ಗದಗ | ಭಾರತ ವಿದ್ಯಾರ್ಥಿ ಫೆಡರೇಷನ್‌ನ ಎರಡನೇ ತಾಲೂಕು ಸಮ್ಮೇಳನ

Date:

ಸೌಲಭ್ಯ ವಂಚಿಸುವ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳು ಜಾಗೃತಿ ಹೊಂದಿರಬೇಕು. ಕಳೆದ 35 ವರ್ಷಗಳಿಂದ ಗಜೇಂದ್ರಗಡದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್‌ ಅನೇಕ ಚಾರಿತ್ರಿಕ ಹೋರಾಟ ಮಾಡಿ ಸೌಲಭ್ಯ ಪಡೆಯವಂತಾಗಿದೆ ಎಂದು ಎಸ್‌ಎಫ್‌ಐ ರಾಜ್ಯ ಪದಾಧಿಕಾರಿ ಗಣೇಶ್ ರಾಠೋಡ್ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಈಶ್ವರ್ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆದ ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯ ಎರಡನೇ ತಾಲೂಕು ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಗಜೇಂದ್ರಗಡ ಪಟ್ಟಣದಲ್ಲಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಮತ್ತು ಪಿಜಿ ಕೇಂದ್ರ ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಎಫ್‌ಐ ಜಿಲ್ಲಾ ಮುಖಂಡ ಚಂದ್ರು ರಾಠೋಡ ಪ್ರಾಸ್ತಾವಿಕವಾಗಿ ಮಾತನಾಡಿ, “ಕಳೆದ ಒಂದು ವರ್ಷದಲ್ಲಿ ಎಸ್‌ಎಫ್‌ಐ ಸಂಘಟನೆಯು ಬಾಲಕರ ಹಾಸ್ಟೆಲ್‌, ಪಿಜಿ ಸೆಂಟರ್, ಬಸ್ ಸಮಸ್ಯೆ ನೀಗಿಸುವಂತೆ ಅನೇಕ ಹೋರಾಟ ಮಾಡುತ್ತ ಬಂದಿದ್ದು, ಹೋರಾಟದ ಮೂಲಕವೇ ನ್ಯಾಯ ಪಡೆಯುವ ಕೆಲಸವಾಗುತ್ತದೆ” ಎಂದರು.

ಮುಖ್ಯ ಅತಿಥಿ ಎಸ್‌ಎಫ್‌ಐ ಮಾಜಿ ಮುಖಂಡ ಬಾಲು ರಾಠೋಡ ಮಾತನಾಡಿ, “ವಿದ್ಯಾರ್ಥಿಗಳು ಅಧ್ಯಯನಶೀಲರಾಗಬೇಕು. ಆಗ ಪ್ರಶ್ನೆ ಮಾಡುವ ಹವ್ಯಾಸ ಬೆಳೆಯುತ್ತದೆ. ಹಾಗಾಗಿ ಪುಸ್ತಕಗಳ ಜೊತೆಗೆ ಸಮಾಜವನ್ನು ಅಧ್ಯಯನ ಮಾಡುವ ಕೆಲಸವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಜಿಲ್ಲಾ ಕಾರ್ಯದರ್ಶಿ ಶಿವಾಜಿ ಗಡ್ಡದ ಮಾತನಾಡಿ, “ಎಸ್‌ಎಫ್‌ಐಗೆ ಸ್ವಾತಂತ್ರ್ಯ ಚಳವಳಿಯ ಪರಂಪರೆ ಇದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರದೀಪ್ ಮಾದರ ಮಾತನಾಡಿ, “ತಾಲೂಕು ಸಮಿಯು ಕಳೆದ ಒಂದು ವರ್ಷದಲ್ಲಿ ಹಲವಾರು ಹೋರಾಟ ಮಾಡಿದ್ದು, ಮುಂದೆಯೂ ಹೋರಾಟ ಮುಂದುವರಿಕೊಂಡು ಹೋಗಬೇಕು” ಎಂದು ಹೇಳಿದರು.

