ಗದಗ | ಪ್ರತಿಭೆ ಯಾರ ಸ್ವತ್ತೂ ಅಲ್ಲ: ಮಹಾಂತೇಶ ಕವಟಗಿಮಠ

Date:

ಕಲಾ ನಿಖಾಯದ ಬಹುತೇಕ ವಿದ್ಯಾರ್ಥಿಗಳು ಹಿಂಜರಿಕೆ, ಕೀಳರಿಮೆಗಳಿಂದ ಬಳಲುತ್ತಿದ್ದು, ಅದರಿಂದ ಹೊರಬಂದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಲ್ಲಿ ಉಜ್ವಲವಾದ ಭವಿಷ್ಯವಿದೆ. ಇಂತಹ ಮಹತ್ಕಾರ್ಯಕ್ಕೆ ದರ್ಶನ-2023 ವಸ್ತು ಪ್ರದರ್ಶನ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ನಿರ್ದೇಶಕ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ತಿಳಿಸಿದರು.

ಗದಗ ನಗರದ ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಜರುಗಿದ ದರ್ಶನ 2023 ವಸ್ತು ಪ್ರದರ್ಶನದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.

“ವಿಜ್ಞಾನ ವಿಷಯಗಳಲ್ಲಿ ಮಾತ್ರ ಪ್ರದರ್ಶನ ಏರ್ಪಡಿಸಿರುವುದು ಈವರೆಗೆ ನಡೆದು ಬಂದಿರುವ ಪದ್ದತಿ. ಆದರೆ ಮಹಾವಿದ್ಯಾಲಯವು ಕಲಾ ಮತ್ತು ವಾಣಿಜ್ಯ ವಿಷಯದಲ್ಲಿಯೂ ಪ್ರದರ್ಶನ ಏರ್ಪಡಿಸಿ ಹೊಸ ಮಾದರಿಯೊಂದನ್ನು ರೂಪಿಸಿದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಲ್ಲಿ, ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಸಾಮರಸ್ಯ ಬೆಳಸುವಲ್ಲಿಯೂ ಇಂತಹ ಪ್ರದರ್ಶನಗಳ ಪಾತ್ರ ಹಿರಿದಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ವಸ್ತು ಪ್ರದರ್ಶನ ಮಾಡಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು

“ವಸ್ತು ಪ್ರದರ್ಶನ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿನ ಸೃಜನಶೀಲತೆಗೆ ಪೂರಕವಾದ ಬೆಳವಣಿಗೆಯಾಗಿದೆ. ದೇವರು ಪ್ರತಿಯೊಬ್ಬ ವ್ಯಕ್ತಿಯನ್ನೂ ಈ ಭೂಮಿಗೆ ಕಳುಹಿಸಬೇಕಾದರೆ ಯಾರನ್ನೂ ಬರಿಗೈಯಿಂದ ಕಳುಹಿಸಿಲ್ಲ. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಒಂದು ಕೌಶಲ್ಯ ಅಡಗಿಸಿರುತ್ತಾನೆ. ಅದನ್ನು ಹೊರತಂದು ಸಾರ್ವತ್ರಿಕಗೊಳಿಸುವ ಕೆಲಸ ಇಂತಹ ಪ್ರದರ್ಶನಗಳು ಮಾಡಬೇಕು. ಭಾಷೆ, ಕಲೆ, ಸಮಾಜದಲ್ಲಿಯೂ ವಿಜ್ಞಾನದ ಅಂಶಗಳಿವೆ. ಅವುಗಳನ್ನು ಅರ್ಥೈಸುವ ಕೆಲಸ ಆಗಬೇಕು. ಈ ದೇಶವನ್ನು ಕೇವಲ ವಿಜ್ಞಾನಿಗಳು, ವೈದ್ಯರು, ಎಂಜಿನಿಯರ್‌ಗಳು ಮಾತ್ರ ಕಟ್ಟಲು ಸಾಧ್ಯವಿಲ್ಲ. ಸಾಹಿತಿ, ಇತಿಹಾಸಕಾರ, ಅರ್ಥಶಾಸ್ತ್ರಜ್ಞರೂ ಮುಖ್ಯ. ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೂ ಉಜ್ವಲ ಭವಿಷ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 58 ತಂಡಗಳಲ್ಲಿ ದರ್ಶನ-2023 ಕಲಾ ಮತ್ತು ವಾಣಿಜ್ಯ ವಸ್ತು ಪ್ರದರ್ಶನದ ವಿಜೇತರನ್ನು ಘೋಷಿಸಿದರು.

ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಹಾವೇರಿ ಪ್ರಥಮ ಸ್ಥಾನ ಗಳಿಸಿದ್ದು, ₹10,000 ನಗದು ಬಹುಮಾನ ಮತ್ತು ಪ್ರಮಾಣ ಪತ್ರ ತನ್ನದಾಗಿಸಿಕೊಂಡಿತು. ಕೆಎಲ್‌ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಗದಗ ಎರಡನೇ ಸ್ಥಾನ ಗಳಿಸಿದ್ದು, ₹5,೦೦೦ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ಪಡೆದುಕೊಂಡಿತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಸ್ಎಫ್ಐ ನಿಯೋಗದಿಂದ ಪರಿಶಿಷ್ಟ ಪಂಗಡ ನಿರ್ದೇಶಕರ ಭೇಟಿ

ಹಲವು ಮಹಾವಿದ್ಯಾಲಯಗಳ ಹತ್ತು ತಂಡಗಳಿಗೆ ತಲಾ ₹2,000 ನಗದನ್ನು ಸಮಾಧಾನಕರ ಬಹುಮಾನವಾಗಿ ಹಾಗೂ ಪ್ರಮಾಣಪತ್ರ ವಿತರಿಸಿದರು. ಭಾಗವಹಿಸಿದ ತಂಡಗಳ ಎಲ್ಲ ಸದಸ್ಯರಿಗೂ ಪ್ರಮಾಣಪತ್ರ ನೀಡಿದರು.

ಮಹಾ ವಿದ್ಯಾಲಯದ ಪ್ರಾಚಾರ್ಯ ಡಾ. ಎ ಕೆ ಮಠರವರು ಮಾತನಾಡಿ, ಪ್ರದರ್ಶನದ ಯಶಸ್ಸಿಗೆ ದುಡಿದ ಎಲ್ಲ ಮಹಾ ವಿದ್ಯಾಲಯದ ಸಿಬ್ಬಂದಿಗಳಿಗೆ, ವಿದ್ಯಾರ್ಥಿಗಳಿಗೆ, ಆಗಮಿಸಿದ ಅತಿಥಿಗಳಿಗೆ, ತೀರ್ಪುಗಾರರಿಗೆ ಧನ್ಯವಾದಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಅಧ್ಯಕ್ಷ ರಜನಿ ಪಾಟೀಲ, ಸದಸ್ಯ ಮೃತ್ಯುಂಜಯ ಸಂಕೇಶ್ವರ, ಐಕ್ಯೂಎಸಿ ಸಂಚಾಲಕಿ ಡಾ. ವೀಣಾ ಈ. ಹಾಗೂ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಬೇರೆ ಬೇರೆ ಮಹಾವಿದ್ಯಾಲಯಗಳ ನೂರಾರು ವಿದ್ಯಾರ್ಥಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...