ಗದಗ | ವಿದ್ಯಾರ್ಥಿಗಳು ಉದ್ಯೋಗಾಧಾರಿತ ಕೌಶಲ್ಯ ರೂಢಿಸಿಕೊಳ್ಳಬೇಕು: ನಾಗರಾಜ ದೇಶಪಾಂಡೆ

Date:

ವಿದ್ಯಾಭ್ಯಾಸದ ಜತೆ ಸಾಧನೆಗೆ ಉದ್ಯೋಗಾಧಾರಿತ ಕೌಶಲ್ಯಗಳನ್ನೂ ರೂಢಿಸಿಕೊಂಡು ಯಶಸ್ವಿ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಗದಗ ಜಿಲ್ಲೆಯ ಮುಳಗುಂದ ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ದೇಶಪಾಂಡೆ ಹೇಳಿದರು.

ಪಟ್ಟಣದ ಎನ್ ದೇಶಪಾಂಡೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25ನೇ ಸಾಲಿನ ಶೈಕ್ಷಣಿಕ ಸಾಲಿನ ವಿವಿಧ ಚಟುವಟಿಕೆಗಳ ಉದ್ಘಾಟನೆ ಮಾಡಿ ಮಾತನಾಡಿದರು.

“ಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಹಾಗೂ ವಿವಿಧ ಕೌಶಲ್ಯಗಳನ್ನು ಕರಗತಗೊಳಿಸಿಕೊಂಡರೆ ಜೀವನದ ಹಾದಿ ಸುಗಮವಾಗುತ್ತದೆ” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಕ್ಷ್ಮೀಶ್ವರ ಸರ್ಕಾರಿ ಪದವಿ ಪೂರ್ವ ಮಾಹಾವಿದ್ಯಾಲಯದ ಉಪನ್ಯಾಸಕ ಬಸವಣ್ಣೆಪ್ಪ ಮುರಳಿಹಳ್ಳಿ ಮಾತನಾಡಿ, “ಸಾಧನೆಗೆ ಅಂಗವೈಕಲ್ಯ, ಬಡತನ ಅಡ್ಡಿ ಬರುವುದಿಲ್ಲ. ಸಾಧಿಸುವ ಛಲ, ಗುರಿ, ಯಶಸ್ಸಿನ ಮನೋಭಾವ, ಯೋಚನಾ ಶಕ್ತಿ, ಗಟ್ಟಿ ನಿರ್ಧಾರ ವಿದ್ಯಾರ್ಥಿ ಹಂತದಲ್ಲೇ ರೂಢಿಸಿಕೊಂಡರೆ ಸಾಧನೆ ಸಾಧ್ಯ” ಎಂದರು.

ಪ್ರಾಂಶುಪಾಲ ಡಾ. ಆರ್ ಎಂ ಕಲ್ಲನಗೌಡರ ಅಧ್ಯಕ್ಷತೆ ವಹಿಸಿ ಮಾತನಾಡಿ, “ಮಕ್ಕಳಲ್ಲಿ ಅಫಾರ ಜ್ಞಾನ ಅಡಗಿದೆ. ಅದನ್ನು ಸದ್ವಿನಿಯೋಗ ಮಾಡಿಕೊಳ್ಳಲು ಪದವಿ ಹಂತದಲ್ಲಿ ಸಾಧ್ಯವಾಗುತ್ತದೆ. ಇದರಿಂದ ಉತ್ತಮ ಪ್ರಜೆಗಳಾಗಿ ಹೋರಹೊಮ್ಮಲು ಸಾಧ್ಯವಾಗುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಪಪಂ ಸದಸ್ಯ ಎಸ್ ಸಿ ಬಡ್ಡಿ, ಪ್ರಸನ್ನ ಎಸ್, ಅನುಪಮ, ಜಾನಕಿ ಮರಾಠ, ತಾರಾದೇವಿ, ವಿನಾಯಕ ಶಿರಬಡಿಗಿ, ಗೀತಾಂಜಲಿ ಸೇರಿದಂತೆ ಬೋಧಕೇತರ ಮತ್ತು ಅತಿಥಿ ಉಪನ್ಯಾಸಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...