ಗದಗ | ತಹಸೀಲ್ದಾರ್ ಲಿಖಿತ ಭರವಸೆ; ಬಗರ್ ಹುಕುಂ ಅನಿರ್ದಿಷ್ಟವಧಿ ಧರಣಿ ಮುಕ್ತಾಯ

Date:

“ಕಳೆದ ಮೂರು ದಿನಗಳಿಂದ ತಹಶಿಲ್ದಾರ ಕಚೇರಿ ಮುಂಭಾಗದಲ್ಲಿ ನಡೆದ ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ, ಸಾಗುವಳಿ ಚೀಟಿಗಾಗಿ ಒತ್ತಾಯಿಸಿ ನಡೆದ ಅನಿರ್ದಿಷ್ಟವಧಿ ಧರಣಿ ಸತ್ಯಾಗ್ರಹ ಲಿಖಿತ ಭರವಸೆ ನೀಡಿದ ಬಳಿಕ ಸಾಂಕೇತಿಕವಾಗಿ ಮೊಟುಕುಗೊಳಿಸಲಾಯಿತು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ತಹಸೀಲ್ದಾರ ಕಛೇರಿ ಆವರಣದಲ್ಲಿ ಬಗರ್ ಹುಕುಂ ಸಾಗುವಳಿದಾರರು ಹಕ್ಕು ಪತ್ರ ನೀಡುವಂತೆ ಅನಿರ್ದಿಷ್ಟವಾಧಿ ಧರಣಿ ಸ್ಥಳಕ್ಕೆ ಬಗರ್ ಹುಕುಂ ಸಮಿತಿ ಕಾರ್ಯದರ್ಶಿ ಆಗಿರುವ ತಹಶಿಲ್ದಾರ ಕಿರಣಕುಮಾರ ಕುಲಕರ್ಣಿ ಅವರು, “ಬಗರ್ ಹುಕುಂ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು, ಹೋರಾಟಗಾರರ ಸಮಕ್ಷಮದಲ್ಲಿ ಚರ್ಚೆ ನಡೆಸಿ, ಅಕ್ಟೊಬರ್ ಮೊದಲ ವಾರದಲ್ಲಿ ಸಭೆ ಕರೆಯಲಾಗುವುದು. ಅರ್ಜಿಗಳನ್ನು ಪರಿಶೀಲಿಸಿ, ಸಾಗುವಳಿ ಚೀಟಿ, ಹಕ್ಕುಪತ್ರ ನೀಡುವ ಕುರಿತು ತ್ವರಿತಗತಿಯಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಮುಂದಾಗುತ್ತೇವೆ. ಆ ಸಭೆಗೆ ಎಸಿ ಅವರನ್ನು ಕೂಡಾ ಬರಲು ತಿಳಿಸುತ್ತೇವೆ” ಎಂದು ಲಿಖಿತ ಭರವಸೆ ನೀಡಿದರು.

ತಾಲೂಕು ಕಾರ್ಯದರ್ಶಿ ಎಂ.ಎಸ್‌.ಹಡಪದ ಮಾತನಾಡಿ, “ಲಿಖಿತ ಭರವಸೆ ನೀಡಿದ ಮಾತ್ರಕ್ಕೆ ಹೋರಾಟ ನಿಲ್ಲುವುದಿಲ್ಲ  ಮೂಗಿಗೆ ತುಪ್ಪ ಹಚ್ಚುವ ಬದಲಾಗಿ ಕಾಲಾವಕಾಶ ತೆಗೆದುಕೊಂಡಿರುವ ತಾಲೂಕಾಡಳಿತ ಸಾಗುವಳಿ ಮಾಡುವ ಬಗ್ಗೆ ಸ್ಥಳ ಪರಿಶೀಲನೆ, ಅರ್ಜಿ ಪರಿಶೀಲನೆ ಕಾರ್ಯಗಳನ್ನು ಮಾಡಬೇಕು. ಜೊತೆಗೆ ಸೆಪ್ಟೆಂಬರ್ 30 ರಂದು ಸಭೆ ಕರೆಯುವ ಬಗ್ಗೆ ನೋಟಿಸ್ ನೀಡಬೇಕು. ಇಲ್ಲವಾದ್ರೆ ಅಕ್ಟೋಬರ್ ೨ ರಂದು ಪುನಃ ಧರಣಿ ಸತ್ಯಾಗ್ರಹ ಯಾಥಾಸ್ಥಿತಿ ಮುಂದುವರೆಯಲಿದೆ. ಹೋರಾಟದ ಸ್ವರೂಪ ತೀವ್ರವಾಗಿರಲಿದೆ” ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೋರಾಟವನ್ನು ಬೆಂಬಲಿಸಿ ರಾಜ್ಯ ಉಪಾಧ್ಯಕ್ಷ ಜಿ.ನಾಗರಾಜ್, ಡಿವಾಯ್ಎಫ್ಐ ಮುಖಂಡ ದಾವಲಸಾಬ ತಾಳಿಕೋಟಿ, ಬೀದಿ ಬದಿ ವ್ಯಾಪಾರಸ್ಥರ ಅಧ್ಯಕ್ಷ ಶಾಮಿದಲಿ ದಿಂಡವಾಡ ಮಾತನಾಡಿದರು.

ಮೂರು ದಿನಗಳಿಂದ ಹೋರಾಟ ನಡೆಸಿದ ರೈತರಿಗೆ ಹಾಗೂ ಮುಖಂಡರಿಗೆ ಬೀದಿ ಬದಿ ವ್ಯಾಪಾರಸ್ಥರು ಹೂ, ಹಣ್ಣು ವಿತರಿಸಿ ಕೆ.ಕೆ.ವೃತ್ತದಲ್ಲಿ ಗೌರವಿಸಿದರು.

ಧರಣಿ ಸತ್ಯಾಗ್ರಹದಲ್ಲಿ ರೈತ ಸಂಘದ ಅಧ್ಯಕ್ಷ ರೂಪೇಶ ಮಾಳೋತ್ತರ ,ಚೆನ್ನಪ್ಪ ಗುಗಲೋತ್ತರ,  ಬಾಲು ರಾಠೋಡ, ಪೀರು, ರಾಠೋಡ,  , ಮೆಹಬೂಬ್ ಹವಾಲ್ದಾರ್, ಚಂದ್ರು ರಾಠೋಡ, ಗಣೇಶ, ರಾಠೋಡ,  ಆನಂದ ರಾಠೋಡ,  ಸೇರಿದಂತೆ ನೂರಾರು ರೈತರು, ಬೀದಿ ಬದಿ ವ್ಯಾಪಾರಸ್ಥರು, ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...