“ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಇಂದು ಗದಗ ಪಟ್ಟಣದ ಪತ್ರಕಾ ಭವನದಲ್ಲಿ ಸುದ್ದಿಗೋಷ್ಠಿ ಮಾಡಲಾಯಿತು.
ಸುದ್ದಿ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾಧ್ಯಕ್ಷರು ಬಿಲಾಲ್ ಗೋಕಾವಿ, “ನಮ್ಮ ಪಕ್ಷದ ವತಿಯಿಂದ ಈಗಾಗಲೇ ಜನತಾ ಬಜೆಟ್ ಪುಸ್ತಕದಲ್ಲಿ ಮಂಡಿಸಿರುವ ಎಲ್ಲಾ ಜನಪರ ಯೋಜನೆಗಳಿಗೆ ಹಣ ಮೀಸಲಿಡಬೇಕು. ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಬೇಕು. ವಿಶೇಷವಾಗಿ ಗದಗ ಜಿಲ್ಲೆಯಲ್ಲಿ ಸುಮಾರು ವರ್ಷಗಳಿಂದ ಹಲವು ಜ್ವಲಂತ ಸಮಸ್ಯೆಗಳು ಇದ್ದು, ಜಿಲ್ಲೆಯ ಯುವಕ ಯುವತಿಯರಿಗೆ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಸ್ಥಾಪನೆ ಜೊತೆಗೆ ಉತ್ತೇಜನ ನೀಡಬೇಕು” ಎಂದು ಒತ್ತಾಯಿಸಿದರು.
“24*7 ಕುಡಿಯುವ ನೀರಿನ ಅಪೂರ್ಣ ಯೋಜನೆ ಶೀಘ್ರದಲ್ಲಿ ಪೂರ್ಣಗೊಳಿಸಲು ಯೋಜನೆ ಜಾರಿಗೊಳಿಸಬೇಕು. ಗದಗ ನಗರ ಕೇಂದ್ರದಲ್ಲಿ ರಕ್ತ ಭಂಡಾರ ನಿರ್ಮಿಸುವುದು, ವಿಶ್ವವಿದ್ಯಾಲಯ ಸ್ಥಾಪನೆ, ಬೆಟಗೇರಿ ಭಾಗದಲ್ಲಿ ಅಲ್ಪಸಂಖ್ಯಾತ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣ, ಅಲ್ಪಸಂಖ್ಯಾತ ಹಾಸ್ಟೆಲ್ ನಿರ್ಮಾಣ, ನರಗುಂದ ಹಾಗೂ ಗದಗ ನಗರದಲ್ಲಿ ಅಲ್ಪಸಂಖ್ಯಾತರ ಶಾದಿ ಮಹಲ್ ನಿರ್ಮಾಣ ಮಾಡಬೇಕು” ಎಂದರು.
“ನರಗುಂದದಲ್ಲಿ ನಿರ್ಮಿಸುತ್ತಿರುವ ಆಚಾರ್ಯ ಪ್ಲಾಟ್ ಮನೆಗಳ ಸಂಖ್ಯೆ ಹೆಚ್ಚಿಸಬೇಕು. ಶಿರಹಟ್ಟಿ ಪಟ್ಟಣದಲ್ಲಿ ಅನಾವರಣಗೊಂಡು ದುಸ್ಥಿತಿಗೆ ನಿಂತ ಎಪಿಎಂಸಿ ಮಾರುಕಟ್ಟೆ ಸಮರ್ಪಕ ಬಳಕೆಗೆ ವಿಶೇಷ ಯೋಜನೆ ರೂಪಿಸಬೇಕಿದೆ. ಜಿಲ್ಲೆಯ ಈ ಎಲ್ಲ ಸಮಸ್ಯೆಗಳಿಗೆ ಈ ಬಜೆಟ್ ಮಂಡನೆಯಲ್ಲಿ ವಿಶೇಷ ಹಣಕಾಸು ಪ್ಯಾಕೇಜ್ ನೀಡಬೇಕು” ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಫಾನ್ ತರಾಫ್ದರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಜಿಲ್ಲಾ ಖಜಾಂಚಿ ಮದಾರ್ ಶಾಹ್ ಮಕಾನದಾರ್, ಗದಗ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮೀರ್ ಕೊಟ್ಟೂರ್,ಶಿರಹಟ್ಟಿ ಕ್ಷೇತ ಸಮಿತಿ ಅಧ್ಯಕ್ಷರು ಇಸ್ಮಾಯಿಲ್ ನದಾಫ್ ಹಾಗೂ ಕಾರ್ಯದರ್ಶಿ ಅಬ್ದುಲ್ಖಾದರ್ ಕಾಗದಗಾರ, ಫಯಾಜ್ ಪಟೇಲ್, ಮುಸ್ತಾಕ್ ಹೊಸಮನಿ, ಮುಬಾರಕ್ ಗದಗ, ಮುಸ್ತಾಕ್ ಕಟ್ಟಿಮನಿ, ಅಷ್ಪಾಕ್ ಧಾರವಾಡ, ವಾಸೀಮ್ ರಬಕವಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರಾದ ಸುಮಯ್ಯ ಬಳ್ಳಾರಿ, ಕಾರ್ಯದರ್ಶಿ ಕಾಜಲ್ ಬಾಗೇವಾಡಿ ಉಪಸ್ಥಿತರಿದ್ದವರು.





