ಗದಗ | ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನ: ಪೋಸ್ಟರ್ ಬಿಡುಗಡೆ

Date:

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕೆಎಸ್ಎಸ್ ಕಾಲೇಜಿನಲ್ಲಿ ಎಸ್ಎಫ್ಐ ನ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಸಿಐಟಿಯು ಕಾರ್ಮಿಕ ಸಂಘಟನೆ ಮುಖಂಡ ಮೈಬು ಹವಾಲ್ದಾರ್ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಪದಾಧಿಕಾರಿ ಗಣೇಶ ರಾಠೋಡ್ ಮಾತನಾಡಿ, ಸಾರ್ವತ್ರಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಎಂಬ ಆಶಯದೊಂದಿಗೆ ಶಿಕ್ಷಣದ ಪ್ರಜಾಪ್ರಭುತ್ವೀಕರಣ, ಶಿಕ್ಷಣದ ವಿಕೇಂದ್ರೀಕರಣ, ಶಿಕ್ಷಣದ ಧರ್ಮನಿರಪೇಕ್ಷಕ್ಕಾಗಿ, ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಒತ್ತಾಯಿಸಿ ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನವನ್ನು ಸೆ. 26ರಿಂದ 28ರವರೆಗೆ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಸಂಘಟನೆಯು ಕಳೆದ ಸಮ್ಮೇಳನದಿಂದ ಈ ಸಮ್ಮೇಳನದ ತನಕ ಏನೆಲ್ಲಾ ಗುರಿಗಳನ್ನು ತಲುಪಿದೆವು, ಇನ್ನೂ ತಲುಪಬೇಕಾದ ಗುರಿಗಳೇನು ಎಂಬ ಬಗ್ಗೆ ಸಾರ್ವತ್ರಿಕ ಸಮಾನತೆ ಶಿಕ್ಷಣಕ್ಕಾಗಿ ನಡೆಯುವ ಹೋರಾಟ ಮತ್ತಷ್ಟು ಬಲಿಷ್ಠಗೊಳಿಸಲು ಏನು ಮಾಡಬೇಕೆಂದು ಚರ್ಚಿಸಿ, ವಿಮರ್ಶೆ ಮಾಡಿಕೊಂಡು ಹೊಸ ನಾಯಕತ್ವವನ್ನು ಆಯ್ಕೆ ಮಾಡಿಕೊಂಡು ಮುನ್ನಡೆಯಲು, ರಾಷ್ಟ್ರ ಮತ್ತು ರಾಜ್ಯದ ಶೈಕ್ಷಣಿಕ ಪರಿಸ್ಥಿತಿ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಂಡು ಜಾರಿ ಮಾಡುವ ಗುರಿ ಹೊಂದಿರುತ್ತಾರೆ ಹೀಗಾಗಿ ಈ ಸಮ್ಮೇಳನ ಉನ್ನತ ವೇದಿಕೆಯಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜಿನ ಪ್ರಾಂಶುಪಾಲ ಬಿ ಎನ್ ಗೌಡ್ರ ಮಾತನಾಡಿ, ಈ ಸಮ್ಮೇಳನ ಯಶಸ್ವಿಯಾಗಲಿ ಎಂದು‌ ಹಾರೈಸಿದರು. ಜಿಲ್ಲಾ ಉಪಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, ರಾಜ್ಯ ಸಮ್ಮೇಳನಕ್ಕೂ ಮುನ್ನ ತಾಲೂಕು ಹಾಗೂ ಜಿಲ್ಲಾ ಸಮ್ಮೇಳನಗಳು ನಡೆದು ಅಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ರಾಜ್ಯ ಸಮ್ಮೇಳನಕ್ಕೆ ತೆರಳುತ್ತಾರೆ ನಮ್ಮ ಗದಗ ಜಿಲ್ಲೆಯಿಂದಲೂ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಗದಗ | ಸೆ. 22ರಂದು ಜಿಲ್ಲಾಮಟ್ಟದ ಲಿಂಗಾಯತ ಸಮಾವೇಶ

ಈ ಸಂದರ್ಭದಲ್ಲಿ ಎಸ್ಎಫ್ಐ ನ ತಾಲೂಕು ಅಧ್ಯಕ್ಷ ಅನಿಲ್ ರಾಠೋಡ, ಪದಾಧಿಕಾರಿ ಶರಣು ಎಂ, ಬಸವರಾಜ, ಸದೀಪ್ ಹುಬ್ಬಳ್ಳಿ, ಪ್ರದೀಪ್ ಎಂ, ಸನೀಲ್, ಮಾಂತೇಶ, ಮುಪ್ಪಯ್ಯ ಬೆಳವನಕಿ, ಬಸು, ಅಂದಪ್ಪ ಹಡಪದ, ಪ್ರದೀಪ್ ಮೇಟಿ, ಪ್ರವೀಣ, ಯಲ್ಲಪ್ಪ ಡಂಬಳೇ, ಯವನೂರು ಚೂರಿ, ಶ್ರೀಧರ್ ಕುರಿ, ರಕ್ಷಿತಾ, ಶಂಕ್ರಮ್ಮ, ಕಾಲೇಜಿನ ವಿದ್ಯಾರ್ಥಿಗಳು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...