ಡಿ ಹಿರೇಮನಿ, ಗ್ರಾಮ ಪಂಚಾಯತ ಅಧ್ಯಕ್ಷ ಗದಿಗೆಪ್ಪ ಮಂತ್ರಿ, ಸದಸ್ಯರುಗಳಾದ ಸಿದ್ದಪ್ಪ ಹಡಗಲಿ, ದಾವಲಬಿ ನರಗುಂದ, ಎನ್‌ಆರ್‌ಎಲ್‌ಎಂ ನರಗುಂದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಮೋಹನಕೃಷ್ಣ, ಎನ್‌ಆರ್‌ಎಲ್‌ಎಂ ಸಮ್ಮೂಹ ಮೇಲ್ವಿಚಾರಕ ಲಕ್ಷ್ಮಣ ಪೂಜಾರ, ಎನ್‌ಆರ್‌ಎಲ್‌ಎಂ ಸಿಬ್ಬಂದಿ ಕಿರಣಕುಮಾರ್ ಮತ್ತು ಮನರೇಗಾ ತಾಂತ್ರಿಕ ಸಿಬ್ಬಂದಿ ಹಾಗೂ ಹದಲಿ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಹದಲಿ ಗ್ರಾಮದ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...