ಗದಗ | ಸೀತಾರಾಮ್ ಯೆಚೂರಿ ನಿಧನ; ಎಸ್‌ಎಫ್‌ಐನಿಂದ ಸಂತಾಪ

Date:

ದೇಶದ ನಾಡಿಮಿಡಿತ ಅರಿತ ಸಂಸದೀಯ ಪಟು, ಆರ್ಥಿಕ ಸಲಹೆಗಾರ ಸೀತಾರಾಮ್ ಯೆಚೂರಿ ಅವರು 1975ರಲ್ಲಿ ಜೆಎಸನ್‌ಯು ವಿವಿಯಲ್ಲಿ ಅಧ್ಯಯನ ಮಾಡುವ ಸಮಯದಲ್ಲಿ ಅಂದಿನ ಪ್ರಧಾನಮಂತ್ರಿಯಾಗಿದ್ದ ಇಂದಿರಾಗಾಂಧಿ ವಿರುದ್ಧ ಹೋರಾಟ ಮಾಡಿ ಜೈಲಿಗೆ ಸೇರಿದ್ದರು ಮತ್ತು ಉಪಕುಲಪತಿಯ ರಾಜೀನಾಮೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು ಎಂದು ಎಸ್‌ಎಫ್‌ಐ ಗದಗ ಜಿಲ್ಲಾ ಮುಖಂಡ ಚಂದ್ರು ರಾಠೋಡ ಸ್ಮರಿಸಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ಕಚೇರಿಯಲ್ಲಿ ತಾಲೂಕು ಸಮಿತಿಯಿಂದ ನೇತಾರ ಸೀತಾರಾಮ್ ಯೆಚೂರಿ ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

“ಎಸ್‌ಎಫ್‌ಐ ಅಖಿಲ ಭಾರತ ಮಾಜಿ ಅಧ್ಯಕ್ಷ ಕಾಮ್ರೇಡ್ ಸೀತಾರಾಮ್ ಯೆಚೂರಿಯವರು ನಮನ್ನಗಲಿದ್ದಾರೆ. ವಿದ್ಯಾರ್ಥಿ ಯುವಜನರು, ರೈತರು, ಕಾರ್ಮಿಕರಪರ ಯಶಸ್ವಿ ಸಂಘರ್ಷಾತ್ಮಕ ಹೋರಾಟಗಳನ್ನು ಕಟ್ಟಿ ಪಾರ್ಲಿಮೆಂಟ್ ಸದಸ್ಯರಾಗಿ ಎರಡುಬಾರಿ ಅತ್ಯುತ್ತಮ ಸಂಸದೀಯ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯೆಚೂರಿಯವರು ಸಂಸದೀಯ ಅನೇಕ ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಆರ್ಥಿಕ ಸಲಹೆ ನೀಡಿದ್ದಾರೆ. ತಮ್ಮ ಜೀವನದ ಕೊನೆವರೆಗೂ ದುಡಿಯುವ ಜನರ ಪರವಾಗಿ, ಕೋಮುವಾದಿ ಫ್ಯಾಸಿಸ್ಟನ್ನು ಹಿಮ್ಮೆಟ್ಟಿಸಲು ಶ್ರಮಿಸಿದ ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರ ಅಗಲಿಕೆ ದೇಶದ ದುಡಿಯುವ ಜನರ ಚಳವಳಿಗೆ ತುಂಬಲಾರದ ನಷ್ಟವಾಗಿದೆ” ಎಂದು ಕಣ್ಣೀರು ಮಿಡಿದರು.

“ದೇಶದ ಜನರ ನಾಡಿಮಿಡಿತ, ಆರ್ಥಿಕತೆ, ಸಾಮಾಜಿಕತೆ, ರಾಜಕೀಯ, ಸಾಂಸ್ಕೃತಿಕತೆ ಬಗ್ಗೆ ಆಳವಾದ ಅಧ್ಯಯನ ಮಾಡಿದ್ದರು. ಸ್ಪಷ್ಟತೆಯ ನಿಲವು ಹೊಂದಿದ್ದರು, ಸಲಹೆ ನೀಡುತ್ತಿದ್ದರು. ಈಗ ಅವರ ಅಗಲಿಕೆ ದೇಶದ ಪ್ರಜಾಸತ್ತಾತ್ಮಕ ಶಕ್ತಿಗಳಿಗೆ ತುಂಬಲಾರದ ನಷ್ಟ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದು ಅವೈಜ್ಞಾನಿಕ: ರೈತ ಸಂಘ

ಈ ಸಂದರ್ಭದಲ್ಲಿ ಎಸ್‌ಎಫ್‌ಐನ ಪದಾಧಿಕಾರಿಗಳಾದ ಅನಿಲ್ ರಾಠೋಡ, ಸುದೀಪ್ ಹುಬ್ಬಳ್ಳಿ, ಸಿಪಿಎಂ ಪಕ್ಷದ ನಗರ ಸಮಿತಿ ಕಾರ್ಯದರ್ಶಿ ಮೆಹಬೂಬ್ ಹವಾಲ್ದಾರ್‌, ಕಾರ್ಮಿಕ ಮುಖಂಡರಾದ ಕನಕರಾಯ ಹಾದಿಮನಿ, ಪ್ರಾಕಾಶ ಹೊಸಮನಿ, ಶರಣಪ್ಪ ಗೋಸಾವಿ, ಫೀರೋಜಿ ರಾಮ್‌ಜೀ, ಕಳಕಪ್ಪ ಅವಧೂತ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...