ಗದಗ | ಸಿಎಂ ಮಂಡಿಸಿದ ಬಜೆಟ್ ರಾಜ್ಯದಲ್ಲಿ ಬದಲಾವಣೆಯ ಪರ್ವ ಪ್ರಾರಂಭಿಸಿದೆ: ಸಚಿವ ಎಚ್.ಕೆ ಪಾಟೀಲ

Date:

ಕರ್ನಾಟಕ ರಾಜ್ಯದ 15ನೇ ಮುಂಗಡ ಪತ್ರವನ್ನು ಮಂಡಿಸಿರುವ ಸಿದ್ದರಾಮಯ್ಯನವರು ಕರ್ನಾಟಕ ಮಾದರಿ ಅಭಿವೃದ್ಧಿಯ ಹೊಸ ದೃಷ್ಠಾಂತವನ್ನು ರೂಪಿಸಿ, ಪುರೋಗಾಮಿ ಮುಂಗಡ ಪತ್ರವನ್ನು ರಾಜ್ಯಕ್ಕೆ ನೀಡಿ ಗುಣಾತ್ಮಕ ಬದಲಾವಣೆಯ ಪರ್ವವನ್ನು ಪ್ರಾರಂಭಿಸಿದ್ದಾರೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ಹೇಳಿದ್ದಾರೆ.

ರಾಜ್ಯದ 1.2ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲಕ್ಕೇತ್ತಿ ಕೆಳ ಮಧ್ಯಮ ವರ್ಗ ಮತ್ತು ಮಧ್ಯಮ ವರ್ಗದ ಮಟ್ಟಕ್ಕೆ ತಂದು ನಿಲ್ಲಿಸಿ, ಸರ್ವೋದಯ ಸಮಾಜದ ಕಲ್ಪನೆಯನ್ನು ಯಥಾವತ್ತಾಗಿ ನೈಜ ರೂಪದಲ್ಲಿ ಅನುಷ್ಠಾನಗೊಳಿಸುವ ಗ್ಯಾರಂಟಿ ಯೋಜನೆಗಳು ಫಲ ನೀಡಲಾರಂಭಿಸಿದ್ದು, ಶ್ಲಾಘನೀಯ ಬೆಳವಣಿಗೆಯಾಗಿದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳು ಪ್ರಶಂಸೆಗೆ ಪಾತ್ರವಾಗಿರುವುದರಿಂದ ದಕ್ಷ ಮತ್ತು ಸಂಕಲ್ಪ ಶಕ್ತಿಯುಳ್ಳ ಕರ್ನಾಟಕ ಸರ್ಕಾರದ ಪ್ರಯತ್ನಗಳು ಕೈಗೂಡಿವೆ. ವಿರೋಧ ಪಕ್ಷಗಳ ಟೀಕೆಗೆ ಸರ್ಕಾರದ ಗ್ಯಾರಂಟಿಗಳ ಪರಿಣಾಮಕಾರಿ ಅನುಷ್ಠಾನವೇ ಗ್ಯಾರಂಟಿಯಾಗಿದೆ.

ಮುಂಗಡ ಪತ್ರದಲ್ಲಿ ಎಲ್ಲಾ ವರ್ಗಗಳ, ಎಲ್ಲಾ ವಲಯಗಳ, ಎಲ್ಲಾ ಭೌಗೋಳಿಕ ಪ್ರದೇಶಗಳ ಸರ್ವಾಂಗೀಣ ಅಭಿವೃದ್ಧಿಯನ್ನು ಪ್ರತಿಪಾದಿಸುವ ಪರಿಣಾಮಕಾರಿ ಅರ್ಥವ್ಯವಸ್ಥೆಯನ್ನು ಅನಾವರಣಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗದಗ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೂ.10.00 ಕೋಟಿಗಳ ವೆಚ್ಚದ ಶೀತಲ ಗೃಹ ನಿರ್ಮಾಣ ಮಾಡುವ ಮೂಲಕ ಹಣ್ಣು-ತರಕಾರಿ ಮಾರುಕಟ್ಟೆಗೆ ದೊಡ್ಡ ಬೆಂಬಲ ದೊರಕಲಿದೆ.

ಗದಗ ಜಿಲ್ಲೆಯ ಜಾಲವಾಡಗಿ ಏತ ನೀರಾವರಿಯನ್ನು ರೂ.7.28 ಕೋಟಿಗಳ ವೆಚ್ಚದಲ್ಲಿ  ಅನುಷ್ಠಾನಗೊಳಿಸಲು, ಶಿರಹಟ್ಟಿ ತಾಲ್ಲೂಕು ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸಲು, ಗದಗ ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ, ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ರೂ.10.00 ಕೋಟಿಗಳ ವೆಚ್ಚದಲ್ಲಿ ಕ್ಯಾತಲ್ಯಾಬ್ ಸೌಲಭ್ಯದೊಂದಿಗೆ ʼಸೂಪರ್ ಸ್ಪೇಷಾಲಿಟಿ ಕಾರ್ಡಿಯಾಕ್ ಯೂನಿಟ್ʼ ಸ್ಥಾಪಿಸುವ ನಿರ್ಣಯ, ಗದಗದಲ್ಲಿ 450 ಹಾಸಿಗೆಯ ಆಸ್ಪತ್ರೆಗೆ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣ ಖರೀದಿಗೆ ಹಣ ಒದಗಿಸಿರುವುದು, ಗದಗದಲ್ಲಿ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲು ನಿರ್ಣಯಿಸಲಾಗಿರುವುದ.

ಗದಗ ಜಿಲ್ಲೆಯ ಕಪ್ಪತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮ ಉತ್ತೇಜಿಸಿರುವುದು, ಗದಗ ಜಿಲ್ಲೆಯ ರೋಣದಲ್ಲಿ ನಬಾರ್ಡ್ ಸಹಯೋಗದೊಂದಿಗೆ ಹೊಸ ಜಿ.ಟಿ.ಟಿ.ಸಿ ಪ್ರಾರಂಭಿಸುವ ಮೂಲಕ, ರೋಣದ ಮಲ್ಲಾಪುರ ರೈಲ್ವೆ ಮೇಲುಸೇತುವೆ ಕಾಮಗಾರಿ ಘೋಷಿಸಿರುವುದು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ವದ ಮತ್ತು ಪರಿಣಾಮಕಾರಿಯಾದ ಅಭಿವೃದ್ಧಿಯ ಶಕೆಯನ್ನು ಪುನರಾರಂಭಿಸುವ ದಿಕ್ಸೂಚಿಯಾಗಿವೆ. ಅತ್ಯಂತ ಅಭಿವೃದ್ಧಿ ಪರ ಮುಂಗಡ ಪತ್ರವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...