ಸಮ್ಮೇಳನದ ಕಲಾಪಗಳು ನಡೆದ ನಂತರ 21 ಜನರ ನೂತನ ಸಮಿತಿಯನ್ನು ಆಯ್ಕೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ಅನಿಲ್ ರಾಠೋಡ, ಕಾರ್ಯದರ್ಶಿಯಾಗಿ ಪ್ರದೀಪ್ ಎಂ, ಉಪಾಧ್ಯಕ್ಷರಾಗಿ ಮಾಹಾಂತೇಶ ಪೂಜಾರ, ಸುದೀಪ್ ಹುಬ್ಬಳ್ಳಿ, ಜ್ಯೋತಿ ಮೇಟಿ ನೇಮಕಗೊಂಡಿದ್ದಾರೆ.

ಸಹಕಾರ್ಯದರ್ಶಿಗಳಾಗಿ ಬಸವರಾಜ ಎಂ, ಮುಪ್ಪಯ್ಯ ಬೆಳವನಕಿ, ಕವಿತಾ ಹೊಸಮನಿ, ಸದಸ್ಯರಾಗಿ ಗುರುನಾಥ ರಾಠೋಡ, ಕಿರಣ ಪಮ್ಮಾರ್, ಸಲೀಂ, ಅನಿಲ್, ನಾಗರಾಜ, ಕಿರಣ ರಾಠೋಡ, ಉಮಕ್ಕಾ ಮಾಳೋತ್ತರ್, ರೇಣುಕಾ ರಾಠೋಡ, ದಾಕ್ಷಾಯಿಣಿ ಜಾಲಿಹಾಳ, ಸವಿತಾ ಬಾಳನಗೌಡ್ರ, ರೂಪಾ ಹಗೇದಾಳ, ಅಂಜಿನಮ್ಮ, ಬಾಳಮ್ಮ, ಶರಣು ಎಂ, ಸುನೀಲ್ ರಾಠೋಡ, ಕೃಷ್ಣಾ ವರಗಾ ಅವರು ನೂತನ ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭಾರೀ ಮಳೆಗೆ ನಲುಗಿದ ನಿವಾಸಿಗಳು; ಸ್ಥಳೀಯ ಆಡಳಿತ ನಿರ್ಲಕ್ಷ್ಯ, ಆರೋಪ

ವಿದ್ಯಾರ್ಥಿನಿಯರ ಉಪಸಮಿತಿಯನ್ನೂ ಕೂಡಾ ಸಮ್ಮೇಳನ ಆಯ್ಕೆ ಮಾಡಿದ್ದು, ಉಪ ಸಮಿತಿಯ ಸಂಚಾಲಕಿಯಾಗಿ ಕವಿತಾ ಮೇಟಿ, ಸಹ ಸಂಚಾಲಕಿಯರಾಗಿ ರೂಪಾ ಹಗೇದಾಳ, ಬಾಳಮ್ಮ ಕೊಣೆಸಾರ್, ರಾಧಿಕಾ ಮಾಳೋತ್ತರ್ ಸದಸ್ಯರಾಗಿ ರೇಣುಕಾ ರಾಠೋಡ, ಕವಿತಾ ಹೊಸಮನಿ, ಪೂಜಾ ಭಾಂಡಗೆ, ಸವಿತಾ ಮಾಳೋತ್ತರ್, ವಿಜಯಲಕ್ಷ್ಮಿ ರಾಠೋಡ, ಪ್ರೀತಿ ಚಿಲಝರಿ, ಸೃಷ್ಟಿ ಮಡಿವಾಳ, ಸೌಮ್ಯ ಹಡಪದ, ಜ್ಯೋತಿ ಮೇಟಿ, ಐಶ್ವರ್ಯ ಹಾದಿಮನಿ, ರಾಧಿಕಾ ಮಾಳೋತ್ತರ್, ಉಮಕ್ಕಾ ಮಾಳೋತ್ತರ್ ಆಯ್ಕೆ ಆಗಿದ್ದಾರೆ.

ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಕಾಲೇಜುಗಳಿಂದ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...