ಗದಗ | ಸೂರ್ಯಕಾಂತಿ ಕಳಪೆ ಬಿತ್ತನೆ ಬೀಜ ವಿತರಣೆ; ಕಂಗಾಲಾದ ರೈತರು

Date:

ಮುಂಗಾರು ಮಳೆಯಾಗದೆ ರೈತರು ಕಂಗಾಲಾಗಿದ್ದಾರೆ. ಬರದ ಆತಂಕ ಎದುರಾಗಿದೆ. ಈ ನಡುವೆ, ಕಳಪೆ ಬಿತ್ತನೆ ಬೀಜದಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ರೈತರು ಸಿಲುಕಿದ್ದಾರೆ. ಸೂರ್ಯಕಾಂತಿ ಬೆಳೆಯುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ರೈತರು ಬಿತ್ತನೆ ಬೀಜ ಮಾರಾಟ ಕಂಪನಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ.

ತಾಲೂಕಿನ ಹೆಚ್ಚಿನ ರೈತರು ಸೂರ್ಯಕಾಂತಿ ಬೆಳೆ ಬೆಳೆಯುತ್ತಾರೆ. ಅಂತೆಯೇ, ಈ ವರ್ಷವೂ ಕೆಲವು ಬಿತ್ತನೆ ಬೀಜ ಮಾರಾಟ ಕಂಪನಿಗಳಿಂದ ಸೂರ್ಯಕಾಂತಿ ಬಿತ್ತನೆ ಬೀಜ ಖರೀದಿಸಿ, ಬಿತ್ತನೆ ಮಾಡಿದ್ದರು. ಆದರೆ, ಕಳಪೆ ಬೀಜಗಳಿಂದಾಗಿ, ಉತ್ತಮ ಬೆಳೆ ಬಾರದೆ, ನಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಖಾಸಗಿ ಬಿತ್ತನೆ ಬೀಜ ಮಾರಾಟ ಕಂಪನಿಯಿಂದ ತಾಲೂಕಿನ ಬರದೂರು, ಮೇವುಂಡಿ, ಹೈತಾಪುರ, ಡಂಬಳ, ಹಳ್ಳಿಕೇರಿ, ಹಳ್ಳಿಗುಡಿ, ಕದಾಂಪುರ, ಶಿರೋಳ, ಮುರುಡಿ, ಮಕ್ತುಂಪುರ ಮೊದಲಾದ ಗ್ರಾಮಗಳ ರೈತರು ಸೂರ್ಯಕಾಂತಿ ಬಿತ್ತನೆ ಬೀಜಗಳನ್ನು ಖರೀದಿಸಿದ್ದರು. ಸೂರ್ಯಕಾಂತಿ ಗಿಡಗಳು ಚೆನ್ನಾಗಿಯೇ ಬೆಳೆದಿದ್ದರೂ, ಹೂವು ಕಾಯಿಗಟ್ಟು ಸಮಯದಲ್ಲಿ ಕಾಳುಗಳ ಬದಲಾಗಿ, ಹುಲ್ಲಿನ ಎಲೆಗಳು ಮೂಡಿವೆ. ಸೂರ್ಯಕಾಂತಿ ತೆನೆಗಟ್ಟದೇ ಇರುವುದರಿಂದ ರೈತರು ಕಂಗಾಲಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಕೆ.ಜಿ ಸೂರ್ಯಕಾಂತಿ ಬೀಜಕ್ಕೆ 2,000ರಿಂದ 2,500 ರೂ. ಭರಿಸಿ, ಬೀಜ ಖರಿಸಿದ್ದ ರೈತರು, ಎಕರೆಗಟ್ಟಲೆ ಭೂಮಿಯನ್ನು ಉತ್ತು, ಬಿತ್ತನೆ ಮಾಡಿದ್ದರು. ಒಂದು ಎಕರೆ ಬಿತ್ತನೆ ಮಾಡಲು ರೈತ ಸುಮಾರು 20,000 ರೂ. ಖರ್ಚು ಮಾಡಿದ್ದ ರೈತರಿಗೆ, ಹಾಕಿದ್ದ ಬಂಡವಾಳವೂ ಕೈಸೇರದಂತಾಗಿದೆ. ನಷ್ಟದ ಸುಳಿಗೆ ಸಿಲುಕಿಕೊಂಡಿದ್ದಾರೆ.

ಈ ಮುಂಗಾರು ಹಂಗಾಮಿನಲ್ಲಿ ತಾಲೂಕಿನಾದ್ಯಂತ ಒಟ್ಟು 7,000 ಹೆಕ್ಟೇರ್ ಸೂರ್ಯಕಾಂತಿ ಬಿತ್ತನೆ ಮಾಡುವ ಗುರಿಯನ್ನು ಕೃಷಿ ಇಲಾಖೆ ಹೊಂದಿತ್ತು. ಆದರೆ, ಸುಮಾರು 5,000 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಅಂದಾಜಿಸಲಾಗಿದೆ. ಈ ಪೈಕಿ, 2,000 ಹೆಕ್ಟೇರ್‌ ಪ್ರದೇಶದಲ್ಲಿ ಕಳಪೆ ಬೀಜಗಳ ಬಿತ್ತನೆಯಾಗಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ್, “ರೈತರಿಗೆ ಮೋಸ ಮಾಡಿರುವ ಕಂಪನಿವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅವಕಾಶವಿದೆ. ಕಂಪನಿ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...