ಗದಗ | ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಎಸ್ಎಫ್ಐ ಒತ್ತಾಯ

Date:

“ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಡಾ. ಬಿ. ಆರ್. ಅಂಬೇಡ್ಕರ್ ಬಾಲಕರ ಮೆಟ್ರೀಕ್ ನಂತರದ ವಸತಿ ನಿಲಯದಲ್ಲಿ ಸುಮಾರು 120 ವಿದ್ಯಾರ್ಥಿಗಳ ಇದ್ದಾರೆ. ನಿಲಯದಲ್ಲಿ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ದೊರೆಯುತ್ತಿಲ್ಲ” ಎಂದು ಗದಗ ಜಿಲ್ಲೆಯ ರೋಣ ಪಟ್ಟಣದ ವಸತಿ ನಿಲಯದ ಮುಂದೆ ಎಸ್ ಎಫ್ ಐ ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, “ಈ ವಸತಿ ನಿಲಯದಲ್ಲಿ ದಿನನಿತ್ಯ ಸುಮಾರು ನೂರು ಜನ ವಿದ್ಯಾರ್ಥಿಗಳು ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಇಲ್ಲ. ಸೋಪ್ ಕೀಟ್, ಹಾಸಿಗೆ ಹೋದಿಕೆ, ಆಟದ ಸಾಮಗ್ರಿಗಳು ಇಲ್ಲ. ಶೌಚಾಲಯ ಸ್ವಚ್ಛತೆ ಇಲ್ಲ, ಗ್ರಂಥಾಲಯ ಇಲ್ಲ, ಬಿಲ್ಡಿಂಗ್ ಸೋರಿಕೆಯಾಗುತ್ತದೆ. ಇಷ್ಟೆಲ್ಲ ಸಮಸ್ಯೆಗಳು ಇದ್ದರೂ ಅಧಿಕಾರಿಗಳು ಕಣ್ತೆರೆದು ನೋಡುತ್ತಿಲ್ಲ” ಎಂದು ಕಿಡಿಕಾರಿದರು.

“ಈ ಶೈಕ್ಷಣಿಕ ವರ್ಷ ಆರಂಭವಾಗಿ ಸುಮಾರು ಆರು ತಿಂಗಳು ಗತಿಸಿದರೂ ಕೂಡ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳು ಸಿಗದೇ ಇರುವುದು ಖೇದಕರ. ರೋಣ ಶಾಸಕರು ಜಿ. ಎಸ್. ಪಾಟೀಲ ಅವರು ಸ್ಥಳೀಯರಾಗಿದ್ದು, ಗ್ರಾಮೀಣ ಭಾಗದಿಂದ ಬಂದ ಹಾಸ್ಟೆಲ್ ವಿದ್ಯಾರ್ಥಿಗಳ ಸಮಸ್ಯೆಗಳ ಕೂಗು ಕೇಳಲಿಲ್ಲ ಅನಿಸುತ್ತದೆ. ಆದರೆ ಎಸ್ಎಫ್ಐ ಸಂಘಟನೆ ಅವುಗಳನ್ನು ಖಂಡಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ವಸತಿ ನಿಲಯದಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಸರಿಪಡಿಸಲು ಎಸ್ ಎಫ್ ಐ ನೇತೃತ್ವದಲ್ಲಿ ಹೋರಾಟ ಮಾಡಿದ್ದಾರೆ. ಸಂಬಂಧಪಟ್ಟ ಇಲಾಖೆಯ ಜಿಲ್ಲಾಧಿಕಾರಿಗಳು ಹಾಗೂ ತಾಲೂಕಾ ಅಧಿಕಾರಿಗಳು ಬಾಲಕರ ಮೆಟ್ರಿಕ್ ನಂತರದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕೊಡಬೇಕು ” ಎಂದು ಆಗ್ರಹಿಸಿದರು.

ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ತಾಲೂಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗೀತಾ ಆಲೂರ ಅವರು, “ಎಲ್ಲ ಸೌಲಭ್ಯಗಳನ್ನು ಒದಗಿಸಲು ಸಮಯಬೇಕು” ಎಂದಾಗ ವಿದ್ಯಾರ್ಥಿಗಳು ತಿರಸ್ಕರಿಸಿದರು. 

“ತಕ್ಷಣಕ್ಕೆ ಕೆಲವು ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದ್ದು, ಸೋಪ್ ಕೀಟ್, ಹಾಸಿಗೆ ಹೋದಿಕೆ, ನೀರು, ಶೌಚಾಲಯ ಸ್ವಚ್ಛತೆ, ಆಟದ ಸಾಮಗ್ರಿಗಳು, ಸ್ನಾನಕ್ಕೆ ಬಕೆಟ್ ಇವುಗಳನ್ನು ಕಲ್ಪಿಸಿದರು. ಇನ್ನೂ ಕೆಲವು ಬೇಡಿಕೆಗಳು ಕಟ್ಟಡ ಸೋರಿಕೆ, ಕೀಟಕಿ ರೀಪೇರಿ, ಸೋಳ್ಳೇ ಪರದೆ, ಕಂಪ್ಯೂಟರ್ ಲ್ಯಾಬ್ ಇವುಗಳನ್ನು ಒಂದು ತಿಂಗಳ ಅವಧಿಯಲ್ಲಿ ಸರಿಪಡಿಸುತ್ತೇವೆಂದು ಲಿಖಿತ ರೂಪದಲ್ಲಿ ಭರವಸೆ” ನೀಡಿದರು.

ಪ್ರತಿಭಟನೆಯಲ್ಲಿ ಮೇಲ್ವಿಚಾರಕರು ಅಲಿ ನದಾಫ, ಗಜೇಂದ್ರಗಡ ಎಸ್ ಎಫ್ ಐ ತಾಲೂಕ ಅಧ್ಯಕ್ಷರು ಅನಿಲ್ ಆರ್, ಹಾಸ್ಟೆಲ್ ಉಪ ಸಮಿತಿಯ ಸಹ ಸಂಚಾಲಕರು ಶರಣು ಮಾಟರಂಗಿ ಹಾಗೂ ದುರಗಪ್ಪ ಮಾದರ, ಸುನೀಲ್ ರಾಠೋಡ, ಪರಶುರಾಮ ಲಮಾಣಿ ಮಹಾಂತೇಶ, ಹನುಮಂತಪ್ಪ ನೆಲ್ಲೂರ, ಸಂಗಪ್ಪ ಮಾದರ, ಮಾಂತೇಶ್ ದ್ಯಾಮಣ್ಣವರ, ರಾಜೇಶ ಮಾದರ ದರ್ಶನ್ ಚಲವಾದಿ, ಗಂಗಾಧರ್ ಲಮಾಣಿ ಹಾಗೂ ವಸತಿ ನಿಲಯದ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...