ಗದಗ | ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಶ್ರೀರಾಮ ಸೇನೆ

Date:

“ನಮ್ಮ ಸಂವಿಧಾನದ ರಾಷ್ಟ್ರ ಧ್ವಜದ ನಿಯಮಗಳಲ್ಲಿ ಒಂದು ನಿಯಮ ಇದೆ ಅದು ನಮ್ಮ ರಾಷ್ಟ್ರ ಧ್ವಜದ ಸಮಾನಾಂತರವಾಗಿ ಯಾವುದೇ ಧ್ವಜವನ್ನು ಹಾರಿಸಬಾರದದು ಎಂದು ಇದೆ. ಆದರೆ ಗದಗ ಪಟ್ಟಣದಲ್ಲಿ ಶ್ರೀರಾಮ ಸೇನೆ ಸಂಘಟನೆಯವರು ರಾಷ್ಟ್ರ ಧ್ವಜದ ಸಮಾನಾಂತರವಾಗಿ ಭಗವಾಧ್ವಜವನ್ನು ಹಾರಿಸಿ ಸಂವಿಧಾನಕ್ಕೆ ಹಾಗೂ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ದಲಿತ ಮುಖಂಡರು ಮುತ್ತಣ್ಣ ಚವಡಣ್ಣವರ ಅವರು ಪ್ರತ್ಯೇಕ್ಷವಾಗಿ ನೋಡಿ ನಮಗೆ ತಿಳಿಸಿದ್ದಾರೆ” ಎಂದು  ದಲಿತ ಹೋರಾಟಗಾರ ಮುತ್ತು ಬಿಳಿಯಲಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಗದಗ ಪಟ್ಟಣದಲ್ಲಿ ಈದಿನ.ಕಾಮ್ ಪತ್ರಿಕಾ ಹೇಳಿಕೆ ನೀಡಿದ ಅವರು, “ಕರ್ನಾಟಕ ಸರ್ಕಾರ 2024 ರಲ್ಲಿ ನವೆಂಬರ್ 26 ಹಾಗೂ ಆಗಸ್ಟ್ 15 ರಂದು ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಗಾಂಧೀಜಿಯವರ ಭಾವಚಿತ್ರದ ಜೊತೆಗೆ ಡಾ.ಬಿ.ಅರ್.ಅಂಬೇಡ್ಕರ ಅವರ ಭಾವಚಿತ್ರವನ್ನು ಇಟ್ಟು ಧ್ವಜಾರೋಹಣ ಮಾಡಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದರೂ ಕೂಡ ಶ್ರೀರಾಮ ಸೇನೆ ಸರ್ಕಾರದ ಆದೇಶಕ್ಕೆ ಬೆಲೆ ಕೊಟ್ಟಿಲ್ಲ. ಬ್ರಿಟಿಷರ ಜೊತೆ ಹೋರಾಟ ಮಾಡಿ, ಈ ನಾಡಿಗಾಗಿ ತನ್ನ ಪ್ರಾಣವನ್ನು ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಸಂಗೋಳ್ಳಿ ರಾಯಣ್ಣನವರ ಭಾವಚಿತ್ರದ ಜೊತೆಗೆ ಇಡೀ ಸ್ವಾತಂತ್ರ್ಯ ಚಳುವಳಿಯಲ್ಲಿ ಏನು ಕೊಡುಗೆ ಸಲ್ಲಿಸದ ಹಾಗೂ ಬ್ರಿಟಿಷರಿಗೆ ಕ್ಷಮಾಪಣಾ ಪತ್ರವನ್ನು ಬರೆದುಕೊಟ್ಟ ಸಾವರ್ಕರ್ ಅವರ ಭಾವಚಿತ್ರವನ್ನು ಇಟ್ಟು ಸಂಗೋಳ್ಳಿ ರಾಯಣ್ಣನವರಿಗೂ ಅವಮಾನ ಮಾಡಿದ್ದಾರೆ” ಎಂದು ಸಮಾಧಾನ ವ್ಯಕ್ತಪಡಿಸಿದರು.

“ಶ್ರೀರಾಮ ಸೇನೆ ಭಾರತ ಸಂವಿಧಾನಕ್ಕೆ ಹಾಗೂ ಸಂವಿಧಾನದ ಪಿತಾಮಹ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರಿಗೆ ಅವಮಾನ ಮಾಡುವುದು ಇದು ಹೊಸತೆನಲ್ಲ. ಇವರು ಮಾಡುವ ಪ್ರತಿಯೊಂದು ಹೋರಾಟ ಹಾಗೂ ಚಟುವಟಿಕೆಗಳು ಸಂವಿಧಾನದ ವಿರುದ್ಧವಾಗಿರುತ್ತವೆ. ಶ್ರೀರಾಮ ಸೇನೆ ಗದಗದಲ್ಲಿ ಇವರು ದಲಿತ ಮಿತ್ರ ಮೇಳ ಎಂಬ ಸಹಭಾಗಿ ಸಂಘಟನೆಯನ್ನು ಹುಟ್ಟುಹಾಕಿ ದಲಿತ ಯುವಕರನ್ನು ಬಳಸಿಕೊಂಡು ಅವರ ತಲೆಯಲ್ಲಿ ಹುಸಿ ಹಿಂದುತ್ವ ಹಾಗೂ ದೇಶಭಕ್ತಿಯ ಹೆಸರಿನಲ್ಲಿ ಅವರಿಂದ ಸಂವಿಧಾನ ಬಾಹಿರವಾಗಿ ಕೆಲಸಗಳನ್ನು ಮಾಡಿಸುತ್ತಾರೆ. ರಾಜ್ಯದ ಅನೇಕ ದಲಿತ ಯುವಕರು ಸಂವಿಧಾನ ಬಾಹಿರ ಕೃತ್ಯಗಳನ್ನು ಮಾಡಿ ಅನೇಕ ಕೇ‌ಸ್ ಗಳನ್ನು ಹಾಕಿಕೊಂಡು ಕೋರ್ಟು, ಪೋಲಿಸ್ ಠಾಣೆಗೆ ಅಲೆದಾಡುತ್ತಿದ್ದಾರೆ” ಎಂದು ಆರೋಪಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸಕ್ರೆಬೈಲ್​ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷ

“ಶ್ರೀರಾಮ ಸೇನೆ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ ಕುರಿತು ಗದಗ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿಗಳು ಈ ಕೂಡಲೇ ಸುಮೋಟೊ ಕೇಸ್ ದಾಖಲು ಮಾಡಿಕೊಳ್ಳಬೇಕು. ದೇಶ ವಿರೋಧಿಗಳಿಗೆ ದೇಶದ್ರೋಹ ಕೇಸ್ ಹಾಕಿ ಶ್ರೀರಾಮ ಸೇನೆ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಈ ಮೂಲಕ ಕರ್ನಾಟಕ ಸರ್ಕಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟದಿಂದ ಒತ್ತಾಯ ಮಾಡುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...