ಗದಗ | ಸಿಬ್ಬಂದಿ ಕೊರತೆ: ಮೃಗಾಲಯ ನಿರ್ವಹಣೆಗೆ ಸ್ವಯಂಸೇವಕರ ನೆರವಿಗೆ ಅಧಿಕಾರಿಗಳ ಮನವಿ

Date:

  • 20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ
  • 30 ಸ್ವಯಂಸೇವಕರನ್ನು ಹುಡುಕುತ್ತಿರುವ ಅಧಿಕಾರಿಗಳು

ಗದಗ ಜಿಲ್ಲೆಯಲ್ಲಿರುವ ಬಿಂಕದಕಟ್ಟಿ ಮೃಗಾಲಯದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ತಡವಾಗುತ್ತಿರುವ ಹಿನ್ನೆಲೆ, ಮೃಗಾಲಯದ ಕೆಲಸಗಳಲ್ಲಿ ಸ್ವಯಂಸೇವಕರು ತೊಡಗಿಸಿಕೊಳ್ಳಬಹುದು. ಶೀಘ್ರದಲ್ಲಿಯೇ ಸ್ವಯಂಸೇವಕರನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಮೃಗಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

“ಮೃಗಾಲಯಕ್ಕೆ 30 ಸ್ವಯಂಸೇವಕರನ್ನು ಹುಡುಕುತ್ತಿದ್ದೇವೆ. 18 ವರ್ಷ ಮೇಲ್ಪಟ್ಟ ಯುವಜನರು ಸ್ವಯಂಸೇವಕರಾಗಿ ಸೇರಿಕೊಳ್ಳಬಹುದು. ಆಯ್ಕೆಯಾದವರಿಗೆ ತರಬೇತಿ ನೀಡಲಾಗುತ್ತದೆ. ಪ್ರಾಣಿ ಪ್ರಿಯರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ಕೆ ಕೈಜೋಡಿಸಬೇಕು” ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

“ಸ್ವಯಂಸೇವಕರು ವಾರಾಂತ್ಯದಲ್ಲಿ ಮೃಗಾಲಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಜೂ ಮತ್ತು ಪ್ರಾಣಿಗಳ ಬಗ್ಗೆ ಮಾರ್ಗದರ್ಶನ ನೀಡವ ಮತ್ತು ಇತರ ಚಟುವಟಿಕೆಗಳಲ್ಲಿ ಭಾವಹಿಸಬಹುದು. 100 ಗಂಟೆಗಳ ಸ್ವಯಂಸೇವಕ ಚಟುವಟಿಕೆಗಳನ್ನು ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈಗಾಗಲೇ 17 ಮಂದಿ ನೋಂದಣಿ ಮಾಡಿಕೊಂಡಿದ್ದು, ಮೊದಲ ತರಬೇತಿ ಕಾರ್ಯಕ್ರಮ ಆರಂಭಿಸಲು ಇನ್ನೂ 13 ಮಂದಿ ನೋಂದಣಿ ಮಾಡಿಕೊಳ್ಳುವ ಅಗತ್ಯವಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ 20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ. ಅಷ್ಟು ಮಂದಿಯಿಂದ ಮೃಗಾಲಯದ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಹೆಚ್ಚಿನ ಕೆಲಸದ ಹೊರೆಯಿಂದಾಗಿ ಪ್ರಾಣಿಗಳನ್ನು ಯಾವಾಗಲೂ ನೋಡಿಕೊಳ್ಳುವುದು ಕಷ್ಟಕರವಾಗಿದೆ. ಹೀಗಾಗಿ, ಅಧಿಕಾರಿಗಳು ಸ್ವಯಂಸೇವಕರನ್ನು ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ಧೀರಾ?: ಚುನಾವಣೆ 2023 | ಮೈಸೂರು-ಚಾಮರಾಜನಗರ: ಮೊದಲ ಬಾರಿಗೆ ಗೆದ್ದಿದ್ದ ಎಂಟು ಶಾಸಕರ ಕತೆ ಈಗೇನು?

“ನಾವು ಸಾಮಾಜಿಕ ಮಾಧ್ಯಮಗಳ ನಮ್ಮ ಖಾತೆಗಳಲ್ಲಿ ಕೆಲವು ದಿನಗಳ ಹಿಂದೆ ಸ್ವಯಂಸೇವಕರಾಗಿ ನಮ್ಮೊಂದಿಗೆ ತೊಡಗಿಸಿಕೊಳ್ಳುವಂತೆ ಪ್ರಾಣಿ ಪ್ರಿಯರಿಗೆ ಮನವಿ ಮಾಡಿದ್ದೇವೆ. ಪೋಸ್ಟ್‌ಗೆ ಪ್ರತಿಕ್ರಿಯಿಸಿ, 10ಕ್ಕೂ ಹೆಚ್ಚು ಜನರು ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. ಅವರಲ್ಲಿ ಕೆಲವರು ವಿದ್ಯಾರ್ಥಿಗಳು” ಎಂದು ಮೃಗಾಲಯದ ಅಧಿಕಾರಿ ಕರೋಲ್ ಅಮನ್ನಾ ತಿಳಿಸಿದ್ದಾರೆ.

“ನೋಂದಣಿ ನಂತರ, ನಾವು ಅರ್ಜಿ ಸಲ್ಲಿಸಿದವರ ಆಸಕ್ತಿಯನ್ನು ಪರಿಶೀಲಿಸುತ್ತೇವೆ. ಪ್ರಾಣಿಗಳ ಬಗ್ಗೆ ಮತ್ತು ಇತರ ಅಂಶಗಳ ಬಗ್ಗೆ ಅವರು ಏನು ತಿಳಿದಿದ್ದಾರೆ ಎಂಬುದನ್ನು ನಾವು ಪರಿಶೀಲಿಸುತ್ತೇವೆ. ನಂತರ ಸ್ವಯಂಸೇವಕರಿಗೆ ಪ್ರಾಣಿಗಳ ಸ್ವಭಾವ, ಭೇಟಿ ನೀಡುವ ಜನರೊಂದಿಗೆ ಹೇಗೆ ಸಂವಹನ ನಡೆಸಬೇಕು ಎಂಬು ಸೇರಿದಂತೆ ಮತ್ತು ಇತರ ಅಂಶಗಳ ಕುರಿತು ತರಬೇತಿ ನೀಡುತ್ತೇವೆ. ತರಬೇತಿ ಪೂರ್ಣಗೊಳಿಸಿದ ನಂತರ, ಅವರನ್ನು ಮೃಗಾಲಯದಲ್ಲಿ ಸ್ವಯಂಸೇವಕರಾಗಿ ಬಳಸಿಕೊಳ್ಳುತ್ತೇವೆ,” ಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...