“ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ವ್ಯಾಪ್ತಿಗೆ ಬರುವ ಮೂರಾರ್ಜೀ ದೇಸಾಯಿ ಮಾದರಿ ವಸತಿ ಶಾಲೆ ಕಾಲಕಾಲೇಶ್ವರದಲ್ಲಿ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಬೆಂಗಳೂರಿನಲ್ಲಿ ಎಸ್ ಎಫ್ಐ ಸಂಘಟನೆ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ರಾಕೇಶ್ ಕುಮಾರ್ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಜಂಟಿ ನಿರ್ದೇಶಕರಾದ ಶಿವಾನಂದ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷರು ಚಂದ್ರು ರಾಠೋಡ ಮಾತನಾಡಿ, ” ಮುರಾರ್ಜಿ ವಸತಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಕಾಟಾ ಬೆಡ್, ಸೋಪ್ ಕೀಟ್, ಸಮವಸ್ತ್ರ, ಆಟದ ಸಾಮಗ್ರಿಗಳು, ಕೊಠಡಿ ಸೋರಿಕೆ, ಬ್ಯಾಗ್, ವಿದ್ಯುತ್ ರಿಪೇರಿ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೂ ಸಾಕ್ಸ್ , ಸಮವಸ್ತ್ರ ವಿತರಿಸಲು ಮನವಿ ಸಲ್ಲಿಸಲಾಯಿತು” ಎಂದರು.
“ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಹಾಗೂ ಅಧಿಕಾರಿಗಳ ಜವಾಬ್ದಾರಿ ಆದರೆ ಮೂರಾರ್ಜೀ ದೇಸಾಯಿ ಮಾದರಿ ವಸತಿ ಶಾಲೆ ಕ್ರೈಸ್ ಸಂಸ್ಥೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುತ್ತದೆ. ಆದರೆ ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಗದಗ , ಶಾಲೆಯ ಮೂಖ್ಯೊಪಾಧ್ಯಾಯರು ಈವರೆಗೂ ವಿದ್ಯಾರ್ಥಿಗಳಿಗೆ ಅವರ ಹಕ್ಕುಗಳನ್ನು ಸೌಲಭ್ಯಗಳನ್ನು ಕಲ್ಪಿಸುತ್ತಿಲ್ಲ. ವಿದ್ಯಾರ್ಥಿಗಳಿಗೆ ದ್ರೋಹ ಮಾಡುತ್ತಿದ್ದಾರೆ” ಎಂದರು.
ಈ ಸಂದರ್ಭದಲ್ಲಿ ಎಸ್ ಎಫ್ ಐ ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್, ರಾಜ್ಯ ಸಹಕಾರ್ಯದರ್ಶಿ ಚಂದ್ರು ರಾಠೋಡ, ರಾಜ್ಯ ಉಪಾಧ್ಯಕ್ಷರಾದ ಬಸವರಾಜ ಗುಳೇದಾಳ್, ಪದಾಧಿಕಾರಿಗಳಾದ ಅನಂತರಾಜ್, ಹಾಗೂ ವೆಂಕಟೇಶ್ ಇದ್ದರು.





