ಗದಗ | ಒಳಮೀಸಲಾತಿ ಜಾರಿಗೆ ಆಗ್ರಹಿಸಿ ತಮಟೆ ಚಳವಳಿ

Date:

ಸುಪ್ರೀಂ ಕೋರ್ಟಿನ ಸಂವಿಧಾನ ಪೀಠವು ಒಳಮೀಸಲಾತಿಯನ್ನು ಜಾರಿಮಾಡುವ ಅಧಿಕಾರವನ್ನು ಆಯಾ ರಾಜ್ಯಗಳಿಗೆ ಕೊಡುವ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ತೀರ್ಪು ಬಂದು ನಾಲ್ಕು ತಿಂಗಳಾದರೂ ಕರ್ನಾಟಕ ಸರ್ಕಾರ ಆಮೆಗತಿಯಲ್ಲಿ ಸಾಗಿದೆ. ಕಾಟಾಚಾರಕ್ಕೆ ನ್ಯಾ. ನಾಗಮೋಹನದಾಸ ಆಯೋಗ ರಚಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ ಎಂದು ಡಿಎಸ್‌ಎಸ್ ನರಗುಂದ ತಾಲೂಕು ಸಂಚಾಲಕ ದತ್ತು ಜೋಗನ್ನವರ ಅಸಮಾಧಾನ ವ್ಯಕ್ತಪಡಿಸಿದರು.

ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಒಳಮೀಸಲಾತಿ ಕೂಡಲೇ ಜಾರಿಗೆ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ಒಕ್ಕೂಟದಿಂದ ನರಗುಂದ ಶಾಸಕರ ಮನೆ ಮುಂದೆ ತಮಟೆ ಚಳವಳಿ ನಡೆಸಿ ಶಾಸಕ ಸಿ ಸಿ ಪಾಟೀಲ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಎರಡು ತಿಂಗಳಲ್ಲಿ ಆಯೋಗ ವರದಿ ಕೊಡುತ್ತದೆಂದು ಸರ್ಕಾರ ಹೇಳಿತ್ತು. ಆದರೆ 45 ದಿನವಾದರೂ ಆಯೋಗ ಕೆಲಸ ಆರಂಭಿಸಿಲ್ಲ. ಆಯೋಗಕ್ಕೆ ಬೇಕಾದ ಕಚೇರಿ, ಸಿಬ್ಬಂದಿ, ಹಣಕಾಸಿನ ನೆರವು ನೀಡದೆ ಕಾಲಹರಣ ನಡೆಸುತ್ತಿದೆ. ಆಯೋಗ ರಚಿಸಬೇಕೆನ್ನುವುದು ಮಾದಿಗ ಸಮಾಜದ ಯಾರೊಬ್ಬರ ಬೇಡಿಕೆಯೂ ಆಗಿರಲಿಲ್ಲ. ಸರ್ಕಾರದ ಮುಂದೆ ನ್ಯಾ. ಸದಾಶಿವ ಆಯೋಗ‌, ಮಾಧುಸ್ವಾಮಿ ಸಮಿತಿ ವರದಿಯಿದೆ. ಮಾಧುಸ್ವಾಮಿಯವರ ಸಮಿತಿ ಯಾಕೆ(ಆದಿಕರ್ನಾಟಕ) (ಆದಿದ್ರಾವಿಡ) ಸಮಸ್ಯೆಗೆ ಪರಿಹಾರ ಒದಗಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2011ರ ಜನಗಣತಿಯ ಅಂಕಿ ಅಂಶಗಳ ಆಧಾರದಲ್ಲಿ ವರ್ಗೀಕರಣ ಮಾಡಿದೆ. ಈಗ ಮತ್ತೆ ನ್ಯಾ. ನಾಗಮೋಹನದಾಸ ಆಯೋಗಕ್ಕೆ ಅದೇ ಕೆಲಸವನ್ನು ಕೊಡಲಾಗಿದೆ. ಸರ್ಕಾರದ ಈ ನಿಧಾನಗತಿಯ ನಿರ್ಲಕ್ಷ್ಯದ ಧೋರಣೆ ನೋಡಿದರೆ ಇವರಿಗೆ ಅವಕಾಶ ವಂಚಿತ ದಲಿತ ಸಮುದಾಯಗಳಿಗೆ ಒಳಮೀಸಲಾತಿ ಕೊಡುವ ಮನಸ್ಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಒಳಮೀಸಲಾತಿ ಜಾರಿಯಾಗುವವರಿಗೆ ಸರ್ಕಾರ ಯಾವುದೇ ಉದ್ಯೋಗ ನೇಮಕಾತಿ ಮಾಡುವುದಿಲ್ಲವೆಂದು ಭರವಸೆ ಕೊಟ್ಟಿತ್ತು. ಆದರೆ ಈ ಭರವಸೆ ಜಾರಿಯಾಗಿಲ್ಲ. ನೇಮಕಾತಿಯ ಘೋಷಣೆಗಳು ವಿವಿಧ ಇಲಾಖೆಗಳಿಂದ ಬರುತ್ತಲೇ ಇವೆ. ಹಾಗಾಗಿ ಬೆಳಗಾವಿಯಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶಕ್ಕೆ ಕರೆ ಕೊಡಲಾಗಿದೆ” ಎಂದರು.

ಈ ಸುದೆದಿ ಓದಿದ್ದೀರಾ? ಗಜೇಂದ್ರಗಡ | ಬೀದಿಬದಿ ವ್ಯಾಪಾರಸ್ಥರ ತಾಲೂಕು ಸಮಾವೇಶ

“ಹರಿಯಾಣದ ಬಿಜೆಪಿ ಸರ್ಕಾರ ಸುಪ್ರ ಕೋರ್ಟಿನ ತೀರ್ಪು ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿಮಾಡಿದೆ. ಆದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಬ‌ದ್ಧತೆ ತೋರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಅಧಿಕಾರಕ್ಕೆ ಬಂದ ಮೊದಲ ವಾರದಲ್ಲೇ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಹೇಳಿ ಅಧಿಕಾರ ಹಿಡಿದ ಕಾಂಗ್ರೆಸ್ ನಾಯಕರು ಮಾದಿಗ ಜನತೆಗೆ ವಿಶ್ವಾಸ ದ್ರೋಹ ಎಸಗಿದ್ದಾರೆ” ಎಂದು ದತ್ತು ಜೋಗಣ್ಣವರ ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿಯ ವಿಷಯವನ್ನು ಪ್ರಸ್ತಾಪಿಸಿ ಬೆಂಬಲ ಸೂಚಿಸಿ ಜಾರಿಗೆ ತರಬೇಕು” ಎಂದು ಒತ್ತಾಯಿಸಿದರು.

ತಮಟೆ ಚಳವಳಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮುಖಂಡರು, ಹೋರಾಟಗಾರರು, ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...