ಗದಗ | ನಿಸ್ವಾರ್ಥ ಕಾಯಕವೇ ಶರಣತ್ವದ ದಾರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ

Date:

“ನಿಸ್ವಾರ್ಥ ಕಾಯಕವೇ ಶರಣತ್ವದ ದಾರಿ. ನಾನು-ನಾನು ಎಂಬ ಅಹಂಕಾರದಿಂದ ಹೊರಬಂದಾಗಲೇ ಶರಣತ್ವ ಸಾಧ್ಯ. ಶರಣರು ತೋರಿಸಿದ ಸಾಧನೆಯ ದಾರಿಯಲ್ಲಿ ಸಾಗುವುದು ನಮ್ಮೆಲ್ಲರ ಕರ್ತವ್ಯ” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಹೇಳಿದರು.

ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾಯಕ ಶರಣ ಮಾದಾರ ಚೆನ್ನಯ್ಯ, ಶರಣ ಸಮಗಾರ ಹರಳಯ್ಯ ಹಾಗೂ ಶರಣ ಡೋಹರ ಕಕ್ಕಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ ಕಾಯಕ ಶರಣರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಜಯಂತಿಗೆ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶರಣತತ್ವ ಚಿಂತಕ ಅಶೋಕ ಬರಗುಂಡಿ ಉಪನ್ಯಾಸ ನೀಡಿದ ಅವರು, ಕಾಯಕವನ್ನು ಕೇವಲ ದುಡಿಮೆಯ ಮಟ್ಟಕ್ಕೆ ಸೀಮಿತಗೊಳಿಸಬಾರದು, ಅದು ಆಧ್ಯಾತ್ಮಿಕ ಸಾಧನೆಯ ದಾರಿ. ೧೨ನೇ ಶತಮಾನದಲ್ಲೇ ಶರಣರು ವೃತ್ತಿಗೆ ಗೌರವ ನೀಡುವ ಮೂಲಕ ಶ್ರೇಣಿಕೃತ ವ್ಯವಸ್ಥೆಗೆ ಸವಾಲು ಹಾಕಿದರು. ದುಡಿಯುವವನೇ ದೇವರು ಎಂಬ ತತ್ವವನ್ನು ಅವರು ಜೀವನದ ಮೂಲಕ ಸಾರಿದರು” ಎಂದು ವಿವರಿಸಿದರು.

“ಶರಣರು ಜಾತಿ, ಧರ್ಮಗಳ ಗಡಿಗಳನ್ನು ಮೀರಿ ಚೈತನ್ಯವೇ ಮೂಲಸ್ವರೂಪ ಎಂದು ಸಾರಿದ್ದು, ಅವರ ತತ್ವ ಇಂದಿಗೂ ಸಮಾಜಕ್ಕೆ ದಿಕ್ಕು ತೋರುತ್ತದೆ” ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಕೆ.ಆರ್. ದುರಗೇಶ್, ಸಹಾಯಕ ಆಯುಕ್ತ ಗಂಗಪ್ಪ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ, ಜನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣನವರ, ಎಸ್.ಎನ್. ಬಳ್ಳಾರಿ, ಶರೀಫ್ ಬಿಳಿಯಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರನ್ನು ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಲಾಯಿತು.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...