ಗದಗ | ದಸರಾ ಉದ್ಘಾಟನೆ ವಿಚಾರ: ಪ್ರತಾಪ್ ಸಿಂಹಗೆ ನ್ಯಾಯಾಲಯವೇ ಛೀಮಾರಿ ಹಾಕಿದೆ; ಸಿಎಂ ಸಿದ್ದರಾಮಯ್ಯ

Date:

“ದಸರಾ ಉದ್ಘಾಟನೆಯನ್ನು ಮಾಡಲಿರುವ ಸಾಹಿತಿ ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡಬಾರದೆಂದು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮಾತ್ರವಲ್ಲ ಸುಪ್ರೀಂ ಕೋರ್ಟಿಗೂ ಹೋಗಿದ್ದರು. ಸುಪ್ರೀಂ ಕೋರ್ಟ್ ಕೂಡ ನಿನ್ನೆ ಛೀಮಾರಿ ಹಾಕಿದೆ”  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಗದಗ ಪಟ್ಟಣದ ಕನಕ ಭವನ ರಾಕೇಶ ಸಿದ್ದರಾಮಯ್ಯ ಸಭಾ ಭವನದಲ್ಲಿ  ಗದಗ ತಾಲ್ಲೂಕು ಕುರುಬರ ಸಂಘ ರಜತ ಮಹೋತ್ಸವ ಸವಿನೆನಪಿಗಾಗಿ ಹಾಗೂ ಸಂಘಜೀವ ಶ್ರೀ ಫಕೀರಪ್ಪ ಹೇಬಸೂರು ಅವರ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

“ಹಿಂದೆ ದಸರಾ ಹಬ್ಬದ ಉದ್ಘಾಟನೆಯನ್ನು ಹಿರಿಯ ಕವಿ ಕೆ. ಎಸ್. ನಿಸಾರ್ ಅಹಮದ್ ಅವರು ಮಾಡಿದ್ದರು. ಅವರ ಸಾಲಿನಲ್ಲಿಯೇ ಪ್ರತಾಪ ಸಿಂಹನು ಕುಳಿತಿದ್ದನು. ಆವಾಗ ವಿರೋಧ ಮಾಡದವನು, ಈಗ ಬಾನು ಮುಸ್ತಾಕ್ ಅವರನ್ನು ದಸರಾ ಉದ್ಘಾಟನೆ ಮಾಡಬಾರದೆಂದು ವಿರೋಧ ವ್ಯಕ್ತಪಡಿಸುತ್ತಿದ್ದಾನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ‌ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.

ಇದನ್ನು ಓದಿದ್ದೀರಾ? ಮಲಯಾಳಂ ನಟ ಮೋಹನ್‌ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಚಿವರಾದ ಎಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಶಾಸಕರಾದ ರಾಘವೇಂದ್ರ ಹಿಟ್ನಾಳ್ , ರಾಕೇಶ್ ಧವನ್ ಸಿದ್ದರಾಮಯ್ಯ ಸೇರಿ ಮಾಜಿ ಸಚಿವರು, ಶಾಸಕರು ಹಾಗೂ ಸಮುದಾಯದ ಮುಖಂಡರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...