ಗದಗ | ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆ

Date:

ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ವಿನಿಯೋಗವಾಗಬೇಕು. ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಅರ್ಹ ಫಲಾನುಭವಿಗಳಿಗೆ ತಲುಪುವಲ್ಲಿ ವಿಳಂಬವಾಗಬಾರದು ಎಂದು ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌ ತಿಳಿಸಿದ್ದಾರೆ.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಡದವರ ಮೇಲಿನ ದೌರ್ಜನ್ಯ ನಿಯಂತ್ರಿಣ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. “ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಜಾರಿಗೆ ಬಂದಿರುವ ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಕುರಿತು ಅರ್ಹ ಫಲಾನುಭವಿಗಳಿಗೆ ಮಾಹಿತಿ ಒದಗಿಸಬೇಕು. ಅನುದಾನದ ಸಮರ್ಪಕ ಬಳಕೆಯಾಗದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಬಳಗಾನೂರ ಗ್ರಾಮದಲ್ಲಿ ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಅಂಬೇಡ್ಕರ್ ಭವನದ ಸ್ವಚ್ಛತೆ ಸೇರಿದಂತೆ ಸಮರ್ಪಕ ನಿರ್ವಹಣೆಗೆ ಕ್ರಮ ವಹಿಸಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲಿ ರಸ್ತೆ, ಕುಡಿಯುವ ನೀರಿನ ಪೂರೈಕೆ, ಬೀದಿ ದೀಪದ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪ್ರತಿಷ್ಟಿತ ಶಾಲೆಗಳಲ್ಲಿ ಪ್ರವೇಶಾತಿ ಪಡೆದ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ ಕೊಡಲು ನಿರಾಕರಣೆ ಮಾಡುತ್ತಿದ್ದಾರೆಂಬ ದೂರುಗಳಿವೆ. ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ತಾಕೀತು ಮಾಡಿದರು.

ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, “ಈಗಾಗಲೇ ಪರಿಶಿಷ್ಟರ ಮೇಲಿನ ದೌರ್ಜನ್ಯ ಕುರಿತು ದಾಖಲಾದ ಎಲ್ಲ ಪ್ರಕರಣಗಳು 60 ದಿನಗಳೊಳಗೆ ಇತ್ಯರ್ಥವಾಗಿವೆ. ಮುಂದೆ ದಾಖಲಾಗುವ ಪ್ರಕರಣಗಳನ್ನು ವಿಳಂಬ ಮಾಡದೇ ಸೂಕ್ತ ಸಾಕ್ಷಾಧಾರಗಳ ಮುಖಾಂತರ ಶೀಘ್ರವೇ ಇತ್ಯರ್ಥಗೊಳಿಸಲು ಕ್ರಮ ವಹಿಸಲಾಗುವುದು. ಸಮುದಾಯದ ಮೇಲೆ ಆಗುವ ದೌರ್ಜನ್ಯಕ್ಕೆ ಕಾನೂನಿನಲ್ಲಿ ಕಠಿಣ ಶಿಕ್ಷೆಗಳನ್ನು ರೂಪಿಸಲಾಗಿದ್ದು, ಅವುಗಳನ್ನು ನಿರ್ದಾಕ್ಷಿಣ್ಯವಾಗಿ ಜಾರಿಗೊಳಿಸಲಾಗುತ್ತದೆ” ಎಂದರು.

ಸಭೆಯಲ್ಲಿ ಸಮಿತಿಯ ನಾಮನಿರ್ದೇಶಿತ ಸದಸ್ಯ ಎಸ್.ಎನ್ ಬಳ್ಳಾರಿ, ಜಾನು ಲಮಾಣಿ, ಸುರೇಶ ಚಲವಾದಿ, ಮೈಲಾರಪ್ಪ ಕಲಕೇರಿ, ಶಾರದಾ ಕಿತ್ತೂರ, ಸಾವಿತ್ರಿ ಪಾಟೀಲ, ಪ್ರೊ. ಬೇಲೂರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುಶೀಲಾ ಬಿ, ಉಪವಿಭಾಗಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ.ಉಪಕಾರ್ಯದರ್ಶಿ ಬಸವರಾಜ ಅಡವಿಮಠ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ನಗರಾಭಿವೃಧ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ್ , ತಾಲೂಕಾ ತಹಶೀಲ್ದಾರರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...